AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಪೊಲೀಸರಿಗೆ ಕಳ್ಳರ ಸವಾಲ್

ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈಗ ಕಳ್ಳರದ್ದೇ ತಲೆನೋವಾಗಿದೆ. ಮೇಲಿಂದ ಮೇಲೆ‌ ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚುವುದು ದೊಡ್ಡ ಸವಾಲಾಗಿದೆ‌. ಈ ವರ್ಷದ ಸೆಪ್ಟೆಂಬರ್‌ ಅಂತ್ಯದವರೆಗೆ ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 25 ಕಳ್ಳತನ ಪ್ರಕರಣಗಳು ನಡೆದಿವೆ.

ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಪೊಲೀಸರಿಗೆ ಕಳ್ಳರ ಸವಾಲ್
ಬುದ್ದಿವಂತರ ಜಿಲ್ಲೆ ಉಡುಪಿಯಲ್ಲಿ ಪೊಲೀಸರಿಗೆ ಕಳ್ಳರ ಸವಾಲ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Oct 17, 2024 | 9:14 PM

Share

ಉಡುಪಿ, ಅಕ್ಟೋಬರ್​ 17: ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಈಗ ಕಳ್ಳರು (Thieves) ಪೊಲೀಸ್ ವ್ಯವಸ್ಥೆಗೆ ಸವಾಲಾಗಿದ್ದಾರೆ. ಮನೆ, ಅಂಗಡಿ, ವಾಹನ ಹೀಗೆ ಸಿಕ್ಕಸಿಕ್ಕದ್ದನೆಲ್ಲಾ ಕಳವು ಮಾಡುತ್ತಿರುವ ಖದೀಮರ ತಂಡ ಉಡುಪಿ ನಗರ ಠಾಣೆ ಹಾಗೂ ಮಣಿಪಾಲ ಪೊಲೀಸರಿಗೆ ತಲೆನೋವಾಗಿದ್ದಾರೆ. ಚಳ್ಳೆಹಣ್ಣು ತಿನ್ನಿಸುವ ಮೂಲಕ ಪೊಲೀಸರಿಗೆ ಸವಾಲಾಗಿದ್ದರೆ.

ಹೌದು, ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈಗ ಕಳ್ಳರದ್ದೇ ತಲೆನೋವಾಗಿದೆ. ಮೇಲಿಂದ ಮೇಲೆ‌ ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚುವುದು ದೊಡ್ಡ ಸವಾಲಾಗಿದೆ‌. ಈ ವರ್ಷದ ಸೆಪ್ಟೆಂಬರ್‌ ಅಂತ್ಯದವರೆಗೆ ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 25 ಕಳ್ಳತನ ಪ್ರಕರಣಗಳು ನಡೆದಿವೆ. ಅಂಗಡಿಗೆ ನುಗ್ಗಿ ಕಳ್ಳತನ, ಮನೆ ಕಳವು, ಅಪಾರ್ಟ್‌ಮೆಂಟ್‌ಗೆ ನುಗ್ಗಿ ಕಳವು, ಚಿನ್ನ ಕಸಿದು ಪರಾರಿ ಹೀಗೆ ಭಿನ್ನ ಭಿನ್ನ ಮಾದರಿಯ ಲೂಟಿ ನಡೆದಿದೆ.

ಇದನ್ನೂ ಓದಿ: ರಾಯಚೂರು: ಫಸ್ಟ್ ನೈಟ್ ವಿಡಿಯೋ ಮಾಡಿಟ್ಟುಕೊಂಡು ಸರ್ಕಾರಿ ಅಧಿಕಾರಿಯಿಂದ ಪತ್ನಿಗೆ ಬ್ಲ್ಯಾಕ್​ಮೇಲ್

ಇವುಗಳಲ್ಲಿ ಪೊಲೀಸರಿಗೆ ಪತ್ತೆಹಚ್ಚಲು ಸಾಧ್ಯವಾಗಿದ್ದು ಕೇವಲ 3-4 ಪ್ರಕರಣ ಮಾತ್ರ. ಇತ್ತೀಚೆಗಷ್ಟೇ ಉಡುಪಿ ನಗರ ಠಾಣೆಯ ಸಮೀಪವೇ ನಡೆದ ಆರು ಮನೆಯ ದರೋಡೆ ಯತ್ನದಲ್ಲಿ ಎರಡು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ನಿಜಕ್ಕೂ ಜನರನ್ನು ಬೆಚ್ಚಿಬೀಳಿಸಿದೆ. ಈ ಹಿಂದೆ ಬ್ರಹ್ಮಗಿರಿಯ ಅಪಾರ್ಟ್ ಮೆಂಟ್‌ಗೆ ನಾಲ್ಕೈದು ಮಂದಿ ಮುಸುಕುಧಾರಿಗಳು ಕಳವು ಮಾಡಲು ಬಂದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಆದರೆ, ಅವರು ಮುಂದೆಲ್ಲಿ ಹೋದರು ಎಂಬ ಸುಳಿವಿಲ್ಲ. ಈಗ ಪರಿಸ್ಥಿತಿ ಎಲ್ಲಿವರೆಗೆ ಬಂದಿದೆ ಎಂದರೆ ಒಂಟಿ ಮನೆಗಳು ಬಿಡಿ ಅಪಾರ್ಟ್‌ಮೆಂಟ್‌ಗಳೂ ಸುರಕ್ಷಿತವಲ್ಲ ಎಂಬಂತಾಗಿದೆ.

ಹಲವು ವ್ಯಾಪಾರ ಮಳಿಗೆ, ದೇವಸ್ಥಾನದ ಹುಂಡಿ, ಜ್ಯುವೆಲ್ಲರಿ ಮಳಿಗೆ, ಮನೆ, ಬ್ಯಾಂಕ್ ಹೀಗೆ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದರೋಡೆ ಮಾಡಿದ್ದಾರೆ ಚಾಲಾಕಿ ಕಳ್ಳರ ತಂಡ. ಉಡುಪಿ ಹಾಗೂ ಮಣಿಪಾಲ ಭಾಗದಲ್ಲಿ ಕಳವು ನಡೆಸುತ್ತಿರುವ ಹಲವು ಕಳ್ಳರ ತಂಡ ಪ್ರವಾಸಕ್ಕೆ ಹೋದವರ ಮನೆಯನ್ನೇ ಟಾರ್ಗೆಟ್ ಮಾಡುತ್ತಿದೆ. ಕಳೆದ ಆರು ತಿಂಗಳಲ್ಲೇ 20 ಲಕ್ಷ ರೂ. ಮೊತ್ತದ ದರೋಡೆ ಪ್ರಕರಣ ನಡೆದಿದೆ‌. ಇನ್ನು ಬ್ಯಾಂಕ್​ಗಳಲ್ಲೂ ವಿಫಲ ಯತ್ನ ಆದ ಬಳಿಕ ಬರೆದಿಟ್ಟಿದ್ದ ಚೆಕ್ ಗಳನ್ನೂ ಬಿಡುತ್ತಿಲ್ಲ ಕಳ್ಳರ ತಂಡ.

ಇದನ್ನೂ ಓದಿ: ದೇವರ ಭಜನೆ ಮಾಡುತ್ತಿದ್ದ ಮಹಿಳೆಯ ಸರ ಕಿಟಿಕಿಯಿಂದ ಕದ್ದು ಕಳ್ಳ ಪರಾರಿ: ಎಫ್​ಐಆರ ದಾಖಲು

ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಇನ್ನು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ, ಪ್ರತೀ‌ ದಿನ ಪೊಲೀಸ್ ಬೀಟ್, ಗಸ್ತು ವಾಹನ ಸಂಖ್ಯೆ ಹೆಚ್ಚಳ, ಇನ್ಫಾರ್ಮರ್ ಗಳನ್ನ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಿದ್ದಲ್ಲಿ ಪ್ರಕರಣ ಕಡಿಮೆಯಾಗಬಹುದು. ಈ‌ ನಿಟ್ಟಿನಲ್ಲಿ ಪೊಲೀಸರು ಅದ್ಯಾವ ಕ್ರಮ ಕೈಗೊಳ್ತಾರೋ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:13 pm, Thu, 17 October 24

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ