AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಐಸ್​ಕ್ರೀಮ್​ನೊಂದಿಗೆ ಕದ್ದ ಚಿನ್ನ ನುಂಗಿದ್ದ ಕಳ್ಳ; ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದ ವೈದ್ಯರು

ಸುಳ್ಯದ ಮೋಹನ ಜ್ಯುವೆಲರಿಯಲ್ಲಿ ಕಳ್ಳರು ಚಿನ್ನವನ್ನು ಕದ್ದಿದ್ದರು. 180 ಗ್ರಾಂ ಚಿನ್ನ ಮತ್ತು 50,000 ರೂ. ನಗದು ದೋಚಿದ್ದರು. ಈ ಪ್ರಕರಣ ಸಂಬಂಧ ಮ್ಯಾಥ್ಯೂ ಮತ್ತು ಶಿಬು ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದರು. ಪೊಲೀಸರು ಪ್ರಾರಂಭದಲ್ಲಿ 147 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದರು.

ಮಂಗಳೂರು: ಐಸ್​ಕ್ರೀಮ್​ನೊಂದಿಗೆ ಕದ್ದ ಚಿನ್ನ ನುಂಗಿದ್ದ ಕಳ್ಳ; ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದ ವೈದ್ಯರು
ಕದ್ದ ಚಿನ್ನವನ್ನು ನುಂಗಿದ್ದ ವ್ಯಕ್ತಿ, ಹೊಟ್ಟೆಯಿಂದ ಚಿನ್ನವನ್ನು ಹೊರ ತೆಗೆಯಲಾಗಿದೆ
sandhya thejappa
|

Updated on:May 31, 2021 | 2:46 PM

Share

ಮಂಗಳೂರು: ಕಳ್ಳರು ಕದ್ದ ವಸ್ತುಗಳನ್ನು ಎತ್ತುಕೊಂಡು ಆ ಜಾಗದಿಂದ ಕಾಲು ಕೀಳುತ್ತಾರೆ. ಯಾರ ಕೈಗೂ ಸಿಗಬಾರದು ಅಂತ ಪರಾರಿಯಾಗುತ್ತಾರೆ. ಆದರೆ ಒಬ್ಬ ಕಳ್ಳ ಕದ್ದಿರುವ ಚಿನ್ನವನ್ನು ನುಂಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಕೇರಳದ ತ್ರಿಶೂರ್​ನ ಕಳ್ಳ ಶಿಬು ಎಂಬಾತ ಕದ್ದ ಚಿನ್ನವನ್ನು ನುಂಗಿದ್ದಾನೆ. ನುಂಗಿದ್ದ ಸುಮಾರು 35 ಗ್ರಾಂ ಚಿನ್ನವನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ.

ಸುಳ್ಯದ ಮೋಹನ ಜ್ಯುವೆಲರಿಯಲ್ಲಿ ಕಳ್ಳರು ಚಿನ್ನವನ್ನು ಕದ್ದಿದ್ದರು. 180 ಗ್ರಾಂ ಚಿನ್ನ ಮತ್ತು 50,000 ರೂ. ನಗದು ದೋಚಿದ್ದರು. ಈ ಪ್ರಕರಣ ಸಂಬಂಧ ಮ್ಯಾಥ್ಯೂ ಮತ್ತು ಶಿಬು ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದರು. ಪೊಲೀಸರು ಪ್ರಾರಂಭದಲ್ಲಿ 147 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದರು. ಬಂಧನದ ಬಳಿಕ ಶಿಬು ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಶಿಬುನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿಪರೀತ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ಶಿಬುನನ್ನು ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಏಕ್ಸ್ ರೇ ಮಾಡಿದರು. ಏಕ್ಸ್ ರೇ ಮಾಡಿದ ಸಂದರ್ಭ ಹೊಟ್ಟೆಯಲ್ಲಿ ಆಭರಣ ಇರುವುದು ತಿಳಿದುಬಂದಿದೆ. ಬಂಧನದ ಸಂದರ್ಭ ಪೊಲೀಸರಿಂದ ಮರೆಮಾಚುವುದಕ್ಕೆ ಕಳ್ಳ ಚಿನ್ನ ನುಂಗಿದ್ದ. 25 ಕ್ಕೂ ಹೆಚ್ಚು ಉಂಗುರ ನುಂಗಿದ್ದ ಕಳ್ಳನ ಹೊಟ್ಟೆಯಿಂದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ.

ಇದನ್ನೂ ಓದಿ

ಇಡೀ ದಿನ ಮನೆಯಲ್ಲಿಯೇ ಕುಳಿತು ಕೆಲಸ ಮಾಡುತ್ತಿದ್ದೀರಾ? ನಿಮಗಾಗಿ ಈ 3 ಕಿವಿಮಾತು

ಕೊಡಗಿನಲ್ಲಿ ಪ್ರವಾಹದಿಂದ ಸೂರು ಕಳೆದುಕೊಂಡವರಿಗಾಗಿ ಮನೆ ನಿರ್ಮಿಸುತ್ತಿದೆ ಇನ್ಫೋಸಿಸ್ ಫೌಂಡೇಶನ್

(thief swallowed gold that was stolen with ice cream and Doctors have extracted gold by performing surgery)

Published On - 2:45 pm, Mon, 31 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?