AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ.. ರಾತ್ರಿ 11 ಗಂಟೆ ನಂತರ ಹೆಚ್ಚು ಜನ ಸೇರೋಹಾಗಿಲ್ಲ: ಸಚಿವ ಸುಧಾಕರ್

ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ ಹೆಚ್ಚಾಗಿದ್ದು ಹೋಟೆಲ್, ಪಬ್ ಅಂಡ್ ಬಾರ್, ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯ ಕೊವಿಡ್ ನಿಯಮ ಪಾಲಿಸಲು ಆರೋಗ್ಯ & ಕುಟುಂಬ ಕಲ್ಯಾಣ ಖಾತೆ ಸಚಿವ ಸುಧಾಕರ್ ಸೂಚಿಸಿದ್ದಾರೆ.

ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ.. ರಾತ್ರಿ 11 ಗಂಟೆ ನಂತರ ಹೆಚ್ಚು ಜನ ಸೇರೋಹಾಗಿಲ್ಲ: ಸಚಿವ ಸುಧಾಕರ್
ಡಾ. ಕೆ.ಸುಧಾಕರ್​
ಆಯೇಷಾ ಬಾನು
| Edited By: |

Updated on: Mar 12, 2021 | 11:34 AM

Share

ಬೆಂಗಳೂರು: ಕೊರೊನಾ ರಣಕೇಕೆಯಿಂದ ಒಂದು ವರ್ಷ ಜನಜೀವನವೇ ಅಲ್ಲೋಲ ಕಲ್ಲೋಲವಾಯ್ತು. ಬ್ರಿಟನ್ ವೈರಸ್.. ರೂಪಾಂತರಿ.. ಎರಡನೇ ಅಲೆ ಅನ್ನೋ ಆತಂಕ, ಈಗಲೂ ಜನರ ಬೆನ್ನ ಹಿಂದೆಯೇ ಇದೆ. ಇದೀಗ ಕೊರೊನಾ ಆರ್ಭಟಿಸುತ್ತಿರುವ 10 ಜಿಲ್ಲೆಗಳ ಪೈಕಿ ಬೆಂಗಳೂರು 5ನೇ ಸ್ಥಾನದಲ್ಲಿದೆ ಅನ್ನೋದು ಮತ್ತಷ್ಟು ಭಯ ಹುಟ್ಟಿಸಿದೆ. ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ ಹೆಚ್ಚಾಗಿದ್ದು ಹೋಟೆಲ್, ಪಬ್ ಅಂಡ್ ಬಾರ್, ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯ ಕೊವಿಡ್ ನಿಯಮ ಪಾಲಿಸಲು ಆರೋಗ್ಯ & ಕುಟುಂಬ ಕಲ್ಯಾಣ ಖಾತೆ ಸಚಿವ ಸುಧಾಕರ್ ಸೂಚಿಸಿದ್ದಾರೆ. ರಾತ್ರಿ 11 ಗಂಟೆಯ ನಂತರ ಹೆಚ್ಚು ಜನರು ಸೇರುವ ಹಾಗಿಲ್ಲ. ಲೇಟ್ ನೈಟ್ ಪಾರ್ಟಿಗಳನ್ನು ನಿಲ್ಲಿಸುವಂತೆ ಸೂಚಿಸಿದ್ದು ನಿಯಮ ಉಲ್ಲಂಘಿಸಿದ್ರೆ ಸೂಕ್ತ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಅಟ್ಟಹಾಸದಲ್ಲಿ ಬೆಂಗಳೂರಿಗೆ 5ನೇ ಸ್ಥಾನ ಡೆಡ್ಲಿ ವೈರಸ್ ಕೊರೊನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರನ್ನ ಬೆನ್ನುಬಿಡದೇ ಕಾಡುತ್ತಿದೆ. ಬೆಂಗಳೂರಲ್ಲಿ ಸದ್ಯ 5,526 ಕೊರೊನಾ ಸಕ್ರಿಯ ಕೇಸ್​ಗಳಿದ್ದು, ಕೊವಿಡ್ ಹೆಚ್ಚಿರುವ ದೇಶದ 10 ಜಿಲ್ಲೆಗಳ ಪೈಕಿ ಬೆಂಗಳೂರು ಸಿಟಿ 5ನೇ ಸ್ಥಾನದಲ್ಲಿದೆ. ಹೀಗಂತ ದೆಹಲಿಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಡಾ.ರಾಜೇಶ್ ಭೂಷಣ್ ತಿಳಿಸಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಟಾಪ್ 10 ಜಿಲ್ಲೆಗಳ ಪೈಕಿ 8 ಜಿಲ್ಲೆಗಳು ಮಹಾರಾಷ್ಟ್ರದಲ್ಲಿವೆ, ಉಳಿದಂತೆ ಕೇರಳದ ಎರ್ನಾಕುಲಂ ಟಾಪ್ 10 ಪಟ್ಟಿಯಲ್ಲಿದೆ. ಎರ್ನಾಕುಲಂ ಜಿಲ್ಲೆಯಲ್ಲಿ 5,430 ಕೊರೊನಾ ಸಕ್ರಿಯ ಕೇಸ್ ಇದ್ರೆ, ಮಹಾರಾಷ್ಟ್ರದಲ್ಲಿ ಸಕ್ರಿಯ ಕೊರೊನಾ ಕೇಸ್ 1 ಲಕ್ಷ ದಾಟಿದೆ.

ಕರ್ನಾಟಕಕ್ಕೆ ಎಚ್ಚರಿಕೆಯ ಗಂಟೆ ಎಂದ ಹೆಲ್ತ್ ಮಿನಿಸ್ಟರ್ ದಕ್ಷಿಣ ಆಫ್ರಿಕಾ ವೈರಸ್ ಆತಂಕಕಾರಿಯಲ್ಲದಿದ್ರೂ ರಾಜ್ಯದಲ್ಲಿ ಭಯ ಆವರಿಸಿದೆ. ಯಾಕಂದ್ರೆ, ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಮಹಾಮಾರಿಯ ರಣಕೇಕೆ ಹೆಚ್ಚಾಗಿದೆ. ಪ್ರತಿದಿನ 13 ಸಾವಿರ ಪಾಸಿಟಿವ್ ಕೇಸ್ ಬರ್ತಿದೆ. ಹೀಗಾಗಿ ನಾಗ್ಬುರದಲ್ಲಿ ಮಾರ್ಚ್ 15ರಿಂದ 21ರವರೆಗೆ ಲಾಕ್‌ಡೌನ್‌ ಘೋಷಿಸಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಹೆಚ್ಚಾಗ್ತಿರೋದಕ್ಕೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಹೆಚ್ಚಾಗ್ತಿರೋ ಸೋಂಕು ನನ್ನನ್ನ ಚಿಂತೆಗೀಡುಮಾಡಿದೆ. ಇದು ಎಚ್ಚರಿಕೆ ಗಂಟೆ. ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸ್ಬೇಕು ಎಂದು ಟ್ವೀಟ್ ಮೂಲಕ ಕೆಲ ಸಲಹೆಗಳನ್ನ ನೀಡಿದ್ದಾರೆ .

ಇದು ಎಚ್ಚರಿಕೆ ಗಂಟೆ.. ಎಚ್ಚರವಾಗಿರಿ ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ತಪ್ಪದೇ ಪಾಲಿಸಿ. ಸಾಧ್ಯವಾದಷ್ಟು ಜನಸಂದಣಿಯಿಂದ ದೂರವಿರಿ. 60 ವರ್ಷ ಮೇಲ್ಪಟ್ಟವರು, 45 ವರ್ಷಕ್ಕಿಂತ ಮೇಲ್ಪಟ್ಟವರು, ಅಸ್ವಸ್ಥತೆ ಹೊಂದಿರುವವರು ತಪ್ಪದೇ ಬೇಗ ಲಸಿಕೆ ಪಡೆಯಿರಿ. ಮನೆ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಯಲ್ಲಿ ಕೊರೊನಾ ಲಸಿಕೆಯನ್ನು ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ, ಲಸಿಕೆ ಪಡೆಯಲು ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ಟೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಿಯಮ ಉಲ್ಲಂಘಿಸಿ ತರಗತಿ ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಡಾ.ಕೆ.ಸುಧಾಕರ್ ಟ್ವೀಟ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?