AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಕೆಲಸ ಮಾಡಿಲ್ಲವೆನ್ನುವುದಕ್ಕೆ ಆ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಕೆ ಶಿವಕುಮಾರ್ ತಿರುಗೇಟು

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಏನೂ ಕೆಲಸ ಮಾಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕುಮಾರಸ್ವಾಮಿ ಕೆಲಸ ಮಾಡಿಲ್ಲವೆನ್ನುವುದಕ್ಕೆ ಆ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಕೆ ಶಿವಕುಮಾರ್ ತಿರುಗೇಟು
ಕುಮಾರಸ್ವಾಮಿ ಕೆಲಸ ಮಾಡಿಲ್ಲವೆನ್ನುವುದಕ್ಕೆ ಆ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಕೆ ಶಿವಕುಮಾರ್ ತಿರುಗೇಟು
ಗಂಗಾಧರ​ ಬ. ಸಾಬೋಜಿ
|

Updated on:Jul 06, 2024 | 9:38 PM

Share

ಬೆಂಗಳೂರು, ಜುಲೈ 6: ಹೆಚ್​ಡಿ ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ 10 ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ (HD Kumaraswamy) ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ. ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಸರ್ಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಟಾಂಗ್ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು ಎಂದು ಮರು ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಡಿಸಿಎಂ” ಕಾರ್ಯಕ್ರಮದ ನಡುವೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ? ನಮಗೂ ರಾಜಕಾರಣ ಬರುತ್ತದೆ. ಆದರೆ ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಸೇವೆ ಮುಖ್ಯ. ಆದ ಕಾರಣ ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ತಿವಿದರು.

ಮೂಡಾದಲ್ಲಿ ಕಾನೂನು ಪ್ರಕಾರ ಪರಿಹಾರ ನೀಡಲಾಗಿದೆ

ಮುಡಾ ಅಕ್ರಮದ ದಾಖಲೆಗಳನ್ನು ನಾಶ ಮಾಡಲಾಗುತ್ತಿದೆ, ಹಗರಣ ಮುಚ್ಚಿ ಹಾಕಲಾಗುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ ಯಾರು ಯಾವುದನ್ನು ಮುಚ್ಚಿ ಹಾಕಬೇಕಾಗಿಲ್ಲ. ಇಲ್ಲಿ ಯಾವುದೇ ಅನ್ಯಾಯವೂ ಆಗಿಲ್ಲ. ಆಸ್ತಿ ಕಳೆದುಕೊಂಡವರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಮುಡಾ ನಿಯಮದಂತೆ ಪರಿಹಾರ ನೀಡಲಾಗುತ್ತದೆ. ಬಿಡಿಎನಲ್ಲಿ ಶೇ 60:40 ಅನುಪಾತ ಇದ್ದು ಮೂಡಾದಲ್ಲಿ 50:50 ಅನುಪಾತದಲ್ಲಿ ಪರಿಹಾರ ನೀಡುವಂತೆ ಕಾನೂನು ಮಾಡಿಕೊಂಡಿದ್ದಾರೆ. ಹೀಗಾಗಿ ಕಾನೂನು ಪ್ರಕಾರವೇ ಪರಿಹಾರ ನೀಡಲಾಗಿದೆ. ಸಿಎಂ ಅವರು ಚುನಾವಣಾ ಅಫಿಡವಿಟ್​ನಲ್ಲಿ ತಮ್ಮ ಪತ್ನಿಗೆ ಬಂದಿರುವ ಆಸ್ತಿಗಳ ಬಗ್ಗೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇಡೀ ದೇಶಕ್ಕೆ ಹೆಚ್​​ಡಿ ಕುಮಾರಸ್ವಾಮಿ ಮಂತ್ರಿಯಾಗಿದ್ದಾರೆ, ಮಂಡ್ಯಗೆ ಸೀಮಿತವಲ್ಲ: ಚಲುವರಾಯಸ್ವಾಮಿ

2010 ರಲ್ಲೇ ಆಸ್ತಿ ಬಂದಿದ್ದರೂ ಸಿಎಂ ಅವರು 2013 ರ ಅಫಿಡವಿಟ್​ನಲ್ಲಿ ಈ ಮಾಹಿತಿ ನಮೂದಿಸಿಲ್ಲ ಎಂದು ಮಾಧ್ಯಮದವರು ಪ್ರಶ್ನೆಗೆ ಅದು ನನಗೆ ಗೊತ್ತಿಲ್ಲ. ಈ ಬಾರಿಯ ಅಫಿಡವಿಟ್​​ನಲ್ಲಿ ಈ ಎಲ್ಲ ಮಾಹಿತಿಯಿದೆ. ಬಿಜೆಪಿ ಸರ್ಕಾರ ಇದ್ದಾಗಲೇ ಅವರಿಗೆ ಪರಿಹಾರ ನೀಡಲಾಗಿದೆ. ಈಗ ಬಿಜೆಪಿಯವರು, ದಳದವರು ರಾಜಕಾರಣ ಮಾಡುತ್ತಿದ್ದಾರೆ. ಪಾಪ ದಳದವರಂತೂ ಈಗ ಇದ್ದಕ್ಕಿದ್ದಂತೆ ಬಹಳ ಅನುಕಂಪ ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜುಲೈ 13ಕ್ಕೆ ಸಿಎಂ ರಿಂದ ಕಾರ್ಯಕರ್ತರ ಭೇಟಿ

ಪದಾಧಿಕಾರಿಗಳು, ಕಾರ್ಯಕರ್ತರನ್ನು ಭೇಟಿ ಮಾಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬರಬೇಕಾಗಿತ್ತು. ಅನ್ಯ ಕಾರ್ಯನಿಮಿತ್ತ ಬರಲಾಗಲಿಲ್ಲ. ಆದರೆ ಜುಲೈ 13 ರಂದು ಭೇಟಿಯಾಗಲಿದ್ದಾರೆ. ಶೀಘ್ರದಲ್ಲೇ ದಿನಕ್ಕೆ ಇಬ್ಬರು ಮಂತ್ರಿಗಳು ಕಾರ್ಯಕರ್ತರನ್ನು ಭೇಟಿಯಾಗುವ ಕಾರ್ಯಕ್ರಮ ರೂಪಿಸಲಾಗುವುದು. ಯಾವ, ಯಾವ ಮಂತ್ರಿಗಳು ಯಾವಾಗ ಲಭ್ಯವಿರಲಿದ್ದಾರೆ ಎನ್ನುವ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಮುಡಾದವರೇ 62 ಕೋಟಿ ರೂ. ಹಣ ಕೊಡಬೇಕಂತೆ: ಹೆಚ್​ಡಿ ಕುಮಾರಸ್ವಾಮಿ

ಪಕ್ಷವನ್ನು ಅಧಿಕಾರಕ್ಕೆ ತಂದಂತಹ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಕರ್ತವ್ಯ. ಹಲವಾರು ಮಂದಿ ತಮ್ಮ ಕ್ಷೇತ್ರದ ಜನರ ಸಮಸ್ಯೆ, ಜಮೀನು ಖಾತೆ, ವೈಯಕ್ತಿಕ ಕುಂದು ಕೊರತೆಗಳು, ಪಕ್ಷದಲ್ಲಿ ಹುದ್ದೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಹೊತ್ತು ತಂದಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಬಗೆಹರಿಸುವಂತಹ ಸಮಸ್ಯೆಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಆಯಾಯಾ ಇಲಾಖೆಗಳಿಗೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:38 pm, Sat, 6 July 24

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ