AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮೀನು ಹಿಡಿಯಲು ಕೆರೆಗೆ ನುಗ್ಗಿದ ಸಾವಿರಾರು ಜನ; ವಿಡಿಯೋ ವೈರಲ್

ಪಕ್ಕದ ಜಿಲ್ಲೆಯ ಮೈಸೂರಿನ ಹುಣಸೂರು ಹಾಗು ಕೆ.ಆರ್.ನಗರ ತಾಲೂಕಿನಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಜನರು ಬಂದಿದ್ದಾರೆ. ಬಂದವರೇ ಮೀನು ಹಿಡಿಯಲು ಕೆರೆಗೆ ಇಳಿದಿದ್ದಾರೆ. ಜನರು ಸಾವಿರಾರು ಸಂಖ್ಯೆಯಲ್ಲಿ ಮೀನು ಹಿಡಿಯುರುವ ವಿಡಿಯೋ ವೈರಲ್ ಆಗಿದೆ.

ಹಾಸನದಲ್ಲಿ ಮೀನು ಹಿಡಿಯಲು ಕೆರೆಗೆ ನುಗ್ಗಿದ ಸಾವಿರಾರು ಜನ; ವಿಡಿಯೋ ವೈರಲ್
ಮೀನು ಹಿಡಿಯಲು ಕೆರೆಗೆ ನುಗ್ಗಿದ ಜನ
Follow us
TV9 Web
| Updated By: sandhya thejappa

Updated on: Jun 23, 2021 | 2:14 PM

ಹಾಸನ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಇಡೀ ರಾಜ್ಯದಲ್ಲಿ ಹೆಚ್ಚು ಪಾಸಿಟಿವಿಟಿ ದರ ಹಾಸನದಲ್ಲಿದೆ. ಇನ್ನೂ ಕೂಡ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಯಲ್ಲಿದೆ. ಆದರೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿಯಲ್ಲಿ ಜನರು ಕೊರೊನಾ ಭಯವಿಲ್ಲದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ. ಸಾವಿರಾರು ಜನರು ಮೀನು ಹಿಡಿಯಲು ಕೆರೆಗೆ ನುಗ್ಗಿದ್ದಾರೆ. ಕೈಯಲ್ಲಿ ಮೀನು ಹಿಡಿಯುವ ಕೂಳಿ ಹಿಡಿದು ಏಕಾ ಏಕಿ ಕೆರೆಗಿಳಿದಿರುವ ಸಾವಿರಾರು ಜನರು ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರವನ್ನೂ ಮರೆತು ಓಡಾಡಿದ್ದಾರೆ. ಪಕ್ಕದ ಜಿಲ್ಲೆಯ ಮೈಸೂರಿನ ಹುಣಸೂರು ಹಾಗು ಕೆ.ಆರ್.ನಗರ ತಾಲೂಕಿನಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಜನರು ಬಂದಿದ್ದಾರೆ. ಬಂದವರೇ ಮೀನು ಹಿಡಿಯಲು ಕೆರೆಗೆ ಇಳಿದಿದ್ದಾರೆ. ಜನರು ಸಾವಿರಾರು ಸಂಖ್ಯೆಯಲ್ಲಿ ಮೀನು ಹಿಡಿಯುರುವ ವಿಡಿಯೋ ವೈರಲ್ ಆಗಿದೆ.

ಗ್ರಾಮದ ರಾಮಣ್ಣ ಎಂಬುವರು ಮೀನುಗಾರಿಕೆ ಇಲಾಖೆಯಿಂದ ಕೆರೆಯನ್ನ 1.3 ಲಕ್ಷಕ್ಕೆ ಭೋಗ್ಯಕ್ಕೆ ಪಡೆದಿದ್ದರು. ನಂತರ ಅದನ್ನ ಮಂಜಪ್ಪ ಎಂಬುವವರಿಗೆ ಉಪಗುತ್ತಿಗೆ ನೀಡಿದ್ದರು. ಜೂನ್ 21 ಕ್ಕೆ ಲಾಕ್​ಡೌನ್​ ಮುಗಿಯುತ್ತೆ ಅಂತ ಮೊದಲೇ ಬಾವಿಸಿ ಜೂನ್ 22 ಕ್ಕೆ ಮೀನು ಹಿಡಿಯುವ ದಿನ ನಿಗದಿ ಮಾಡಿ ಸುತ್ತಮುತ್ತಲ ಹಳ್ಳಿಗಳಲ್ಲಿ ಪ್ರಚಾರ ಮಾಡಲಾಗಿತ್ತು. ಹಾಗಾಗಿಯೇ ಜನರು ನಿನ್ನೆ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದಾರೆ. ಇಬ್ಬರಿಗೆ 200 ರೂ. ನಿಗದಿ ಮಾಡಿ ಮೀನು ಹಿಡಿಯಲು ಅವಕಾಶ ನೀಡಲಾಗಿತ್ತು.

ಮಾಹಿತಿ ಪಡೆದ ಸ್ಥಳೀಯ ಹಳ್ಳಿ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಮೀನು ಹಿಡಿಯುವುದನ್ನು ತಡೆದಿದ್ದು, ಇದಕ್ಕೆ ಅವಕಾಶ ನೀಡಿದ ರಾಮಣ್ಣ ಹಾಗು ಮಂಜಪ್ಪ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮದುವೆಗೆ ನಿಷೇಧ ಹೇರುತ್ತಾರೆ ಜನರು ಓಡಾಡೋಕೆ ಬಿಡಲ್ಲ. ಇದಕ್ಕೆಲ್ಲಾ ಹೇಗೆ ಬಿಡುತ್ತಾರೆ ಅಂತ ಸ್ಥಳೀಯರು ಅಸಮಧಾನ ಹೊರ ಹಾಕಿದ್ದಾರೆ.

ಮೀನು ಹಿಡಿಯಲು ಮುಗಿಬಿದ್ದ ಜನ

ಇದನ್ನೂ ಓದಿ

ದೇವಿ ಕಣ್ಬಿಟ್ಟ ದೃಶ್ಯ ನೋಡಲು ಮುಗಿಬಿದ್ದ ಬೆಳಗಾವಿಯ ಜನ; ಮೂರ್ತಿಯ ಮುಂದೆ ನಿಂತು ಭಕ್ತಿಪೂರ್ವಕ ನಮನ

ಕೊರೊನಾವೈರಸ್ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿಕೆ: ಕೇಂದ್ರ ಸರ್ಕಾರ

(Thousands of people went to lake to fish in violation of Corona rule and its video viral in social media)

ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!