AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆ 10, ಇಂದು 35; ರಾತ್ರೋರಾತ್ರಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸ್ಥಳ ಕೂಡ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಖಡಕ್ ಆಫಿಸರ್ ಎಂದು ಹೆಸರುವಾಸಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಕೂಡ ವರ್ಗಾವಣೆಗೊಂಡಿದ್ದಾರೆ.

ಮೊನ್ನೆ 10, ಇಂದು 35; ರಾತ್ರೋರಾತ್ರಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 05, 2023 | 6:59 AM

Share

ಮಂಗಳೂರು, ಸೆ.05: ರಾಜ್ಯ ಸರ್ಕಾರ(State Government) ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ(Police Department) ಮೇಜರ್ ಸರ್ಜರಿ ಮಾಡಿದೆ. ಕಳೆದ ಎರಡು ದಿನಗಳ ಹಿಂದಷ್ಟೇ 2018, 2019 ಮತ್ತು 2020ರ ಬ್ಯಾಚ್‌ನ ಹತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು. ಈಗ ಮತ್ತೆ ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸ್ಥಳ ಕೂಡ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಖಡಕ್ ಆಫಿಸರ್ ಎಂದು ಹೆಸರುವಾಸಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ದೀಪ್ ಕುಮಾರ್ ಜೈನ್ ಕೂಡ ವರ್ಗಾವಣೆಗೊಂಡಿದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.

ವರ್ಗಾವಣೆ ವಿವರ ಹೀಗಿದೆ

  • ಅನುಪಮ್ ಅಗರ್ವಾಲ್-ಮಂಗಳೂರು ಸಿಟಿ ಕಮಿಷನರ್
  • ಡಾ.S.D.ಶರಣಪ್ಪ-ಡಿಐಜಿಪಿ & ಡೈರೆಕ್ಟರ್, ಪೊಲೀಸ್ ಅಕಾಡೆಮಿ, ಮೈಸೂರು
  • ವರ್ತಿಕಾ ಕಟಿಯಾರ್-ಎಸ್​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
  • ಕಾರ್ತಿಕ್​​​​ ರೆಡ್ಡಿ-ಡಿಸಿಪಿ, ಬೆಂಗಳೂರು ಸಂಚಾರ ದಕ್ಷಿಣ ವಿಭಾಗ
  • ಕೆ.ಸಂತೋಷ್ ಬಾಬು-ಡಿಸಿಪಿ ಆಡಳಿತ ವಿಭಾಗ, ಬೆಂಗಳೂರು ನಗರ
  • ಯತೀಶ್ ಚಂದ್ರ-ಎಸ್​​​​ಪಿ, ಆಂತರಿಕ ಭದ್ರತಾ ವಿಭಾಗ
  • ಡಾ.ಭೀಮಾಶಂಕರ ಗುಳೇದ್-ಎಸ್​​​​ಪಿ, ಬೆಳಗಾವಿ
  • ನಿಕಂ ಪ್ರಕಾಶ್ ಅಮ್ರಿತ್-ಎಸ್​​​​ಪಿ, ವೈರ್ ಲೆಸ್
  • ರಾಹುಲ್ ಕುಮಾರ್ ಶಹಾಪುರವಾಡ್-ಡಿಸಿಪಿ, ಬೆಂಗಳೂರು ದಕ್ಷಿಣ ವಿಭಾಗ
  • ಡಿ.ದೇವರಾಜ್-ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ
  • ಅಬ್ದುಲ್ ಅಹದ್-ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ
  • ಎಸ್‌.ಗಿರೀಶ್-ಡಿಸಿಪಿ, ಬೆಂಗಳೂರು ಪಶ್ಚಿಮ ವಿಭಾಗ
  • ಸಂಜೀವ್ ಎಂ. ಪಾಟೀಲ್-ಡಿಸಿಪಿ, ವೈಟ್​​ಫೀಲ್ಡ್ ವಿಭಾಗ
  • ಕೆ.ಪರಶುರಾಮ್-ಎಸ್​​​​ಪಿ, ಇಂಟೆಲಿಜೆನ್ಸ್‌ ವಿಭಾಗ
  • H.D.ಆನಂದ್ ಕುಮಾರ್-ಡೈರೆಕ್ಟೋರೆಟ್ ಸಿವಿಲ್ ರೈಟ್ಸ್, ಎನ್ಪೋರ್ಸ್ಮೆಂಟ್
  • ಡಾ.ಸುಮನ್ ಡಿ.ಪನ್ನೇಕರ್-ಎಐಜಿಪಿ, ಹೆಡ್ ಕ್ವಾರ್ಟರ್ಸ್-1
  • ಕಿಶೋರ್ ಬಾಬು- SP&ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ
  • ಡಾ.ಕೋನ ವಂಶಿಕೃಷ್ಣ-ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು
  • ಲಕ್ಷ್ಮಣ್ ನಿಂಬರಗಿ-ಎಸ್​​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
  • ಡಾ.ಕೆ.ಅರುಣ್-ಎಸ್​​​​ಪಿ, ಉಡುಪಿ
  • ಎಂ.ಎಸ್.ಮಹಮ್ಮದ್ ಸುಜೀತಾ-ಎಸ್​​​​ಪಿ, ಹಾಸನ
  • ಜಯಪ್ರಕಾಶ್-ಎಸ್​​​​ಪಿ, ಇಂಟೆಲಿಜೆನ್ಸ್ ವಿಭಾಗ
  • ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ, ಸಿಸಿಬಿ ಬೆಂಗಳೂರು
  • ಸಾರಾ ಫಾತೀಮಾ-ಬೆಂಗಳೂರು ಸಂಚಾರ ಪಶ್ಚಿಮ ವಿಭಾಗ
  • ಸೋನಾವಾನೆ ರಿಷಿಕೇಶ್ ಭಗವಾನ್-ಎಸ್​​ಪಿ, ವಿಜಯಪುರ
  • ಲೋಕೇಶ್ ಭರಮಪ್ಪ-ಎಸ್​​ಪಿ, ರಾಜ್ಯ ಪೊಲೀಸ್ ಅಕಾಡೆಮಿ, ಮೈಸೂರು
  • ಆರ್.ಶ್ರೀನಿವಾಸ್ ಗೌಡ-ಡಿಸಿಪಿ 2, ಸಿಸಿಬಿ ಬೆಂಗಳೂರು
  • ಪಿ.ಕೃಷ್ಣಕಾಂತ್-ಎಐಜಿಪಿ(ಆಡಳಿತ ವಿಭಾಗ)
  • ವೈ.ಅಮರನಾಥ್ ರೆಡ್ಡಿ-ಎಸ್​ಪಿ, ಬಾಗಲಕೋಟ
  • ಹರಿರಾಮ್ ಶಂಕರ್-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ
  • ಅದ್ದೂರು ಶ್ರೀನಿವಾಸುಲು-ಎಸ್​ಪಿ, ಕಲಬುರಗಿ
  • ಅನ್ಶು ಕುಮಾರ್-ಎಸ್​ಪಿ, ಕೋಸ್ಟಲ್ ಸೆಕ್ಯುರಿಟಿ ಪೊಲೀಸ್, ಉಡುಪಿ
  • ಕನ್ನಿಕಾ ಸಿಕ್ರಿವಾಲ್-ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ
  • ಕುಶಾಲ್ ಚೌಸ್ಕಿ-ಜಂಟಿ ನಿರ್ದೇಶಕ, ವಿಧಿವಿಜ್ಞಾನ ಪ್ರಯೋಗಾಲಯ, ಬೆಂಗಳೂರು
  • ರವೀಂದ್ರ ಕಾಶಿನಾಥ್ ಗಡದಿ-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ