ಬೆದರಿಕೆ ಇಮೇಲ್ ಪ್ರಕರಣ: ಪ್ರೋಟಾನ್ ಇ-ಮೇಲ್ ವಿರುದ್ಧ ಕೇಂದ್ರ ಕ್ರಮ ಕೈಗೊಂಡಿಲ್ಲ ಎಂದ ಪರಮೇಶ್ವರ್‌

ಬಾಂಬ್ ಬೆದರಿಕೆ ಮೇಲ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​​, ಪ್ರೋಟಾನ್ ಇ-ಮೇಲ್ ವಿದೇಶದಲ್ಲಿದೆ, ಈ ಬಗ್ಗೆ ಮಾಹಿತಿ ಕೇಳಿದ್ದೇವೆ. ಪ್ರೋಟಾನ್ ಇ-ಮೇಲ್ ಐಡೆಂಟಿಟಿ ಕೇಳಿದ್ದೇವೆ. ಪ್ರೋಟಾನ್ ಇ-ಮೇಲ್ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಹೇಳಿದ್ದಾರೆ.

ಬೆದರಿಕೆ ಇಮೇಲ್ ಪ್ರಕರಣ: ಪ್ರೋಟಾನ್ ಇ-ಮೇಲ್ ವಿರುದ್ಧ ಕೇಂದ್ರ ಕ್ರಮ ಕೈಗೊಂಡಿಲ್ಲ ಎಂದ ಪರಮೇಶ್ವರ್‌
ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 06, 2024 | 8:27 PM

ಬೆಂಗಳೂರು, ಮಾರ್ಚ್​ 6: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​, ಗೃಹಸಚಿವ ಜಿ. ಪರಮೇಶ್ವರ್ (Parameshwara)​ ಅವರಿಗೆ​ ಬಾಂಬ್ ಬೆದರಿಕೆ ಮೇಲ್ ರಾಜ್ಯಾದ್ಯಂತ ಆತಂಕ ಸೃಷ್ಟಿಸಿದೆ. ಹೀಗಾಗಿ ಬೆದರಿಕೆಯ ಮೇಲ್ ಮಾಡಿರುವ ಕೇಸ್ ತನಿಖೆ ಚುರುಕುಗೊಂಡಿದೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​​, ಪ್ರೋಟಾನ್ ಇ-ಮೇಲ್ ವಿದೇಶದಲ್ಲಿದೆ, ಈ ಬಗ್ಗೆ ಮಾಹಿತಿ ಕೇಳಿದ್ದೇವೆ. ಪ್ರೋಟಾನ್ ಇ-ಮೇಲ್ ಐಡೆಂಟಿಟಿ ಕೇಳಿದ್ದೇವೆ. ಸುಮಾರು 35 ಶಾಲೆಗಳಿಗೆ ಇದೇ ರೀತಿ ಬೆದರಿಕೆ ಇ-ಮೇಲ್ ಬಂದಿತ್ತು. ಪ್ರೋಟಾನ್ ಇ-ಮೇಲ್ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬೆದರಿಕೆ ಮೇಲ್ ಬಂದಿದ್ದವು. ಇಂತಹ ಕೇಸ್​ಗಳನ್ನ ಭೇದಿಸುವುದಕ್ಕೆ ಸ್ವಲ್ಪ ಕಷ್ಟ ಆಗುತ್ತೆ. ಬೇರೆ ದೇಶದ ಏಜೆನ್ಸಿಗಳು ಸಪೋರ್ಟ್ ಮಾಡುತ್ತಿಲ್ಲ. ಫೇಸ್​ಬುಕ್, ಗೂಗಲ್​ನಂಥ ಕಂಪನಿಗಳು ಸಹಕರಿಸಲ್ಲ. ಅಂಥ ಕಂಪನಿ ಸಹಕರಿಸಿದರೆ ಕೇಸ್ ಭೇದಿಸಬಹುದು ಎಂದಿದ್ದಾರೆ.

ಕೇಂದ್ರದ ಇಂಟೆಲಿಜೆನ್ಸ್ ಕೂಡ ಸ್ಥಳೀಯವಾಗಿ ಕೆಲಸ ಮಾಡುತ್ತಾರೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ಇಂಟೆಲಿಜೆನ್ಸ್ ಕೂಡ ಸ್ಥಳೀಯವಾಗಿ ಕೆಲಸ ಮಾಡುತ್ತಾರೆ. ಐಬಿ, ಎನ್ಐಎ ಮಾಹಿತಿಯನ್ನು ಸಂಗ್ರಹಿಸಿ ಹಂಚಿಕೊಳ್ಳುತ್ತಿರುತ್ತಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಬಾಂಬ್ ಬೆದರಿಕೆ, ಬಸ್​ ಸ್ಟ್ಯಾಂಡ್, ರೈಲ್ವೆ ಬ್ಲಾಸ್ಟ್ ಮಾಡುವುದಾಗಿ ಇಮೇಲ್

ತನಿಖಾ ಸಂಸ್ಥೆಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿರುತ್ತಾರೆ.  ನಮ್ಮವರು ಕೇಸ್​ನಲ್ಲಿ ತುಂಬಾ ಮುಂದೆ ಹೋಗಿದ್ದಾರೆ. ಹೀಗಾಗಿ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿನ್ನೆ ಕೇಸ್​ನಲ್ಲಿ ಮುಖ್ಯ ಲೀಡ್ ಸಿಕ್ಕಿದೆ. ಆದಷ್ಟು ಬೇಗ ಕೇಸನ್ನ ಬೇಧಿಸಲಾಗುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ: ಎನ್​ಐಎ ತನಿಖೆ ಆರಂಭ, ಕೆಫೆಯಲ್ಲಿ ಅಧಿಕಾರಿಗಳ ತಲಾಶ್

ಎಫ್​​ಎಸ್​ಎಲ್​ ರಿಪೋರ್ಟ್ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಎಫ್​​ಎಸ್​ಎಲ್​ ರಿಪೋರ್ಟ್ ಆಧರಿಸಿಯೇ ಮೂವರನ್ನ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ರಿಪೋರ್ಟ್ ಬಂದಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೇವೆ. ಈಗ ಬಂಧನ ಮಾಡಲಾಗಿದೆ. ತನಿಖೆ ನಡೆಯುತ್ತಿದೆ. ಬಿಜೆಪಿಯವರು ಅವರನ್ನ ಇವರನ್ನ ಬಂಧಿಸಿ ಇವರನ್ನ ಬಂಧಿಸಿ ಎಂದು ಹೇಳುತ್ತಾರೆ. ಅವರು ವಿರೋಧ ಪಕ್ಷದವರು, ಮಾತನಾಡುವ ಹಕ್ಕಿದೆ ಮಾತನಾಡಲಿ. ಆದರೆ ಸಾಕ್ಷಿಗಳಲ್ಲದೇ ಯಾರನ್ನ ಬಂಧನ ಮಾಡುವುದಕ್ಕೆ ಆಗಲ್ಲ. ತನಿಖೆ ನಡೀತಿದೆ ನಡೆಯಲಿ ಎಂದಿದ್ದರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್