ಗೋಧ್ರಾ ಹತ್ಯಾಕಾಂಡದಂತೆ ಸುಟ್ಟುಹಾಕ್ತೀವಿ ಅಂತ ಹೇಳುವ ಮನಸ್ಥಿತಿ ಏಕಾಏಕಿ ಹುಟ್ಟಿರಲಾರದು: ಸಿಟಿ ರವಿ, ಬಿಜೆಪಿ ನಾಯಕ

Updated on: Feb 23, 2024 | 5:27 PM

ರಾಮನಗರದಲ್ಲೂ ವಕೀಲನೊಬ್ಬ ಗ್ಯಾನವಾಪಿ ಮಸೀದಿಗೆ ಸಂಬಂಧಿಸಿದಂತೆ ವಾರಣಾಸಿಯ ಕೋರ್ಟೊಂದು ನೀಡಿರುವ ತೀರ್ಪನ್ನು ಮನಬಂದಂತೆ ನಿಂದಿಸಿದ್ದಾನೆ. ಹಾಗಾಗಿ ಯಾವ ಪಿತೂರಿ ನಡೆಯುತ್ತಿದೆ, ಪಿತೂರಿಗಾರರ ಹುನ್ನಾರ ಏನು? ಅನ್ನೋದು ಗೊತ್ತಾಗಬೇಕು. ಯಾಕೆಂದರೆ ಈ ಎರಡು ಘಟನೆಗಳು ಬೇರೆ ಬೇರೆಯಾಗಿರುವುದು ಸಾಧ್ಯವಿಲ್ಲ, ಸಮಗ್ರ ತನಿಖೆಯಾಗಬೇಕು ಎಂದು ರವಿ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಮಾಜಿ ಶಾಸಕ ಸಿಟಿ ರವಿ (CT Ravi) ಹೊಸಪೇಟೆಯಲ್ಲಿ ರಾಮಭಕ್ತರಿಗೆ ಬೆದರಿಕೆ ಹಾಕಿದ ಪ್ರಕರಣದ ಸಮಗ್ರ ತನಿಖೆಯಾಯಾಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ವಿಶೇಷ ರೈಲೊಂದರಲ್ಲಿ ಅಯೋಧ್ಯೆಯಿಂದ ವಾಪಸ್ಸಾಗುತ್ತಿದ್ದ ರಾಮಭಕ್ತರಿಗೆ ಹೊಸಪೇಟೆಯಲ್ಲಿ ಮತಾಂಧನೊಬ್ಬ ಗೋಧ್ರಾ ಹತ್ಯಾಕಾಂಡದ (Godhra massacre) ಮಾದರಿಯಲ್ಲಿ ಸುಟ್ಟು ಹಾಕುತ್ತೇನೆ ಅಂತ ಬೆದರಿಸಿದ್ದಾನೆ. ಭಕ್ತರು ಅವನನ್ನು ಹಿಡಿದು ಪೊಲೀಸ ವಶಕ್ಕೆ ಒಪ್ಪಿಸಿದರೂ ತಪ್ಪಿಸಿಕೊಳ್ಳುವಲ್ಲಿ ಸಫಲನಾಗಿದ್ದಾನೆ. ನಂತರ ಸಿಸಿಟಿವಿ ಫುಟೇಜ್ (CCTV footage) ಆಧರಿಸಿ ಅವನನ್ನು ಬಂಧಿಸಲಾಗಿದೆ ಎಂದು ರವಿ ಹೇಳಿದರು. ಗೋಧ್ರಾದಂಥ ಹತ್ಯಾಕಾಂಡ ನಡೆಸುತ್ತೇವೆ ಎಂದು ಹೇಳುವ ಮನಸ್ಥಿತಿ ಅವನಲ್ಲಿ ಏಕಾಏಕಿ ಹುಟ್ಟಿರುವುದಿಲ್ಲ, ಇದರ ಹಿಂದಿನ ಪಿತೂರಿಯನ್ನು ಪೊಲೀಸರು ಬಯಲಿಗೆಳೆಯಬೇಕು. ರಾಮನಗರದಲ್ಲೂ ವಕೀಲನೊಬ್ಬ ಗ್ಯಾನವಾಪಿ ಮಸೀದಿಗೆ ಸಂಬಂಧಿಸಿದಂತೆ ವಾರಣಾಸಿಯ ಕೋರ್ಟೊಂದು ನೀಡಿರುವ ತೀರ್ಪನ್ನು ಮನಬಂದಂತೆ ನಿಂದಿಸಿದ್ದಾನೆ. ಹಾಗಾಗಿ ಯಾವ ಪಿತೂರಿ ನಡೆಯುತ್ತಿದೆ, ಪಿತೂರಿಗಾರರ ಹುನ್ನಾರ ಏನು? ಅನ್ನೋದು ಗೊತ್ತಾಗಬೇಕು. ಯಾಕೆಂದರೆ ಈ ಎರಡು ಘಟನೆಗಳು ಬೇರೆ ಬೇರೆಯಾಗಿರುವುದು ಸಾಧ್ಯವಿಲ್ಲ, ಸಮಗ್ರ ತನಿಖೆಯಾಗಬೇಕು ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More