ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ […]

ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ
ಸಾಧು ಶ್ರೀನಾಥ್​

Updated on: Dec 21, 2019 | 3:01 PM

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ಒಂದು ವೇಳೆ ಅಂದು ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರಗಳು ಸಿಕ್ಕಿದ್ರೆ ಏನಾಗುತ್ತಿತ್ತು? ಅಲ್ಲಿದ್ದ ಬಂದೂಕುಗಳನ್ನ, ಶಸ್ತ್ರಾಸ್ತ್ರಗಳನ್ನ ಬಳಸಿಕೊಂಡು ಆಗ ದೊಡ್ಡ ಅನಾಹುತವೇ ನಡೆಯುತ್ತಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us