AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನನಗೆ ಅನಿರೀಕ್ಷಿತವಾಗಿ ಬಂದ ಅವಕಾಶ: ಗೆದ್ದು ತೋರಿಸ್ತೇನೆ ಎಂದ ಕೋಲಾರ ಕೈ ಅಭ್ಯರ್ಥಿ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್, ಅನಿರೀಕ್ಷಿತವಾಗಿ ಕೊಟ್ಟ ಅವಕಾಶವನ್ನು ಬೇಡ ಅನ್ನೋಕೆ ಆಗಲಿಲ್ಲ. ಇದು ಒಳ್ಳೆಯ ಅವಕಾಶ ಗೆದ್ದು ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಹೇಳಿದ್ದಾರೆ. ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವೆ ಎಂದು ಹೇಳಿದ್ದಾರೆ.​

ಇದು ನನಗೆ ಅನಿರೀಕ್ಷಿತವಾಗಿ ಬಂದ ಅವಕಾಶ: ಗೆದ್ದು ತೋರಿಸ್ತೇನೆ ಎಂದ ಕೋಲಾರ ಕೈ ಅಭ್ಯರ್ಥಿ
ಗೌತಮ್ ಕುಮಾರ್
Anil Kalkere
| Edited By: |

Updated on: Mar 30, 2024 | 2:55 PM

Share

ಬೆಂಗಳೂರು, ಮಾರ್ಚ್​ 30: ಅನಿರೀಕ್ಷಿತವಾಗಿ ಕೊಟ್ಟ ಅವಕಾಶವನ್ನು ಬೇಡ ಅನ್ನೋಕೆ ಆಗಲಿಲ್ಲ. ಇದು ಒಳ್ಳೆಯ ಅವಕಾಶ ಗೆದ್ದು ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ (kv gautam) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೋಲಾರ ಕ್ಷೇತ್ರದ ಟಿಕೆಟ್ ಬೇಕು ಎಂದು ಕೇಳಿರಲಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ನನ್ನನ್ನು ಕರೆದು ಕೇಳಿದಾಗ ನಾನು ಬೇಡ ಅನ್ನಲಿಲ್ಲ. ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವೆ ಎಂದು ಹೇಳಿದ್ದಾರೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ವೈಮನಸ್ಸು ಇರುವುದು ನಿಜ. ಅದನ್ನು ಮುಚ್ಚಿಡುವ ವಿಷಯ ಅಲ್ಲ, ಎಲ್ಲರಿಗೂ ಗೊತ್ತಿರುವ ವಿಚಾರ. ನನ್ನನ್ನು ಯಾರೂ ವಿರೋಧ ಮಾಡುವುದಿಲ್ಲವೆನ್ನುವ ಭಾವನೆಯಿದೆ. ಕೋಲಾರ ಜಿಲ್ಲೆಯ ಎಲ್ಲಾ ಮುಖಂಡರ ಜೊತೆ ನಾನು ಚೆನ್ನಾಗಿದ್ದೇನೆ ಎಂದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಕೋಲಾರ ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಾಜಿ ಮೇಯರ್​ ಪುತ್ರ ಗೌತಮ್ ಕಣಕ್ಕೆ

ರಮೇಶ್ ಕುಮಾರ್​ ನನ್ನ ತಂದೆ ಜೊತೆ ಒಡನಾಟ ಇಟ್ಟುಕೊಂಡಿದ್ದರು. ನನ್ನ ತಂದೆ ಬಗ್ಗೆ ರಮೇಶ್ ಕುಮಾರ್​ಗೆ ಅಪಾರವಾದ ಗೌರವವಿದೆ. ಸಚಿವ ಮುನಿಯಪ್ಪ ಜೊತೆ 25 ವರ್ಷಗಳಿಂದಲೂ ಒಡನಾಟವಿದೆ. ರಾಜ್ಯದಲ್ಲಿ ಮುನಿಯಪ್ಪನವರೇ ಎಡಗೈ ಸಮುದಾಯದ ನಾಯಕ. ಕೆ.ಹೆಚ್.ಮುನಿಯಪ್ಪ ಜೊತೆ ನಿರಂತರವಾಗಿ ಸಂಕರ್ಪದಲ್ಲಿ ಇದ್ದರು ಎಂದು ಹೇಳಿದ್ದಾರೆ.

ಕೋಲಾರ ಕಾಂಗ್ರೆಸ್​​ನ ಭದ್ರಕೋಟೆ. 100% ಗೆಲ್ಲುವ ವಿಶ್ವಾಸವಿದೆ. ಈಗಿರುವ ವೈಮನಸ್ಸು ತಾತ್ಕಾಲಿಕ. ನನ್ನ ವಿಚಾರ ಬಂದಾಗ ಮುನಿಯಪ್ಪ, ರಮೇಶ್ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ. ಜೆಡಿಎಸ್ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಆದರೆ ಕೋಲಾರದಲ್ಲಿ‌ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: ಬಿಜೆಪಿ ಜತೆ ಸಮನ್ವಯ ಸಭೆ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ, ಕೋಲಾರ ಅಭ್ಯರ್ಥಿ ಯಾರು?

ನಾನೊಬ್ಬ ಬಿಇ ಸಿವಿಲ್ ಇಂಜಿನಿಯರ್​. ಆರ್​ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದೇನೆ. ನಮ್ಮ ತಂದೆ ಕೆ.ಸಿ ವಿಜಯ್, 1991ರಲ್ಲಿ‌ ಬೆಂಗಳೂರಿಗೆ ಮೇಯರ್ ಆಗಿದ್ದರು. 2002ರಲ್ಲಿ‌ಎಸ್ಸಿ,ಎಸ್ಟಿ ಕಾರ್ಪೊರೇಷನ್ ಡೆವಲಪ್ಮೆಂಟ್ ಚೇರ್ಮನ್ ಆಗಿದ್ದರು. ಎಸ್ ಎಂ ಕೃಷ್ಣಗೆ ನಮ್ಮ‌ತಂದೆ ಬಹಳ ಆಪ್ತರು.

ನಮ್ಮ‌ ತಂದೆ ಕೂಡ ಯೂತ್ ಕಾಂಗ್ರೆಸ್​ನಿಂದ ಬಂದವರು. ಅದೇ ಹಿನ್ನೆಲೆಯಲ್ಲಿ‌ ನಾನು ಬಂದು ಎನ್​​ಎಸ್​​ಯುಐನಲ್ಲಿ‌ ಇದ್ದೆ. ಈಗ ಬೆಂಗಳೂರು ಕೇಂದ್ರಕ್ಕೆ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಇಬ್ಬರೂ ಸಹೋದರಿಯರು ಕೋಲಾರದಲ್ಲೇ ಇದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು