AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಐಸ್​ಕ್ರೀಮ್​ನೊಂದಿಗೆ ಕದ್ದ ಚಿನ್ನ ನುಂಗಿದ್ದ ಕಳ್ಳ; ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದ ವೈದ್ಯರು

ಸುಳ್ಯದ ಮೋಹನ ಜ್ಯುವೆಲರಿಯಲ್ಲಿ ಕಳ್ಳರು ಚಿನ್ನವನ್ನು ಕದ್ದಿದ್ದರು. 180 ಗ್ರಾಂ ಚಿನ್ನ ಮತ್ತು 50,000 ರೂ. ನಗದು ದೋಚಿದ್ದರು. ಈ ಪ್ರಕರಣ ಸಂಬಂಧ ಮ್ಯಾಥ್ಯೂ ಮತ್ತು ಶಿಬು ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದರು. ಪೊಲೀಸರು ಪ್ರಾರಂಭದಲ್ಲಿ 147 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದರು.

ಮಂಗಳೂರು: ಐಸ್​ಕ್ರೀಮ್​ನೊಂದಿಗೆ ಕದ್ದ ಚಿನ್ನ ನುಂಗಿದ್ದ ಕಳ್ಳ; ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದ ವೈದ್ಯರು
ಕದ್ದ ಚಿನ್ನವನ್ನು ನುಂಗಿದ್ದ ವ್ಯಕ್ತಿ, ಹೊಟ್ಟೆಯಿಂದ ಚಿನ್ನವನ್ನು ಹೊರ ತೆಗೆಯಲಾಗಿದೆ
sandhya thejappa
|

Updated on:May 31, 2021 | 2:46 PM

Share

ಮಂಗಳೂರು: ಕಳ್ಳರು ಕದ್ದ ವಸ್ತುಗಳನ್ನು ಎತ್ತುಕೊಂಡು ಆ ಜಾಗದಿಂದ ಕಾಲು ಕೀಳುತ್ತಾರೆ. ಯಾರ ಕೈಗೂ ಸಿಗಬಾರದು ಅಂತ ಪರಾರಿಯಾಗುತ್ತಾರೆ. ಆದರೆ ಒಬ್ಬ ಕಳ್ಳ ಕದ್ದಿರುವ ಚಿನ್ನವನ್ನು ನುಂಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಕೇರಳದ ತ್ರಿಶೂರ್​ನ ಕಳ್ಳ ಶಿಬು ಎಂಬಾತ ಕದ್ದ ಚಿನ್ನವನ್ನು ನುಂಗಿದ್ದಾನೆ. ನುಂಗಿದ್ದ ಸುಮಾರು 35 ಗ್ರಾಂ ಚಿನ್ನವನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ.

ಸುಳ್ಯದ ಮೋಹನ ಜ್ಯುವೆಲರಿಯಲ್ಲಿ ಕಳ್ಳರು ಚಿನ್ನವನ್ನು ಕದ್ದಿದ್ದರು. 180 ಗ್ರಾಂ ಚಿನ್ನ ಮತ್ತು 50,000 ರೂ. ನಗದು ದೋಚಿದ್ದರು. ಈ ಪ್ರಕರಣ ಸಂಬಂಧ ಮ್ಯಾಥ್ಯೂ ಮತ್ತು ಶಿಬು ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದರು. ಪೊಲೀಸರು ಪ್ರಾರಂಭದಲ್ಲಿ 147 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದರು. ಬಂಧನದ ಬಳಿಕ ಶಿಬು ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಶಿಬುನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿಪರೀತ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ಶಿಬುನನ್ನು ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಏಕ್ಸ್ ರೇ ಮಾಡಿದರು. ಏಕ್ಸ್ ರೇ ಮಾಡಿದ ಸಂದರ್ಭ ಹೊಟ್ಟೆಯಲ್ಲಿ ಆಭರಣ ಇರುವುದು ತಿಳಿದುಬಂದಿದೆ. ಬಂಧನದ ಸಂದರ್ಭ ಪೊಲೀಸರಿಂದ ಮರೆಮಾಚುವುದಕ್ಕೆ ಕಳ್ಳ ಚಿನ್ನ ನುಂಗಿದ್ದ. 25 ಕ್ಕೂ ಹೆಚ್ಚು ಉಂಗುರ ನುಂಗಿದ್ದ ಕಳ್ಳನ ಹೊಟ್ಟೆಯಿಂದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ.

ಇದನ್ನೂ ಓದಿ

ಇಡೀ ದಿನ ಮನೆಯಲ್ಲಿಯೇ ಕುಳಿತು ಕೆಲಸ ಮಾಡುತ್ತಿದ್ದೀರಾ? ನಿಮಗಾಗಿ ಈ 3 ಕಿವಿಮಾತು

ಕೊಡಗಿನಲ್ಲಿ ಪ್ರವಾಹದಿಂದ ಸೂರು ಕಳೆದುಕೊಂಡವರಿಗಾಗಿ ಮನೆ ನಿರ್ಮಿಸುತ್ತಿದೆ ಇನ್ಫೋಸಿಸ್ ಫೌಂಡೇಶನ್

(thief swallowed gold that was stolen with ice cream and Doctors have extracted gold by performing surgery)

Published On - 2:45 pm, Mon, 31 May 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ