AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿದ್ದರಾಮಯ್ಯ ಖಡಕ್​ ಎಚ್ಚರಿಕೆ

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾದವು. ಕೊನೆಯದಾಗಿ ಸಚಿವರು ವರ್ಗಾವಣೆ ವಿಚಾರವಾಗಿ ಚಕಾರ ಎತ್ತಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಹೇಳಿದರು.

ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿದ್ದರಾಮಯ್ಯ ಖಡಕ್​ ಎಚ್ಚರಿಕೆ
ಸಿಎಂ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on: Jun 21, 2024 | 1:27 PM

Share

ಬೆಂಗಳೂರು ಜೂನ್​ 21: ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಚಿವರಿಗೆ ಖಡಕ್​ ಆಗಿ ಹೇಳಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಸಚಿವರ ಒತ್ತಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ ವರ್ಷ ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆಗಳು ಬಂದಿದ್ದು, ಹೀಗಾಗಿ ಈ ವಿಚಾರವನ್ನು ಕೈಗೆತ್ತಿಕೊಳ್ಳದಿರುವುದು ಜಾಣತನ. ಈ ವಿಷಯ ಇಲ್ಲಿಗೆ ಬಿಟ್ಟು ಬಿಡಿ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳ ವರ್ಗ-1 ಮತ್ತು ಇದರ ಮೇಲಿನ ಅಧಿಕಾರಿಗಳ ವರ್ಗಾವಣೆಯನ್ನು ಸಿಎಂ ನಿರ್ವಹಿಸುತ್ತಾರೆ, ಆದರೆ ಕೆಳ ಹಂತದ ಅಧಿಕಾರಿಗಳ ವರ್ಗಾವಣೆಯನ್ನು ಸಚಿವರು ಮತ್ತು ಶಾಸಕರು ನಡೆಸುತ್ತಾರೆ.

ಪ್ರತಿ ವರ್ಷ ಮೇ ಮತ್ತು ಜೂನ್‌ ಅವಧಿಯಲ್ಲಿ ಸುಮಾರು ಶೇ 6 ರಿಂದ 8 ರಷ್ಟು ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಸರ್ವೆ ಸಾಮಾನ್ಯ. ಆದರೆ, ಈ ವರ್ಷ ಜೂನ್ 6 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರವು ವರ್ಗಾವಣೆ ಮಾಡಿಲ್ಲ. ಚುನಾವಣಾ ಫಲಿತಾಂಶದ ನಂತರ ಅಧಿಕಾರಿಗಳ ವರ್ಗಾವಣೆಗೆ ಭಾರಿ ಒತ್ತಡ ಹಾಕಲಾಗುತ್ತಿದೆ.

ಇದನ್ನೂ ಓದಿ: ದರ್ಶನ್ ಗ್ಯಾಂಗ್ ಚಿತ್ರಹಿಂಸೆಯ ವಿವರ ಕೇಳಿ ಸಿಎಂ ಶಾಕ್; ಇಂಥಾ ಕ್ರೌರ್ಯ ನೋಡೇ ಇಲ್ಲವೆಂದ ಸಿದ್ದರಾಮಯ್ಯ

ಕಳೆದ ವರ್ಷ 2023ರಲ್ಲಿ ಕೆಲವು ಇಲಾಖೆಗಳಲ್ಲಿ ಶೇ 6-8ರಷ್ಟು ಬದಲಾಗಿ ಶೇ.20-25 ರಷ್ಟು ಅಧಿಕಾರಿಗಳು ವರ್ಗಾವಣೆಗೊಂಡಿದ್ದರು. ಹಣಕಾಸಿನ ಲಾಭಕ್ಕಾಗಿ ವರ್ಗಾವಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಹಗರಣದ ವಿವರಗಳನ್ನು ಒಳಗೊಂಡಿರುವ ಪೆನ್​ಡ್ರವ್​ ಅನ್ನು ತೋರಿಸಿದ್ದರು.

ಇಂಧನ ಇಲಾಖೆಯಲ್ಲಿ ಕೆಲವು ಸಚಿವರು ಪ್ರತಿ ವರ್ಗಾವಣೆಗೆ 10 ಕೋಟಿ ರೂ.ವರೆಗೆ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಒಬ್ಬ ನಿರ್ದಿಷ್ಟ ಅಧಿಕಾರಿ ದಿನಕ್ಕೆ 50 ಲಕ್ಷ ರೂ. ಪಡೆದಿದ್ದಾರೆ ಮತ್ತು ಅನೇಕರು ವರ್ಗಾವಣೆ ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದ್ದರು.

ಅಧಿಕಾರಿಗಳ ವರ್ಗಾವಣೆ ವಿಚಾರ ಕಳೆದ ವರ್ಷ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರದ ಮೇಲೆ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್