AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್​ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ

ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ರಿಂದ ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್​ನಿಂದ ಪದ್ಮರಾಜ್​ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಆರ್​ ಅಶೋಕ್​ ವಿರುದ್ಧ ಪದ್ಮರಾಜ್​ ಗಂಭೀರ ಆರೋಪ ಮಾಡಿದ್ದಾರೆ. ಮೇಯರ್​ ಮಾಡುತ್ತಾರೆ ಎಂದು 2010ರಲ್ಲಿ ಆರ್​ ಅಶೋಕ್​ ಅವರಿಗೆ 1 ಕೋಟಿ ರೂ. ಹಣ ಕೊಟ್ಟಿದ್ದೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್​ ಬಂದ ಮೇಲೆ ಒಂದು ಕೋಟಿ ರೂ. ಹಣ ವಸೂಲಿ ಮಾಡಿಕೊಂಡೆ ಎಂದಿದ್ದಾರೆ.

ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್​ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ
ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್, ಆರ್​ ಅಶೋಕ್​
Mangala RR
| Edited By: |

Updated on:Feb 14, 2024 | 6:58 PM

Share

ಬೆಂಗಳೂರು, ಫೆಬ್ರವರಿ 14: ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ರಿಂದ ಶಾಸಕ ಕೆ.ಗೋಪಾಲಯ್ಯ (K Gopalaiah) ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್​ನಿಂದ ಪದ್ಮರಾಜ್​ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಕುರಿತಾಗಿ ಮಾತನಾಡಿರುವ ಪದ್ಮರಾಜ್​, 2010 ರಲ್ಲಿ ಬಿಜೆಪಿ ನಾಯಕರ ಆರ್​​. ಅಶೋಕ್, ನನ್ನ ಮೇಯರ್ ಮಾಡುತ್ತೇನೆ ಅಂತ ಒಂದು ಕೋಟಿ ರೂ. ಹಣ ತೆಗೆದುಕೊಂಡರು. ಇವತ್ತಿಗೂ ಮೇಯರ್ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆ ಹಣ ವಾಪಸ್ ತೆಗೆದುಕೊಂಡೆ ಎಂದಿದ್ದಾರೆ. ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಸತ್ಯಕ್ಕೆ ದೂರುವಾದ ಮಾತು. ಕೊಲೆ ಬೆದರಿಕೆ ಹಾಕುವ ವ್ಯಕ್ತಿ ನಾನು ಅಲ್ಲ. ಮಂಜುನಾಥ್ ಮೇಲೆ ಆಣೆ. ನಾನು ಬೆದರಿಕೆ ಹಾಕಿಲ್ಲ. ದೇವರು ಅವರಿಗೆ ಒಳ್ಳೆದು ಮಾಡಲಿ. ಗುತ್ತಿಗೆ ಕೊಡಿಸುವ ವಿಚಾರಕ್ಕೆ 15 ಲಕ್ಷ ರೂ. ಹಣ ಕೊಟ್ಟಿದ್ದೆ. ಕೆಲಸ ಕೊಡಿಸಲಿಲ್ಲ ಅದಕ್ಕೆ ಕರೆ ಮಾಡಿದೆ ಆಗ ಒಂದಷ್ಟು ಮಾತುಗಳಾದವು ಎಂದು ಹೇಳಿದ್ದಾರೆ.

ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಪದ್ಮರಾಜು ವಿಚಾರಣೆ

ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ  ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು

ಇಂದು ಬೆಳಿಗ್ಗೆ ಪದ್ಮರಾಜ್​ರನ್ನು ಪೊಲೀಸ್ ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದ್ದರು. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ವಿಚಾರಣೆ ಮಾಡಿದ್ದು, ಪದ್ಮರಾಜ್ ಬಳಿಯಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು.

ಪದ್ಮರಾಜ್​ನನ್ನು ಗಡಿಪಾರು ಮಾಡಬೇಕು: ಗೋಪಾಲಯ್ಯ ಮನವಿ

ಈ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಪ್ರಸ್ತಾಪ ಮಾಡಿದ್ದು, ಪದ್ಮರಾಜ್​ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ಹಿಂದೆ ಶಾಸಕ ಸುರೇಶ್​ ಕುಮಾರ್​ಗೂ ಪದ್ಮರಾಜ್ ಬೆದರಿಕೆ ಹಾಕಿದ್ದಾನೆ. ಪದ್ಮರಾಜ್ ಅಂತಹವರು ಇದ್ದರೆ ಸಮಾಜ ಘಾತುಕ ಶಕ್ತಿಗಳು ಹೆಚ್ಚುತ್ತವೆ. ಅವನ್ನು ಗಡಿಪಾರು ಮಾಡಬೇಕು ಎಂದು ಗೋಪಾಲಯ್ಯ ಮನವಿ ಮಾಡಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣ: ಶಾಸಕರಿಗೆ 15 ಲಕ್ಷ ರೂ. ಕೊಟ್ಟಿದ್ದೆ, ಹೀಗಾಗಿ ಕರೆ ಮಾಡಿದ್ದೇನೆಂದ ಆರೋಪಿ

ಬೆಂಗಳೂರಿನಲ್ಲಿರುವ ಕ್ಲಬ್​ಗಳನ್ನು ಮುಚ್ಚಿಸಬೇಕು. ಇಂತಹವರು ರಾತ್ರಿ ಕುಡಿದ ನಶೆಯಲ್ಲಿ ನಮ್ಮಂಥವರಿಗೆ ಕರೆ ಮಾಡುತ್ತಾರೆ. ನಾನು ಕೂಡ ನನ್ನ ಸ್ಥಾನಕ್ಕೆ ಗೌರವ ಕೊಟ್ಟು ಸುಮ್ಮನಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:56 pm, Wed, 14 February 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?