AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಪತ್ತೆ: ಸಿಸಿಬಿ ವಿಚಾರಣೆ ವೇಳೆ ಸ್ಪೋಟಕ ಅಂಶ ಬಯಲು

ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ,ಬಂಜಗೆರೆ ಜಯಪ್ರಕಾಶ್, ವಸುಂದರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬಂದಿವೆ. ಈ ಎಲ್ಲಾ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದು, ದಾವಣಗೆರೆ ಮೂಲದ ವ್ಯಕ್ತಿ.

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಪತ್ತೆ: ಸಿಸಿಬಿ ವಿಚಾರಣೆ ವೇಳೆ ಸ್ಪೋಟಕ ಅಂಶ ಬಯಲು
ಸಿಸಿಬಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Sep 30, 2023 | 8:38 AM

Share

ಬೆಂಗಳೂರು ಸೆ.30: ಕೋಮುವಾದಿ, ಜಾತಿವಾದ ವಿರುದ್ಧದ ನಿಲುವುಳ್ಳ ಲೇಖಕರು, ಚಿಂತಕರು, ಸಾಹಿತಿಗಳಿಗೆ (Literature) ಬೆದರಿಕೆ ಪತ್ರಗಳನ್ನು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೂವರೆ ವರ್ಷದ ಬಳಿಕ ಸಿಸಿಬಿ (CCB) ಪೊಲೀಸರು ಆರೋಪಿಯ ಸುಳಿವು ಪತ್ತೆ ಹಚ್ಚಿದ್ದಾರೆ. ದಾವಣಗೆರೆ ಮೂಲದ ಶಿವಾಜಿರಾವ್ ಎಂಬಾತನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು, ಸಿಸಿಬಿ ವಿಚಾರಣೆ ವೇಳೆ ಬೆದರಿಕೆ ಪತ್ರ ಬರೆದಿದ್ದು ಯಾಕೆ ಎಂಬುವುದನ್ನು ಬಾಯಿಬಿಟ್ಟಿದ್ದಾನೆ.

ಕೆಲ ಸಾಹಿತಿಗಳು ಹಿಂದೂ ಧರ್ಮದ ವಿರೋಧಿಗಳು ಹೀಗಾಗಿ ಬೆದರಿಕೆ ಪತ್ರ ಬರೆದೆ ಎಂದು ಶಿವಾಜಿರಾವ್ ಹೇಳಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಶಿವಾಜಿರಾವ್​ ಅವರ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಶಿವಾಜಿರಾವ್​ ಇದುವರೆಗೂ ಏಳು ಪತ್ರಗಳನ್ನು ಬರೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.

ಹಾಗಾದರೆ ಯಾವೆಲ್ಲ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದರು..?

  1. ಕುಂ.ವೀರಭದ್ರಪ್ಪ (ಕೊಟ್ಟೂರು ಪೊಲೀಸ್ ಠಾಣೆ- 2022)
  2. ಬಿ ಎಲ್ ವೇಣು – (ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ-2022)
  3. ಬಂಜಗೇರಿ ಜಯಪ್ರಕಾಶ್ – (ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಕೇಸ್ 2022 ಹಾಗೂ 2023)
  4. ಬಿ.ಟಿ ಲಲಿತಾ ನಾಯಕ್ – (ಸಂಜಯನಗರ ಪೊಲೀಸ್ ಠಾಣೆ 2022)
  5. ವಸುಂಧರ ಭೂಪತಿ – (ಬಸವೇಶ್ವರ ನಗರ ಪೊಲೀಸ್ ಠಾಣೆ ಎರಡು ಕೇಸ್ 2022-2023)

ಪೊಲೀಸರು ಈ ಎಲ್ಲಾ ಬೆದರಿಕೆ ಪತ್ರಗಳನ್ನು ಎಫ್​ಎಸ್​ಎಲ್​ಗೆ ರವಾನೆ ಮಾಡಿದ್ದರು. ಎಫ್​ಎಸ್​ಎಲ್ ವರದಿಯಲ್ಲಿ ಎಲ್ಲಾ ಪತ್ರಗಳನ್ನು ಒಬ್ಬರೇ ಬರೆದಿರುವುದು ದೃಢವಾಗಿತ್ತು. ಹೀಗಾಗಿ 2023 ರ ಆಗಸ್ಟ್​​ನಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ತನಿಖೆ ವೇಳೆ ಮಹತ್ವದ ಅಂಶ ಬೆಳಕಿಗೆ, ಪತ್ರಗಳನ್ನ ಎಫ್ಎಸ್ಎಲ್​ಗೆ ರವಾನಿಸಿದ ಸಿಸಿಬಿ

ಗೃಹ ಸಚಿವರ ಗಮನಕ್ಕೆ ತಂದಿದ್ದ ಸಾಹಿತಿಗಳು

ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ,ಬಂಜಗೆರೆ ಜಯಪ್ರಕಾಶ್, ವಸುಂದರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಬೆದರಿಕೆ ಪತ್ರ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಸಾಹಿತಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಭೇಟಿಯಾಗಿ ಮಾಡಿದ್ದರು.

ಕೋಮುವಾದಿ ಗುಂಪಿನಿಂದಲೇ ಈ ಪತ್ರಗಳು ಬರುತ್ತಿವೆ. ಜಾತಿವಾದ, ಕೋಮುವಾದ ವಿರುದ್ಧ ಮಾತನಾಡಿದಾಗಲೆಲ್ಲ ನಿಮ್ಮನ್ನು ಮುಗಿಸಿ ಬಿಡುತ್ತೇವೆ ಎಂದು ಒಂದೇ ರೀತಿಯಲ್ಲಿ ಎಲ್ಲರಿಗೂ ಪತ್ರ ಬರುತ್ತಿವೆ. ಗೌರಿ ಲಂಕೇಶ್, ಎಂಎಂ ಕಲಬುರಗಿಯವರ ಹತ್ಯೆ ಮಾಡಿದ ಗುಂಪು ನಮ್ಮನ್ನು ಹತ್ಯೆ ಮಾಡಬಹುದು. ಅದಕ್ಕಾಗಿ ಸರ್ಕಾರದ ಗಮನಕ್ಕೆ ತರುತ್ತಿದ್ದೇವೆ ಎಂದು ಲೇಖಕ ಕೆ. ಮರುಳಸಿದ್ದಪ್ಪ ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:23 am, Sat, 30 September 23

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ