AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಐಸ್​ಕ್ರೀಮ್​ನೊಂದಿಗೆ ಕದ್ದ ಚಿನ್ನ ನುಂಗಿದ್ದ ಕಳ್ಳ; ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದ ವೈದ್ಯರು

ಸುಳ್ಯದ ಮೋಹನ ಜ್ಯುವೆಲರಿಯಲ್ಲಿ ಕಳ್ಳರು ಚಿನ್ನವನ್ನು ಕದ್ದಿದ್ದರು. 180 ಗ್ರಾಂ ಚಿನ್ನ ಮತ್ತು 50,000 ರೂ. ನಗದು ದೋಚಿದ್ದರು. ಈ ಪ್ರಕರಣ ಸಂಬಂಧ ಮ್ಯಾಥ್ಯೂ ಮತ್ತು ಶಿಬು ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದರು. ಪೊಲೀಸರು ಪ್ರಾರಂಭದಲ್ಲಿ 147 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದರು.

ಮಂಗಳೂರು: ಐಸ್​ಕ್ರೀಮ್​ನೊಂದಿಗೆ ಕದ್ದ ಚಿನ್ನ ನುಂಗಿದ್ದ ಕಳ್ಳ; ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದ ವೈದ್ಯರು
ಕದ್ದ ಚಿನ್ನವನ್ನು ನುಂಗಿದ್ದ ವ್ಯಕ್ತಿ, ಹೊಟ್ಟೆಯಿಂದ ಚಿನ್ನವನ್ನು ಹೊರ ತೆಗೆಯಲಾಗಿದೆ
sandhya thejappa
sandhya thejappa|

Updated on:May 31, 2021 | 2:46 PM

Share

ಮಂಗಳೂರು: ಕಳ್ಳರು ಕದ್ದ ವಸ್ತುಗಳನ್ನು ಎತ್ತುಕೊಂಡು ಆ ಜಾಗದಿಂದ ಕಾಲು ಕೀಳುತ್ತಾರೆ. ಯಾರ ಕೈಗೂ ಸಿಗಬಾರದು ಅಂತ ಪರಾರಿಯಾಗುತ್ತಾರೆ. ಆದರೆ ಒಬ್ಬ ಕಳ್ಳ ಕದ್ದಿರುವ ಚಿನ್ನವನ್ನು ನುಂಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಕೇರಳದ ತ್ರಿಶೂರ್​ನ ಕಳ್ಳ ಶಿಬು ಎಂಬಾತ ಕದ್ದ ಚಿನ್ನವನ್ನು ನುಂಗಿದ್ದಾನೆ. ನುಂಗಿದ್ದ ಸುಮಾರು 35 ಗ್ರಾಂ ಚಿನ್ನವನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ.

ಸುಳ್ಯದ ಮೋಹನ ಜ್ಯುವೆಲರಿಯಲ್ಲಿ ಕಳ್ಳರು ಚಿನ್ನವನ್ನು ಕದ್ದಿದ್ದರು. 180 ಗ್ರಾಂ ಚಿನ್ನ ಮತ್ತು 50,000 ರೂ. ನಗದು ದೋಚಿದ್ದರು. ಈ ಪ್ರಕರಣ ಸಂಬಂಧ ಮ್ಯಾಥ್ಯೂ ಮತ್ತು ಶಿಬು ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದರು. ಪೊಲೀಸರು ಪ್ರಾರಂಭದಲ್ಲಿ 147 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದರು. ಬಂಧನದ ಬಳಿಕ ಶಿಬು ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಶಿಬುನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿಪರೀತ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ಶಿಬುನನ್ನು ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಏಕ್ಸ್ ರೇ ಮಾಡಿದರು. ಏಕ್ಸ್ ರೇ ಮಾಡಿದ ಸಂದರ್ಭ ಹೊಟ್ಟೆಯಲ್ಲಿ ಆಭರಣ ಇರುವುದು ತಿಳಿದುಬಂದಿದೆ. ಬಂಧನದ ಸಂದರ್ಭ ಪೊಲೀಸರಿಂದ ಮರೆಮಾಚುವುದಕ್ಕೆ ಕಳ್ಳ ಚಿನ್ನ ನುಂಗಿದ್ದ. 25 ಕ್ಕೂ ಹೆಚ್ಚು ಉಂಗುರ ನುಂಗಿದ್ದ ಕಳ್ಳನ ಹೊಟ್ಟೆಯಿಂದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ.

ಇದನ್ನೂ ಓದಿ

ಇಡೀ ದಿನ ಮನೆಯಲ್ಲಿಯೇ ಕುಳಿತು ಕೆಲಸ ಮಾಡುತ್ತಿದ್ದೀರಾ? ನಿಮಗಾಗಿ ಈ 3 ಕಿವಿಮಾತು

ಕೊಡಗಿನಲ್ಲಿ ಪ್ರವಾಹದಿಂದ ಸೂರು ಕಳೆದುಕೊಂಡವರಿಗಾಗಿ ಮನೆ ನಿರ್ಮಿಸುತ್ತಿದೆ ಇನ್ಫೋಸಿಸ್ ಫೌಂಡೇಶನ್

(thief swallowed gold that was stolen with ice cream and Doctors have extracted gold by performing surgery)

Published On - 2:45 pm, Mon, 31 May 21

Follow Us
sandhya thejappa
sandhya thejappa
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್