AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್​ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ

ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ರಿಂದ ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್​ನಿಂದ ಪದ್ಮರಾಜ್​ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಆರ್​ ಅಶೋಕ್​ ವಿರುದ್ಧ ಪದ್ಮರಾಜ್​ ಗಂಭೀರ ಆರೋಪ ಮಾಡಿದ್ದಾರೆ. ಮೇಯರ್​ ಮಾಡುತ್ತಾರೆ ಎಂದು 2010ರಲ್ಲಿ ಆರ್​ ಅಶೋಕ್​ ಅವರಿಗೆ 1 ಕೋಟಿ ರೂ. ಹಣ ಕೊಟ್ಟಿದ್ದೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್​ ಬಂದ ಮೇಲೆ ಒಂದು ಕೋಟಿ ರೂ. ಹಣ ವಸೂಲಿ ಮಾಡಿಕೊಂಡೆ ಎಂದಿದ್ದಾರೆ.

ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್​ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ
ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್, ಆರ್​ ಅಶೋಕ್​
Mangala RR
| Edited By: |

Updated on:Feb 14, 2024 | 6:58 PM

Share

ಬೆಂಗಳೂರು, ಫೆಬ್ರವರಿ 14: ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ರಿಂದ ಶಾಸಕ ಕೆ.ಗೋಪಾಲಯ್ಯ (K Gopalaiah) ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್​ನಿಂದ ಪದ್ಮರಾಜ್​ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಕುರಿತಾಗಿ ಮಾತನಾಡಿರುವ ಪದ್ಮರಾಜ್​, 2010 ರಲ್ಲಿ ಬಿಜೆಪಿ ನಾಯಕರ ಆರ್​​. ಅಶೋಕ್, ನನ್ನ ಮೇಯರ್ ಮಾಡುತ್ತೇನೆ ಅಂತ ಒಂದು ಕೋಟಿ ರೂ. ಹಣ ತೆಗೆದುಕೊಂಡರು. ಇವತ್ತಿಗೂ ಮೇಯರ್ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆ ಹಣ ವಾಪಸ್ ತೆಗೆದುಕೊಂಡೆ ಎಂದಿದ್ದಾರೆ. ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಸತ್ಯಕ್ಕೆ ದೂರುವಾದ ಮಾತು. ಕೊಲೆ ಬೆದರಿಕೆ ಹಾಕುವ ವ್ಯಕ್ತಿ ನಾನು ಅಲ್ಲ. ಮಂಜುನಾಥ್ ಮೇಲೆ ಆಣೆ. ನಾನು ಬೆದರಿಕೆ ಹಾಕಿಲ್ಲ. ದೇವರು ಅವರಿಗೆ ಒಳ್ಳೆದು ಮಾಡಲಿ. ಗುತ್ತಿಗೆ ಕೊಡಿಸುವ ವಿಚಾರಕ್ಕೆ 15 ಲಕ್ಷ ರೂ. ಹಣ ಕೊಟ್ಟಿದ್ದೆ. ಕೆಲಸ ಕೊಡಿಸಲಿಲ್ಲ ಅದಕ್ಕೆ ಕರೆ ಮಾಡಿದೆ ಆಗ ಒಂದಷ್ಟು ಮಾತುಗಳಾದವು ಎಂದು ಹೇಳಿದ್ದಾರೆ.

ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಪದ್ಮರಾಜು ವಿಚಾರಣೆ

ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ  ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು

ಇಂದು ಬೆಳಿಗ್ಗೆ ಪದ್ಮರಾಜ್​ರನ್ನು ಪೊಲೀಸ್ ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದ್ದರು. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ವಿಚಾರಣೆ ಮಾಡಿದ್ದು, ಪದ್ಮರಾಜ್ ಬಳಿಯಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು.

ಪದ್ಮರಾಜ್​ನನ್ನು ಗಡಿಪಾರು ಮಾಡಬೇಕು: ಗೋಪಾಲಯ್ಯ ಮನವಿ

ಈ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಪ್ರಸ್ತಾಪ ಮಾಡಿದ್ದು, ಪದ್ಮರಾಜ್​ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ಹಿಂದೆ ಶಾಸಕ ಸುರೇಶ್​ ಕುಮಾರ್​ಗೂ ಪದ್ಮರಾಜ್ ಬೆದರಿಕೆ ಹಾಕಿದ್ದಾನೆ. ಪದ್ಮರಾಜ್ ಅಂತಹವರು ಇದ್ದರೆ ಸಮಾಜ ಘಾತುಕ ಶಕ್ತಿಗಳು ಹೆಚ್ಚುತ್ತವೆ. ಅವನ್ನು ಗಡಿಪಾರು ಮಾಡಬೇಕು ಎಂದು ಗೋಪಾಲಯ್ಯ ಮನವಿ ಮಾಡಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣ: ಶಾಸಕರಿಗೆ 15 ಲಕ್ಷ ರೂ. ಕೊಟ್ಟಿದ್ದೆ, ಹೀಗಾಗಿ ಕರೆ ಮಾಡಿದ್ದೇನೆಂದ ಆರೋಪಿ

ಬೆಂಗಳೂರಿನಲ್ಲಿರುವ ಕ್ಲಬ್​ಗಳನ್ನು ಮುಚ್ಚಿಸಬೇಕು. ಇಂತಹವರು ರಾತ್ರಿ ಕುಡಿದ ನಶೆಯಲ್ಲಿ ನಮ್ಮಂಥವರಿಗೆ ಕರೆ ಮಾಡುತ್ತಾರೆ. ನಾನು ಕೂಡ ನನ್ನ ಸ್ಥಾನಕ್ಕೆ ಗೌರವ ಕೊಟ್ಟು ಸುಮ್ಮನಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:56 pm, Wed, 14 February 24

Follow Us
Mangala RR
Mangala RR
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ