ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ: ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಎದೆ‌ನೋವು ಅಂತ ರೋಗಿ ಸೋಗಿನಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಬಂದಿದ್ದ ವ್ಯಕ್ತಿ ಕಳ್ಳತನಕ್ಕೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕಳ್ಳತನಕ್ಕೆ ಬೇಸತ್ತ ರೋಗಿಗಳಿಂದ ಕಳ್ಳನನ್ನು ಹಿಡಿದು ಪೊಲೀಸರಿಗೆ ನೀಡಲಾಗಿದೆ.

ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ: ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಗಿಗಳು
ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ: ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಗಿಗಳು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 17, 2024 | 8:37 PM

ದೇವನಹಳ್ಳಿ, ಸೆಪ್ಟೆಂಬರ್​ 17: ಅದು ಬಡ ರೋಗಿಗಳಿಗಾಗಿ ನಿರ್ಮಾಣ ಮಾಡಿರುವ ಸರ್ಕಾರಿ ಆಸ್ವತ್ರೆ (govt hospital). ಹೀಗಾಗಿ ನಿತ್ಯ ನೂರಾರು ಜನರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ ಕಳೆದ ರಾತ್ರಿ ಸಹ ಎದೆನೋವು ಅಂತ ಆಸ್ಪತ್ರೆಗೆ ಬಂದ ನಕಲಿ ರೋಗಿಯೋರ್ವ ಮಾಡಿದ ಕೆಲಸ ನೋಡಿ ಸಿಬ್ಬಂದಿ ಜೊತೆಗೆ ಜನರು ಸಹ ಬೆಚ್ಚಿ ಬಿದ್ದಿದ್ದು, ಸರಿಯಾಗಿ ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ರೋಗಿಯ ಸೋಗಿನಲ್ಲಿ ಬಂದು ಕಳ್ಳತನಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕರ ಆಸ್ವತ್ರೆಗೆ ಕಳೆದ ರಾತ್ರಿ ಎದೆ ನೋವು ಅಂತ ಬಂದಿದ್ದ ಶಂಕರ್​ ಎಂಬಾತ ಮೊದಲಿಗೆ ಆಸ್ವತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾನೆ. ನಂತರ ಚಿಕಿತ್ಸೆ ಪಡೆದವನು ಮನಗೆ ಹೋಗದೆ ನೇರವಾಗಿ ಆಸ್ಪತ್ರೆಯ ಮೊದಲನೇ ಮಹಡಿಗೆ ತೆರಳಿದ್ದು ಅಲ್ಲಿ ವಾರ್ಡ್​ಗಳ ಒಳಗಡೆ ಹೋಗಿ ನಿದ್ದೆಗೆ ಜಾರಿರುವ ರೋಗಿಗಳ ಹಣ, ಮೊಬೈಲ್ ಮತ್ತು ಬೆಲೆ ಬಾಳುವ ವಸ್ತುಗಳನ್ನ ಎಗರಿಸುವ ಯತ್ನ ಮಾಡಿದ್ದಾನೆ. ಆದರೆ ಈ ವೇಳೆ ರೋಗಿಯೊಬ್ಬರು ಎಚ್ಚೆತ್ತು ಯಾರು ನೀನು ಅಂತಿದ್ದಂತೆ ನಾನು ಆಸ್ಪತ್ರೆ ಸಿಬ್ಬಂದಿ ಡಾಕ್ಟರ್ ಎಂದು ಹೇಳಿ ಅಲ್ಲಿಂದ ಹೊರಗಡೆ ಬಂದಿದ್ದಾನೆ. ಹೀಗಾಗೆ ಅನುಮಾನಗೊಂಡ ಜನರು ಆರೋಪಿಯನ್ನ ಹಿಂಬಾಲಿಸಿದಾಗ ಕಳ್ಳತನ ಮಾಡಲು ಬಂದಿರುವುದು ಗೊತ್ತಾಗಿದ್ದು ಕೂಡಲೇ ಆತನನ್ನು ಹಿಡಿದುಕೊಂಡಿದ್ದಾರೆ.

ಇದನ್ನೂ ಓದಿ: ಒನ್ ಡೇ ಟ್ರಿಪ್ ಮಾಡಿ ಕ್ಯಾಬ್ ಚಾಲಕನ ಬಳಿಯೇ ದರೋಡೆ: ಕಾರು ಸಮೇತ ಪರಾರಿಯಾಗಿದ್ದ ಆಸಾಮಿ ಅಂದರ್

ಆರೋಪಿಯನ್ನ ಹಿಡಿದುಕೊಂಡು ಪ್ರಶ್ನಿಸಿದ ಆಸ್ಪತ್ರೆಯ ಒಳ ರೋಗಿಗಳು ನಂತರ ಆರೋಪಿಯನ್ನ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಕಳೆದ ಹಲವು ತಿಂಗಳುಗಳಿಂದ ಇದೇ ರೀತಿ ಆಸ್ಪತ್ರೆಗೆ ಆಗಾಗ ರೊಗಿಗಳ ಸೋಗಿನಲ್ಲಿ ಬರ್ತಿರುವ ಕಳ್ಳರು ರೋಗಿಗಳ ಬ್ಯಾಗ್, ಮೊಬೈಲ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನ ಖದ್ದು ಎಸ್ಕೇಪ್ ಆಗ್ತಿದ್ದಾರಂತೆ. ಜೊತೆಗೆ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ನಾಲ್ಕು ಜನ ಸೆಕ್ಯೂರಿಟಿ ಗಾರ್ಡ್​ಗಳು ಕಾಟಾಚಾರಕ್ಕೆ ಕೆಲಸ ಮಾಡ್ತಿರುವ ಕಾರಣ ಪದೇ ಪದೇ ಈ ರೀತಿಯ ಕಳ್ಳತನ ಕೃತ್ಯಗಳು ನಡೆಯುತ್ತಿದ್ದು ಕಳ್ಳರ ಹಾವಳಿಗೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿ

ಒಟ್ಟಾರೆ ರೋಗ ಗುಣವಾಗಲಿ ಅಂತ ಕಷ್ಟದಲ್ಲಿ ಆಸ್ಪತ್ರೆಗೆ ಬಂದಿದ್ದ ರೋಗಿಗಳ ಬಳಿಗೆ ರೋಗಿಯ ಸೋಗಿನಲ್ಲಿ ಬಂದು ಬೆಲೆ ಬಾಳುವ ವಸ್ತುಗಳನ್ನ ಕದಿಯುತ್ತಿದ್ದ ಆರೋಪಿಯನ್ನ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೂ ಇತ್ತೀಚೆಗೆ ಆಸ್ಪತ್ರೆಗಳಲ್ಲೂ ಇಂತಹ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಬುದ್ದಿ ಕಲಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ