AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಪೊಲೀಸರಿಗೆ ಕಳ್ಳರ ಸವಾಲ್

ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈಗ ಕಳ್ಳರದ್ದೇ ತಲೆನೋವಾಗಿದೆ. ಮೇಲಿಂದ ಮೇಲೆ‌ ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚುವುದು ದೊಡ್ಡ ಸವಾಲಾಗಿದೆ‌. ಈ ವರ್ಷದ ಸೆಪ್ಟೆಂಬರ್‌ ಅಂತ್ಯದವರೆಗೆ ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 25 ಕಳ್ಳತನ ಪ್ರಕರಣಗಳು ನಡೆದಿವೆ.

ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಪೊಲೀಸರಿಗೆ ಕಳ್ಳರ ಸವಾಲ್
ಬುದ್ದಿವಂತರ ಜಿಲ್ಲೆ ಉಡುಪಿಯಲ್ಲಿ ಪೊಲೀಸರಿಗೆ ಕಳ್ಳರ ಸವಾಲ್
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 17, 2024 | 9:14 PM

ಉಡುಪಿ, ಅಕ್ಟೋಬರ್​ 17: ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಈಗ ಕಳ್ಳರು (Thieves) ಪೊಲೀಸ್ ವ್ಯವಸ್ಥೆಗೆ ಸವಾಲಾಗಿದ್ದಾರೆ. ಮನೆ, ಅಂಗಡಿ, ವಾಹನ ಹೀಗೆ ಸಿಕ್ಕಸಿಕ್ಕದ್ದನೆಲ್ಲಾ ಕಳವು ಮಾಡುತ್ತಿರುವ ಖದೀಮರ ತಂಡ ಉಡುಪಿ ನಗರ ಠಾಣೆ ಹಾಗೂ ಮಣಿಪಾಲ ಪೊಲೀಸರಿಗೆ ತಲೆನೋವಾಗಿದ್ದಾರೆ. ಚಳ್ಳೆಹಣ್ಣು ತಿನ್ನಿಸುವ ಮೂಲಕ ಪೊಲೀಸರಿಗೆ ಸವಾಲಾಗಿದ್ದರೆ.

ಹೌದು, ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈಗ ಕಳ್ಳರದ್ದೇ ತಲೆನೋವಾಗಿದೆ. ಮೇಲಿಂದ ಮೇಲೆ‌ ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚುವುದು ದೊಡ್ಡ ಸವಾಲಾಗಿದೆ‌. ಈ ವರ್ಷದ ಸೆಪ್ಟೆಂಬರ್‌ ಅಂತ್ಯದವರೆಗೆ ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 25 ಕಳ್ಳತನ ಪ್ರಕರಣಗಳು ನಡೆದಿವೆ. ಅಂಗಡಿಗೆ ನುಗ್ಗಿ ಕಳ್ಳತನ, ಮನೆ ಕಳವು, ಅಪಾರ್ಟ್‌ಮೆಂಟ್‌ಗೆ ನುಗ್ಗಿ ಕಳವು, ಚಿನ್ನ ಕಸಿದು ಪರಾರಿ ಹೀಗೆ ಭಿನ್ನ ಭಿನ್ನ ಮಾದರಿಯ ಲೂಟಿ ನಡೆದಿದೆ.

ಇದನ್ನೂ ಓದಿ: ರಾಯಚೂರು: ಫಸ್ಟ್ ನೈಟ್ ವಿಡಿಯೋ ಮಾಡಿಟ್ಟುಕೊಂಡು ಸರ್ಕಾರಿ ಅಧಿಕಾರಿಯಿಂದ ಪತ್ನಿಗೆ ಬ್ಲ್ಯಾಕ್​ಮೇಲ್

ಇವುಗಳಲ್ಲಿ ಪೊಲೀಸರಿಗೆ ಪತ್ತೆಹಚ್ಚಲು ಸಾಧ್ಯವಾಗಿದ್ದು ಕೇವಲ 3-4 ಪ್ರಕರಣ ಮಾತ್ರ. ಇತ್ತೀಚೆಗಷ್ಟೇ ಉಡುಪಿ ನಗರ ಠಾಣೆಯ ಸಮೀಪವೇ ನಡೆದ ಆರು ಮನೆಯ ದರೋಡೆ ಯತ್ನದಲ್ಲಿ ಎರಡು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ನಿಜಕ್ಕೂ ಜನರನ್ನು ಬೆಚ್ಚಿಬೀಳಿಸಿದೆ. ಈ ಹಿಂದೆ ಬ್ರಹ್ಮಗಿರಿಯ ಅಪಾರ್ಟ್ ಮೆಂಟ್‌ಗೆ ನಾಲ್ಕೈದು ಮಂದಿ ಮುಸುಕುಧಾರಿಗಳು ಕಳವು ಮಾಡಲು ಬಂದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಆದರೆ, ಅವರು ಮುಂದೆಲ್ಲಿ ಹೋದರು ಎಂಬ ಸುಳಿವಿಲ್ಲ. ಈಗ ಪರಿಸ್ಥಿತಿ ಎಲ್ಲಿವರೆಗೆ ಬಂದಿದೆ ಎಂದರೆ ಒಂಟಿ ಮನೆಗಳು ಬಿಡಿ ಅಪಾರ್ಟ್‌ಮೆಂಟ್‌ಗಳೂ ಸುರಕ್ಷಿತವಲ್ಲ ಎಂಬಂತಾಗಿದೆ.

ಹಲವು ವ್ಯಾಪಾರ ಮಳಿಗೆ, ದೇವಸ್ಥಾನದ ಹುಂಡಿ, ಜ್ಯುವೆಲ್ಲರಿ ಮಳಿಗೆ, ಮನೆ, ಬ್ಯಾಂಕ್ ಹೀಗೆ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದರೋಡೆ ಮಾಡಿದ್ದಾರೆ ಚಾಲಾಕಿ ಕಳ್ಳರ ತಂಡ. ಉಡುಪಿ ಹಾಗೂ ಮಣಿಪಾಲ ಭಾಗದಲ್ಲಿ ಕಳವು ನಡೆಸುತ್ತಿರುವ ಹಲವು ಕಳ್ಳರ ತಂಡ ಪ್ರವಾಸಕ್ಕೆ ಹೋದವರ ಮನೆಯನ್ನೇ ಟಾರ್ಗೆಟ್ ಮಾಡುತ್ತಿದೆ. ಕಳೆದ ಆರು ತಿಂಗಳಲ್ಲೇ 20 ಲಕ್ಷ ರೂ. ಮೊತ್ತದ ದರೋಡೆ ಪ್ರಕರಣ ನಡೆದಿದೆ‌. ಇನ್ನು ಬ್ಯಾಂಕ್​ಗಳಲ್ಲೂ ವಿಫಲ ಯತ್ನ ಆದ ಬಳಿಕ ಬರೆದಿಟ್ಟಿದ್ದ ಚೆಕ್ ಗಳನ್ನೂ ಬಿಡುತ್ತಿಲ್ಲ ಕಳ್ಳರ ತಂಡ.

ಇದನ್ನೂ ಓದಿ: ದೇವರ ಭಜನೆ ಮಾಡುತ್ತಿದ್ದ ಮಹಿಳೆಯ ಸರ ಕಿಟಿಕಿಯಿಂದ ಕದ್ದು ಕಳ್ಳ ಪರಾರಿ: ಎಫ್​ಐಆರ ದಾಖಲು

ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಇನ್ನು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ, ಪ್ರತೀ‌ ದಿನ ಪೊಲೀಸ್ ಬೀಟ್, ಗಸ್ತು ವಾಹನ ಸಂಖ್ಯೆ ಹೆಚ್ಚಳ, ಇನ್ಫಾರ್ಮರ್ ಗಳನ್ನ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಿದ್ದಲ್ಲಿ ಪ್ರಕರಣ ಕಡಿಮೆಯಾಗಬಹುದು. ಈ‌ ನಿಟ್ಟಿನಲ್ಲಿ ಪೊಲೀಸರು ಅದ್ಯಾವ ಕ್ರಮ ಕೈಗೊಳ್ತಾರೋ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:13 pm, Thu, 17 October 24

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್