AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆ 10, ಇಂದು 35; ರಾತ್ರೋರಾತ್ರಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸ್ಥಳ ಕೂಡ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಖಡಕ್ ಆಫಿಸರ್ ಎಂದು ಹೆಸರುವಾಸಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಕೂಡ ವರ್ಗಾವಣೆಗೊಂಡಿದ್ದಾರೆ.

ಮೊನ್ನೆ 10, ಇಂದು 35; ರಾತ್ರೋರಾತ್ರಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 05, 2023 | 6:59 AM

Share

ಮಂಗಳೂರು, ಸೆ.05: ರಾಜ್ಯ ಸರ್ಕಾರ(State Government) ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ(Police Department) ಮೇಜರ್ ಸರ್ಜರಿ ಮಾಡಿದೆ. ಕಳೆದ ಎರಡು ದಿನಗಳ ಹಿಂದಷ್ಟೇ 2018, 2019 ಮತ್ತು 2020ರ ಬ್ಯಾಚ್‌ನ ಹತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು. ಈಗ ಮತ್ತೆ ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸ್ಥಳ ಕೂಡ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಖಡಕ್ ಆಫಿಸರ್ ಎಂದು ಹೆಸರುವಾಸಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಕೂಡ ವರ್ಗಾವಣೆಗೊಂಡಿದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.

ವರ್ಗಾವಣೆ ವಿವರ ಹೀಗಿದೆ

  • ಅನುಪಮ್ ಅಗರ್ವಾಲ್-ಮಂಗಳೂರು ಸಿಟಿ ಕಮಿಷನರ್
  • ಡಾ.S.D.ಶರಣಪ್ಪ-ಡಿಐಜಿಪಿ & ಡೈರೆಕ್ಟರ್, ಪೊಲೀಸ್ ಅಕಾಡೆಮಿ, ಮೈಸೂರು
  • ವರ್ತಿಕಾ ಕಟಿಯಾರ್-ಎಸ್​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
  • ಕಾರ್ತಿಕ್​​​​ ರೆಡ್ಡಿ-ಡಿಸಿಪಿ, ಬೆಂಗಳೂರು ಸಂಚಾರ ದಕ್ಷಿಣ ವಿಭಾಗ
  • ಕೆ.ಸಂತೋಷ್ ಬಾಬು-ಡಿಸಿಪಿ ಆಡಳಿತ ವಿಭಾಗ, ಬೆಂಗಳೂರು ನಗರ
  • ಯತೀಶ್ ಚಂದ್ರ-ಎಸ್​​​​ಪಿ, ಆಂತರಿಕ ಭದ್ರತಾ ವಿಭಾಗ
  • ಡಾ.ಭೀಮಾಶಂಕರ ಗುಳೇದ್-ಎಸ್​​​​ಪಿ, ಬೆಳಗಾವಿ
  • ನಿಕಂ ಪ್ರಕಾಶ್ ಅಮ್ರಿತ್-ಎಸ್​​​​ಪಿ, ವೈರ್ ಲೆಸ್
  • ರಾಹುಲ್ ಕುಮಾರ್ ಶಹಾಪುರವಾಡ್-ಡಿಸಿಪಿ, ಬೆಂಗಳೂರು ದಕ್ಷಿಣ ವಿಭಾಗ
  • ಡಿ.ದೇವರಾಜ್-ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ
  • ಅಬ್ದುಲ್ ಅಹದ್-ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ
  • ಎಸ್‌.ಗಿರೀಶ್-ಡಿಸಿಪಿ, ಬೆಂಗಳೂರು ಪಶ್ಚಿಮ ವಿಭಾಗ
  • ಸಂಜೀವ್ ಎಂ. ಪಾಟೀಲ್-ಡಿಸಿಪಿ, ವೈಟ್​​ಫೀಲ್ಡ್ ವಿಭಾಗ
  • ಕೆ.ಪರಶುರಾಮ್-ಎಸ್​​​​ಪಿ, ಇಂಟೆಲಿಜೆನ್ಸ್‌ ವಿಭಾಗ
  • H.D.ಆನಂದ್ ಕುಮಾರ್-ಡೈರೆಕ್ಟೋರೆಟ್ ಸಿವಿಲ್ ರೈಟ್ಸ್, ಎನ್ಪೋರ್ಸ್ಮೆಂಟ್
  • ಡಾ.ಸುಮನ್ ಡಿ.ಪನ್ನೇಕರ್-ಎಐಜಿಪಿ, ಹೆಡ್ ಕ್ವಾರ್ಟರ್ಸ್-1
  • ಕಿಶೋರ್ ಬಾಬು- SP&ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ
  • ಡಾ.ಕೋನ ವಂಶಿಕೃಷ್ಣ-ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು
  • ಲಕ್ಷ್ಮಣ್ ನಿಂಬರಗಿ-ಎಸ್​​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
  • ಡಾ.ಕೆ.ಅರುಣ್-ಎಸ್​​​​ಪಿ, ಉಡುಪಿ
  • ಎಂ.ಎಸ್.ಮಹಮ್ಮದ್ ಸುಜೀತಾ-ಎಸ್​​​​ಪಿ, ಹಾಸನ
  • ಜಯಪ್ರಕಾಶ್-ಎಸ್​​​​ಪಿ, ಇಂಟೆಲಿಜೆನ್ಸ್ ವಿಭಾಗ
  • ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ, ಸಿಸಿಬಿ ಬೆಂಗಳೂರು
  • ಸಾರಾ ಫಾತೀಮಾ-ಬೆಂಗಳೂರು ಸಂಚಾರ ಪಶ್ಚಿಮ ವಿಭಾಗ
  • ಸೋನಾವಾನೆ ರಿಷಿಕೇಶ್ ಭಗವಾನ್-ಎಸ್​​ಪಿ, ವಿಜಯಪುರ
  • ಲೋಕೇಶ್ ಭರಮಪ್ಪ-ಎಸ್​​ಪಿ, ರಾಜ್ಯ ಪೊಲೀಸ್ ಅಕಾಡೆಮಿ, ಮೈಸೂರು
  • ಆರ್.ಶ್ರೀನಿವಾಸ್ ಗೌಡ-ಡಿಸಿಪಿ 2, ಸಿಸಿಬಿ ಬೆಂಗಳೂರು
  • ಪಿ.ಕೃಷ್ಣಕಾಂತ್-ಎಐಜಿಪಿ(ಆಡಳಿತ ವಿಭಾಗ)
  • ವೈ.ಅಮರನಾಥ್ ರೆಡ್ಡಿ-ಎಸ್​ಪಿ, ಬಾಗಲಕೋಟ
  • ಹರಿರಾಮ್ ಶಂಕರ್-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ
  • ಅದ್ದೂರು ಶ್ರೀನಿವಾಸುಲು-ಎಸ್​ಪಿ, ಕಲಬುರಗಿ
  • ಅನ್ಶು ಕುಮಾರ್-ಎಸ್​ಪಿ, ಕೋಸ್ಟಲ್ ಸೆಕ್ಯುರಿಟಿ ಪೊಲೀಸ್, ಉಡುಪಿ
  • ಕನ್ನಿಕಾ ಸಿಕ್ರಿವಾಲ್-ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ
  • ಕುಶಾಲ್ ಚೌಸ್ಕಿ-ಜಂಟಿ ನಿರ್ದೇಶಕ, ವಿಧಿವಿಜ್ಞಾನ ಪ್ರಯೋಗಾಲಯ, ಬೆಂಗಳೂರು
  • ರವೀಂದ್ರ ಕಾಶಿನಾಥ್ ಗಡದಿ-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ