AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನನಗೆ ಅನಿರೀಕ್ಷಿತವಾಗಿ ಬಂದ ಅವಕಾಶ: ಗೆದ್ದು ತೋರಿಸ್ತೇನೆ ಎಂದ ಕೋಲಾರ ಕೈ ಅಭ್ಯರ್ಥಿ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್, ಅನಿರೀಕ್ಷಿತವಾಗಿ ಕೊಟ್ಟ ಅವಕಾಶವನ್ನು ಬೇಡ ಅನ್ನೋಕೆ ಆಗಲಿಲ್ಲ. ಇದು ಒಳ್ಳೆಯ ಅವಕಾಶ ಗೆದ್ದು ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಹೇಳಿದ್ದಾರೆ. ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವೆ ಎಂದು ಹೇಳಿದ್ದಾರೆ.​

ಇದು ನನಗೆ ಅನಿರೀಕ್ಷಿತವಾಗಿ ಬಂದ ಅವಕಾಶ: ಗೆದ್ದು ತೋರಿಸ್ತೇನೆ ಎಂದ ಕೋಲಾರ ಕೈ ಅಭ್ಯರ್ಥಿ
ಗೌತಮ್ ಕುಮಾರ್
Anil Kalkere
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 30, 2024 | 2:55 PM

Share

ಬೆಂಗಳೂರು, ಮಾರ್ಚ್​ 30: ಅನಿರೀಕ್ಷಿತವಾಗಿ ಕೊಟ್ಟ ಅವಕಾಶವನ್ನು ಬೇಡ ಅನ್ನೋಕೆ ಆಗಲಿಲ್ಲ. ಇದು ಒಳ್ಳೆಯ ಅವಕಾಶ ಗೆದ್ದು ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ (kv gautam) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೋಲಾರ ಕ್ಷೇತ್ರದ ಟಿಕೆಟ್ ಬೇಕು ಎಂದು ಕೇಳಿರಲಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ನನ್ನನ್ನು ಕರೆದು ಕೇಳಿದಾಗ ನಾನು ಬೇಡ ಅನ್ನಲಿಲ್ಲ. ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವೆ ಎಂದು ಹೇಳಿದ್ದಾರೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ವೈಮನಸ್ಸು ಇರುವುದು ನಿಜ. ಅದನ್ನು ಮುಚ್ಚಿಡುವ ವಿಷಯ ಅಲ್ಲ, ಎಲ್ಲರಿಗೂ ಗೊತ್ತಿರುವ ವಿಚಾರ. ನನ್ನನ್ನು ಯಾರೂ ವಿರೋಧ ಮಾಡುವುದಿಲ್ಲವೆನ್ನುವ ಭಾವನೆಯಿದೆ. ಕೋಲಾರ ಜಿಲ್ಲೆಯ ಎಲ್ಲಾ ಮುಖಂಡರ ಜೊತೆ ನಾನು ಚೆನ್ನಾಗಿದ್ದೇನೆ ಎಂದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಕೋಲಾರ ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಾಜಿ ಮೇಯರ್​ ಪುತ್ರ ಗೌತಮ್ ಕಣಕ್ಕೆ

ರಮೇಶ್ ಕುಮಾರ್​ ನನ್ನ ತಂದೆ ಜೊತೆ ಒಡನಾಟ ಇಟ್ಟುಕೊಂಡಿದ್ದರು. ನನ್ನ ತಂದೆ ಬಗ್ಗೆ ರಮೇಶ್ ಕುಮಾರ್​ಗೆ ಅಪಾರವಾದ ಗೌರವವಿದೆ. ಸಚಿವ ಮುನಿಯಪ್ಪ ಜೊತೆ 25 ವರ್ಷಗಳಿಂದಲೂ ಒಡನಾಟವಿದೆ. ರಾಜ್ಯದಲ್ಲಿ ಮುನಿಯಪ್ಪನವರೇ ಎಡಗೈ ಸಮುದಾಯದ ನಾಯಕ. ಕೆ.ಹೆಚ್.ಮುನಿಯಪ್ಪ ಜೊತೆ ನಿರಂತರವಾಗಿ ಸಂಕರ್ಪದಲ್ಲಿ ಇದ್ದರು ಎಂದು ಹೇಳಿದ್ದಾರೆ.

ಕೋಲಾರ ಕಾಂಗ್ರೆಸ್​​ನ ಭದ್ರಕೋಟೆ. 100% ಗೆಲ್ಲುವ ವಿಶ್ವಾಸವಿದೆ. ಈಗಿರುವ ವೈಮನಸ್ಸು ತಾತ್ಕಾಲಿಕ. ನನ್ನ ವಿಚಾರ ಬಂದಾಗ ಮುನಿಯಪ್ಪ, ರಮೇಶ್ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ. ಜೆಡಿಎಸ್ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಆದರೆ ಕೋಲಾರದಲ್ಲಿ‌ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಬಿಜೆಪಿ ಜತೆ ಸಮನ್ವಯ ಸಭೆ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ, ಕೋಲಾರ ಅಭ್ಯರ್ಥಿ ಯಾರು?

ನಾನೊಬ್ಬ ಬಿಇ ಸಿವಿಲ್ ಇಂಜಿನಿಯರ್​. ಆರ್​ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದೇನೆ. ನಮ್ಮ ತಂದೆ ಕೆ.ಸಿ ವಿಜಯ್, 1991ರಲ್ಲಿ‌ ಬೆಂಗಳೂರಿಗೆ ಮೇಯರ್ ಆಗಿದ್ದರು. 2002ರಲ್ಲಿ‌ಎಸ್ಸಿ,ಎಸ್ಟಿ ಕಾರ್ಪೊರೇಷನ್ ಡೆವಲಪ್ಮೆಂಟ್ ಚೇರ್ಮನ್ ಆಗಿದ್ದರು. ಎಸ್ ಎಂ ಕೃಷ್ಣಗೆ ನಮ್ಮ‌ತಂದೆ ಬಹಳ ಆಪ್ತರು.

ನಮ್ಮ‌ ತಂದೆ ಕೂಡ ಯೂತ್ ಕಾಂಗ್ರೆಸ್​ನಿಂದ ಬಂದವರು. ಅದೇ ಹಿನ್ನೆಲೆಯಲ್ಲಿ‌ ನಾನು ಬಂದು ಎನ್​​ಎಸ್​​ಯುಐನಲ್ಲಿ‌ ಇದ್ದೆ. ಈಗ ಬೆಂಗಳೂರು ಕೇಂದ್ರಕ್ಕೆ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಇಬ್ಬರೂ ಸಹೋದರಿಯರು ಕೋಲಾರದಲ್ಲೇ ಇದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!