AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಿಗೆ ಸರ್ಕಾರ ಅನುದಾನ ನೀಡದಿದ್ದಕ್ಕೆ ಗರಂ.. ಕಲ್ಯಾಣ ಕರ್ನಾಟಕ ಭಾಗದ 1500 ಖಾಸಗಿ ಶಾಲೆಗಳು ಇಂದು ಬಂದ್‌ಗೆ ನಿರ್ಧಾರ

ಖಾಸಗಿ ಶಾಲೆಗಳ ಫೀಸ್ ಗೊಂದಲದ ವಿಚಾರದಲ್ಲಿ ಅಡಕತ್ತರಿಯಲ್ಲಿ ಸಿಕ್ಕಿರೋ ಸರ್ಕಾರಕ್ಕೆ, ಮತ್ತೊಂದು ಶಾಕ್ ಎದುರಾಗಿದೆ. ಅನುದಾನವನ್ನೇ ನಂಬಿರೋ ಕಲ್ಯಾಣ ಕರ್ನಾಟಕದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಬಂದ್ ಆಗಲಿವೆ. ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸುತ್ತಿವೆ.

ಶಾಲೆಗಳಿಗೆ ಸರ್ಕಾರ ಅನುದಾನ ನೀಡದಿದ್ದಕ್ಕೆ ಗರಂ.. ಕಲ್ಯಾಣ ಕರ್ನಾಟಕ ಭಾಗದ 1500 ಖಾಸಗಿ ಶಾಲೆಗಳು ಇಂದು ಬಂದ್‌ಗೆ ನಿರ್ಧಾರ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 15, 2021 | 7:11 AM

Share

ಬೆಂಗಳೂರು: ರಾಜ್ಯದ ಇಡೀ ಶಿಕ್ಷಣ ವ್ಯವಸ್ಥೆಯೇ ಗೊಂದಲದ ಗೂಡಾಗಿದೆ. ಒಂದ್ಕಡೆ ಖಾಸಗಿ ಶಾಲೆಗಳ ಶುಲ್ಕ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ‌ ಮಧ್ಯೆ ಕಲ್ಯಾಣ ಕರ್ನಾಟಕದ ಅನುದಾನ ರಹಿತ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳಿಗೆ ಅನುದಾನ ನೀಡುವಂತೆ ಡೆಡ್ ಲೈನ್ ನೀಡಲಾಗಿತ್ತು. ಆದ್ರೆ ಸರ್ಕಾರ ಹಾಗೂ ಶಿಕ್ಷಣ ಸಚಿವರು ಮನವಿಗೆ ಪುರಸ್ಕರಿಸಿಲ್ಲ. ಹೀಗಾಗಿ, ಇವತ್ತು ಒಂದು ದಿನದ ಮಟ್ಟಿಗೆ ಒಂದೂವರೆ ಸಾವಿರ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಬಂದ್ ಆಗಲಿವೆ.

ಬೇಡಿಕೆಗಳು ಏನು? 1995 ರಿಂದ 2015 ರವರೆಗಿನ ಶಾಲೆಗಳಿಗೆ ಅನುದಾನ ನೀಡಬೇಕು ಎಂಬುದು‌ ಕಲ್ಯಾಣ ಕರ್ನಾಟಕದ ಅನುದಾನ ರಹಿತ ಖಾಸಗಿ ಶಾಲೆಗಳ ಆಗ್ರಹವಾಗಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿರುವ ಖಾಸಗಿ ಶಾಲೆಗಳು ಆರ್ಥಿಕ ಸಂಕಷ್ಟದಲ್ಲಿ ಮುಚ್ಚುವ ಹಂತದಲ್ಲಿದೆ. ಆ ಭಾಗದ ಸರ್ಕಾರಿ ಶಾಲೆಗಳಲ್ಲೂ 20 ಸಾವಿರ ಶಿಕ್ಷಕರ ಕೊರತೆ ಇದೆ. ಏಳು ವರ್ಷವಾದ್ರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಒಂದು ರೂಪಾಯಿ ಅನುದಾನ ಸಿಕ್ಕಿಲ್ಲ. ಈ ಭಾಗದಲ್ಲಿ ಮಕ್ಕಳ ಮಾರಾಟ ದಂಧೆ ಕೂಡ ಜೋರಾಗಿದ್ದು, ಮಕ್ಕಳು ಬಾಲಕಾರ್ಮಿಕರಾಗ್ತಿದ್ದಾರೆ.

ಹೀಗಾಗಿ ಈ ಭಾಗದ ಶೈಕ್ಷಣಿಕ ಅಭಿವೃದ್ದಿಗೆ ಮೀಸಲಿರುವ ಹಣದಲ್ಲಿ ಆ ಮಕ್ಕಳ ಪಾಲನ್ನು ನ್ಯಾಯಯುತವಾಗಿ ಕೊಡಬೇಕು ಅನ್ನೋದು ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲಾ ಒಕ್ಕೂಟದ ಬೇಡಿಕೆಯಾಗಿದೆ.

ಒಂದ್ಕಡೆ ಪೂರ್ಣ ಪ್ರಮಾಣದ ಶಾಲೆ ಆರಂಭ, ಫೀಸ್ ಗೊಂದಲ ಸೇರಿದಂತೆ ಗೊಂದಲಗಳ ಸುಳಿಯಲ್ಲಿಯೇ ಇರೋ ಶಿಕ್ಷಣ ಸಚಿವರಿಗೆ ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಹೋರಾಟ ಬಿಸಿ ತುಪ್ಪವಾಗಿದೆ. ಎಲ್ಲಾ ಬೇಡಿಕೆಗಳು ಒಂದರ ಮೇಲೊಂದು ಬರುತ್ತಿದ್ದು, ಇದನ್ನ ಶಿಕ್ಷಣ ಇಲಾಖೆ ಹೇಗೆ ನಿಭಾಯಿಸುತ್ತೆ ಅನ್ನೋದೆೇ ದೊಡ್ಡ ಪ್ರಶ್ನೆಯಾಗಿದೆ.

ಇದನ್ನೂ ಓದಿ: School Fees: ಸರ್ಕಾರದ ವಿರುದ್ಧ ತೊಡೆ ತಟ್ಟಿದ ಖಾಸಗಿ ಶಾಲೆಗಳ ಒಕ್ಕೂಟ; ಫೆಬ್ರವರಿ 23ರಂದು ಪ್ರತಿಭಟನೆಗೆ ನಿರ್ಧಾರ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು