AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಿಗೆ ಸರ್ಕಾರ ಅನುದಾನ ನೀಡದಿದ್ದಕ್ಕೆ ಗರಂ.. ಕಲ್ಯಾಣ ಕರ್ನಾಟಕ ಭಾಗದ 1500 ಖಾಸಗಿ ಶಾಲೆಗಳು ಇಂದು ಬಂದ್‌ಗೆ ನಿರ್ಧಾರ

ಖಾಸಗಿ ಶಾಲೆಗಳ ಫೀಸ್ ಗೊಂದಲದ ವಿಚಾರದಲ್ಲಿ ಅಡಕತ್ತರಿಯಲ್ಲಿ ಸಿಕ್ಕಿರೋ ಸರ್ಕಾರಕ್ಕೆ, ಮತ್ತೊಂದು ಶಾಕ್ ಎದುರಾಗಿದೆ. ಅನುದಾನವನ್ನೇ ನಂಬಿರೋ ಕಲ್ಯಾಣ ಕರ್ನಾಟಕದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಬಂದ್ ಆಗಲಿವೆ. ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸುತ್ತಿವೆ.

ಶಾಲೆಗಳಿಗೆ ಸರ್ಕಾರ ಅನುದಾನ ನೀಡದಿದ್ದಕ್ಕೆ ಗರಂ.. ಕಲ್ಯಾಣ ಕರ್ನಾಟಕ ಭಾಗದ 1500 ಖಾಸಗಿ ಶಾಲೆಗಳು ಇಂದು ಬಂದ್‌ಗೆ ನಿರ್ಧಾರ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Feb 15, 2021 | 7:11 AM

Share

ಬೆಂಗಳೂರು: ರಾಜ್ಯದ ಇಡೀ ಶಿಕ್ಷಣ ವ್ಯವಸ್ಥೆಯೇ ಗೊಂದಲದ ಗೂಡಾಗಿದೆ. ಒಂದ್ಕಡೆ ಖಾಸಗಿ ಶಾಲೆಗಳ ಶುಲ್ಕ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ‌ ಮಧ್ಯೆ ಕಲ್ಯಾಣ ಕರ್ನಾಟಕದ ಅನುದಾನ ರಹಿತ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳಿಗೆ ಅನುದಾನ ನೀಡುವಂತೆ ಡೆಡ್ ಲೈನ್ ನೀಡಲಾಗಿತ್ತು. ಆದ್ರೆ ಸರ್ಕಾರ ಹಾಗೂ ಶಿಕ್ಷಣ ಸಚಿವರು ಮನವಿಗೆ ಪುರಸ್ಕರಿಸಿಲ್ಲ. ಹೀಗಾಗಿ, ಇವತ್ತು ಒಂದು ದಿನದ ಮಟ್ಟಿಗೆ ಒಂದೂವರೆ ಸಾವಿರ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಬಂದ್ ಆಗಲಿವೆ.

ಬೇಡಿಕೆಗಳು ಏನು? 1995 ರಿಂದ 2015 ರವರೆಗಿನ ಶಾಲೆಗಳಿಗೆ ಅನುದಾನ ನೀಡಬೇಕು ಎಂಬುದು‌ ಕಲ್ಯಾಣ ಕರ್ನಾಟಕದ ಅನುದಾನ ರಹಿತ ಖಾಸಗಿ ಶಾಲೆಗಳ ಆಗ್ರಹವಾಗಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿರುವ ಖಾಸಗಿ ಶಾಲೆಗಳು ಆರ್ಥಿಕ ಸಂಕಷ್ಟದಲ್ಲಿ ಮುಚ್ಚುವ ಹಂತದಲ್ಲಿದೆ. ಆ ಭಾಗದ ಸರ್ಕಾರಿ ಶಾಲೆಗಳಲ್ಲೂ 20 ಸಾವಿರ ಶಿಕ್ಷಕರ ಕೊರತೆ ಇದೆ. ಏಳು ವರ್ಷವಾದ್ರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಒಂದು ರೂಪಾಯಿ ಅನುದಾನ ಸಿಕ್ಕಿಲ್ಲ. ಈ ಭಾಗದಲ್ಲಿ ಮಕ್ಕಳ ಮಾರಾಟ ದಂಧೆ ಕೂಡ ಜೋರಾಗಿದ್ದು, ಮಕ್ಕಳು ಬಾಲಕಾರ್ಮಿಕರಾಗ್ತಿದ್ದಾರೆ.

ಹೀಗಾಗಿ ಈ ಭಾಗದ ಶೈಕ್ಷಣಿಕ ಅಭಿವೃದ್ದಿಗೆ ಮೀಸಲಿರುವ ಹಣದಲ್ಲಿ ಆ ಮಕ್ಕಳ ಪಾಲನ್ನು ನ್ಯಾಯಯುತವಾಗಿ ಕೊಡಬೇಕು ಅನ್ನೋದು ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲಾ ಒಕ್ಕೂಟದ ಬೇಡಿಕೆಯಾಗಿದೆ.

ಒಂದ್ಕಡೆ ಪೂರ್ಣ ಪ್ರಮಾಣದ ಶಾಲೆ ಆರಂಭ, ಫೀಸ್ ಗೊಂದಲ ಸೇರಿದಂತೆ ಗೊಂದಲಗಳ ಸುಳಿಯಲ್ಲಿಯೇ ಇರೋ ಶಿಕ್ಷಣ ಸಚಿವರಿಗೆ ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಹೋರಾಟ ಬಿಸಿ ತುಪ್ಪವಾಗಿದೆ. ಎಲ್ಲಾ ಬೇಡಿಕೆಗಳು ಒಂದರ ಮೇಲೊಂದು ಬರುತ್ತಿದ್ದು, ಇದನ್ನ ಶಿಕ್ಷಣ ಇಲಾಖೆ ಹೇಗೆ ನಿಭಾಯಿಸುತ್ತೆ ಅನ್ನೋದೆೇ ದೊಡ್ಡ ಪ್ರಶ್ನೆಯಾಗಿದೆ.

ಇದನ್ನೂ ಓದಿ: School Fees: ಸರ್ಕಾರದ ವಿರುದ್ಧ ತೊಡೆ ತಟ್ಟಿದ ಖಾಸಗಿ ಶಾಲೆಗಳ ಒಕ್ಕೂಟ; ಫೆಬ್ರವರಿ 23ರಂದು ಪ್ರತಿಭಟನೆಗೆ ನಿರ್ಧಾರ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!