AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸುಳಿವೇ ಇಲ್ಲಿಲ್ಲ.. ತೊಂಬತ್ತು ಮನೆ ಗ್ರಾಮಸ್ಥರಿಂದ ಸ್ವಯಂ ದಿಗ್ಬಂಧನ

ಆ ಜಿಲ್ಲೆಯಲ್ಲಿ ಸೋಂಕಿನ ಸ್ಫೋಟವಾಗುತ್ತಿದೆ. ಪ್ರತಿದಿನವೂ ಹೆಣಗಾಟ ಶುರುವಾಗಿದೆ. ಬೀದಿ ಬೀದಿಯಲ್ಲೂ ಜನ ಪರದಾಡುತ್ತಿದ್ದಾರೆ. ಇಂತಹ ಜಿಲ್ಲೆಯಲ್ಲೂ ಒಂದು ಕೊರೊನಾ ಮುಕ್ತ ಗ್ರಾಮವಿದೆ. ಗ್ರಾಮಸ್ಥರ ಕಟ್ಟುನಿಟ್ಟಿನ ಕ್ರಮದಿಂದ ಇಡೀ ಗ್ರಾಮ ಸೇಫ್ ಜೋನ್ನಲ್ಲಿದೆ.

ಕೊರೊನಾ ಸುಳಿವೇ ಇಲ್ಲಿಲ್ಲ.. ತೊಂಬತ್ತು ಮನೆ ಗ್ರಾಮಸ್ಥರಿಂದ ಸ್ವಯಂ ದಿಗ್ಬಂಧನ
ತೊಂಬತ್ತು ಮನೆ ಗ್ರಾಮ
ಆಯೇಷಾ ಬಾನು
ಆಯೇಷಾ ಬಾನು|

Updated on: May 09, 2021 | 9:11 AM

Share

ಕೊಡಗು: ಲಾಕ್ಡೌನ್ ಮಾಡಿದ್ರೂ ಜನ ಕೇರ್ ಮಾಡೋಲ್ಲ.. ಕೊರೊನಾ ಕೇಕೆ ಹಾಕಿ, ಜನರ ಜೀವಗಳನ್ನೇ ಹಿಂಡುತ್ತಿದ್ರೂ ಬುದ್ಧಿ ಜೀವಿಗಳು ಮಾತು ಕೇಳಲ್ಲ. ಮನೆಯಲ್ಲೇ ಸೇಫ್ ಆಗಿರಿ ಅಂತಾ ಹೇಳಿದ್ರೂ ಕೆಲವರು ಬೇಜವಾಬ್ದಾರಿಗಳಂತೆ ವರ್ತಿಸ್ತಿದ್ದಾರೆ. ಆದ್ರೆ, ಇಲ್ಲೊಂದು ಗ್ರಾಮದ ಜನ ತಮಗೆ ತಾವೇ ದಿಗ್ಬಂಧನ ಹಾಕಿಕೊಂಡಿದ್ದಾರೆ.

ಇದು ಮಡಿಕೇರಿ ತಾಲೂಕಿನ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಬತ್ತು ಮನೆ ಅನ್ನೋ ಗ್ರಾಮ. ಈ ಊರಿನಲ್ಲಿ ಸುಮಾರು 100ಕ್ಕೂ ಹೆಚ್ಚು ಮನೆಗಳಿವೆ. ಎಲ್ಲಾ ಮನೆಗಳು ಹತ್ತಿರ ಹತ್ತಿರವೇ ಇದೆ. ಬಹುತೇಕ ಮಂದಿ ಕೂಲಿ ಕೆಲಸ ಮಾಡುವವರೇ ಆಗಿದ್ದಾರೆ. ಇಂತಹ ಗ್ರಾಮದಲ್ಲಿ ಇದುವರೆಗೂ ಒಂದೇ ಒಂದು ಕೊರೊನಾ ಕೇಸ್ ಇಲ್ಲ. ಯಾಕಂದ್ರೆ, ಜನ ಕೊರೊನಾ ನಮ್ಮ ಊರಿಗೆ ಕಾಲು ಇಡಬಾರ್ದು ಅಂತಾ ಸ್ವಯಂ ಲಾಕ್ಡೌನ್ ಮಾಡಿಕೊಂಡಿದ್ದಾರೆ. ಕಳೆದ ಒಂದು ವಾರದಿಂದ್ಲೇ ಗ್ರಾಮಕ್ಕೆ ಹೊರಗಿನವರು ಬರುವ ಹಾಗಿಲ್ಲ. ಈ ಗ್ರಾಮದವರೂ ಹೊರಗೆ ಹೋಗುವಂತಿಲ್ಲ ಅಂತಾ ಟಫ್ ರೂಲ್ಸ್ ಜಾರಿ ಮಾಡಿಕೊಂಡಿದ್ದಾರೆ.

ವಿಶೇಷ ಅಂದ್ರೆ ಈ ಗ್ರಾಮದ ಅಕ್ಕಪಕ್ಕದ ಗ್ರಾಮಗಳಲ್ಲಿ ಹಲವು ಕೊರೊನಾ ಕೇಸ್ಗಳು ವರದಿಯಾಗಿದೆ. ಆದ್ರೆ, ಇಲ್ಲಿ ಸೋಂಕಿತರೇ ಇಲ್ಲ.. ಹೀಗಾಗಿ ಗ್ರಾಮದ ಪಿಡಿಒ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಸ್ವಯಂ ಲಾಕ್ಡೌನ್ಗೆ ನೇತೃತ್ವ ವಹಿಸಿಕೊಂಡು, ನಿಯಮ ಪಾಲನೆ ಮಾಡ್ತಿದ್ದಾರೆ. ಇನ್ನು, ಬಹುತೇಕ ಮಂದಿ ಕೂಲಿ ಕಾರ್ಮಿಕರೇ ಆಗಿರೋದ್ರಿಂದ ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ. ಹಾಗಾಗಿ ಇವರಿಗೆ ದುಡಿಮೆ ಇಲ್ಲಾಂದ್ರೂ ಪಡಿತರ ಸಾಮಾಗ್ರಿ ದೊರೆಯುತ್ತಿದೆ.

ಒಟ್ನಲ್ಲಿ, ಸರ್ಕಾರ ಲಾಠಿ ರುಚಿ ತೋರಿಸಿ, ದಂಡಂದಶಗುಣಂ ಅಸ್ತ್ರ ಪ್ರಯೋಗಿಸಿದ್ರು ಏನೂ ಯೂಸ್ ಆಗುತ್ತಿಲ್ಲ. ಅಂತಹದ್ರಲ್ಲಿ ತೊಂಬತ್ತು ಮನೆ ಅನ್ನೋ ಗ್ರಾಮದ ಜನ ಸ್ವಯಂ ದಿಗ್ಬಂಧನ ಹಾಕಿಕೊಂಡು, ಕೊರೊನಾ ಎಂಟ್ರಿ ಕೊಡದಂತೆ ನೋಡಿಕೊಳ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ