AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್​ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ

ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ರಿಂದ ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್​ನಿಂದ ಪದ್ಮರಾಜ್​ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಆರ್​ ಅಶೋಕ್​ ವಿರುದ್ಧ ಪದ್ಮರಾಜ್​ ಗಂಭೀರ ಆರೋಪ ಮಾಡಿದ್ದಾರೆ. ಮೇಯರ್​ ಮಾಡುತ್ತಾರೆ ಎಂದು 2010ರಲ್ಲಿ ಆರ್​ ಅಶೋಕ್​ ಅವರಿಗೆ 1 ಕೋಟಿ ರೂ. ಹಣ ಕೊಟ್ಟಿದ್ದೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್​ ಬಂದ ಮೇಲೆ ಒಂದು ಕೋಟಿ ರೂ. ಹಣ ವಸೂಲಿ ಮಾಡಿಕೊಂಡೆ ಎಂದಿದ್ದಾರೆ.

ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್​ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ
ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್, ಆರ್​ ಅಶೋಕ್​
ಮಂಗಳ ರಾಜಗೋಪಾಲ್​
| Edited By: |

Updated on:Feb 14, 2024 | 6:58 PM

Share

ಬೆಂಗಳೂರು, ಫೆಬ್ರವರಿ 14: ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ರಿಂದ ಶಾಸಕ ಕೆ.ಗೋಪಾಲಯ್ಯ (K Gopalaiah) ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್​ನಿಂದ ಪದ್ಮರಾಜ್​ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಕುರಿತಾಗಿ ಮಾತನಾಡಿರುವ ಪದ್ಮರಾಜ್​, 2010 ರಲ್ಲಿ ಬಿಜೆಪಿ ನಾಯಕರ ಆರ್​​. ಅಶೋಕ್, ನನ್ನ ಮೇಯರ್ ಮಾಡುತ್ತೇನೆ ಅಂತ ಒಂದು ಕೋಟಿ ರೂ. ಹಣ ತೆಗೆದುಕೊಂಡರು. ಇವತ್ತಿಗೂ ಮೇಯರ್ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆ ಹಣ ವಾಪಸ್ ತೆಗೆದುಕೊಂಡೆ ಎಂದಿದ್ದಾರೆ. ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಸತ್ಯಕ್ಕೆ ದೂರುವಾದ ಮಾತು. ಕೊಲೆ ಬೆದರಿಕೆ ಹಾಕುವ ವ್ಯಕ್ತಿ ನಾನು ಅಲ್ಲ. ಮಂಜುನಾಥ್ ಮೇಲೆ ಆಣೆ. ನಾನು ಬೆದರಿಕೆ ಹಾಕಿಲ್ಲ. ದೇವರು ಅವರಿಗೆ ಒಳ್ಳೆದು ಮಾಡಲಿ. ಗುತ್ತಿಗೆ ಕೊಡಿಸುವ ವಿಚಾರಕ್ಕೆ 15 ಲಕ್ಷ ರೂ. ಹಣ ಕೊಟ್ಟಿದ್ದೆ. ಕೆಲಸ ಕೊಡಿಸಲಿಲ್ಲ ಅದಕ್ಕೆ ಕರೆ ಮಾಡಿದೆ ಆಗ ಒಂದಷ್ಟು ಮಾತುಗಳಾದವು ಎಂದು ಹೇಳಿದ್ದಾರೆ.

ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಪದ್ಮರಾಜು ವಿಚಾರಣೆ

ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ  ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು

ಇಂದು ಬೆಳಿಗ್ಗೆ ಪದ್ಮರಾಜ್​ರನ್ನು ಪೊಲೀಸ್ ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದ್ದರು. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ವಿಚಾರಣೆ ಮಾಡಿದ್ದು, ಪದ್ಮರಾಜ್ ಬಳಿಯಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು.

ಪದ್ಮರಾಜ್​ನನ್ನು ಗಡಿಪಾರು ಮಾಡಬೇಕು: ಗೋಪಾಲಯ್ಯ ಮನವಿ

ಈ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಪ್ರಸ್ತಾಪ ಮಾಡಿದ್ದು, ಪದ್ಮರಾಜ್​ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ಹಿಂದೆ ಶಾಸಕ ಸುರೇಶ್​ ಕುಮಾರ್​ಗೂ ಪದ್ಮರಾಜ್ ಬೆದರಿಕೆ ಹಾಕಿದ್ದಾನೆ. ಪದ್ಮರಾಜ್ ಅಂತಹವರು ಇದ್ದರೆ ಸಮಾಜ ಘಾತುಕ ಶಕ್ತಿಗಳು ಹೆಚ್ಚುತ್ತವೆ. ಅವನ್ನು ಗಡಿಪಾರು ಮಾಡಬೇಕು ಎಂದು ಗೋಪಾಲಯ್ಯ ಮನವಿ ಮಾಡಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣ: ಶಾಸಕರಿಗೆ 15 ಲಕ್ಷ ರೂ. ಕೊಟ್ಟಿದ್ದೆ, ಹೀಗಾಗಿ ಕರೆ ಮಾಡಿದ್ದೇನೆಂದ ಆರೋಪಿ

ಬೆಂಗಳೂರಿನಲ್ಲಿರುವ ಕ್ಲಬ್​ಗಳನ್ನು ಮುಚ್ಚಿಸಬೇಕು. ಇಂತಹವರು ರಾತ್ರಿ ಕುಡಿದ ನಶೆಯಲ್ಲಿ ನಮ್ಮಂಥವರಿಗೆ ಕರೆ ಮಾಡುತ್ತಾರೆ. ನಾನು ಕೂಡ ನನ್ನ ಸ್ಥಾನಕ್ಕೆ ಗೌರವ ಕೊಟ್ಟು ಸುಮ್ಮನಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:56 pm, Wed, 14 February 24

Follow Us
ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?
ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ