AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ

ಉಡುಪಿ, ರಾಯಚೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ರಸ್ತೆ ಅಪಘಾತಗಳು ವರದಿಯಾಗಿವೆ. ಉಡುಪಿಯಲ್ಲಿ ಬಸ್-ಕ್ರೂಸರ್ ಡಿಕ್ಕಿಯಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ರಾಯಚೂರಿನಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದರೆ, ಕೋಲಾರದಲ್ಲಿ ಬೈಕ್‌ಗೆ ಆಟೋ ಡಿಕ್ಕಿ ಹೊಡೆದಿದೆ. ಈ ಘಟನೆಗಳು ರಸ್ತೆ ಸುರಕ್ಷತೆಯ ಕುರಿತು ಆತಂಕ ಮೂಡಿಸಿವೆ.

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ
ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ
ಪ್ರಸನ್ನ ಹೆಗಡೆ
|

Updated on:Jan 23, 2026 | 4:45 PM

Share

ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KKRTC ಬಸ್​ ಚಕ್ರಕ್ಕೆ ಸಿಲುಕಿ ಬಾಲಕಿ ಸಾವು

KKRTC ಬಸ್​ ಚಕ್ರಕ್ಕೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡೆದಿದೆ. ದಿವ್ಯಾಶ್ರೀ ದೇವರಾಜ(5) ಮೃತ ಬಾಲಕಿಯಾಗಿದ್ದು, ರಸ್ತೆ ಪಕ್ಕದ ಮನೆ ಮುಂದೆ ಆಟವಾಡುವಾಗ ಬಸ್ ಹರಿದು ಅವಘಡ ಸಂಭವಿಸಿದೆ. ಗಬ್ಬೂರಿನಿಂದ ಗೂಗಲ್ ಗ್ರಾಮಕ್ಕೆ ಬಸ್​​ ತೆರಳುತ್ತಿತ್ತು ಎನ್ನಲಾಗಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ; ಪ್ರಾಣಿ ದಾಳಿಯೋ? ಕೊಲೆಯೋ?

ಬೈಕ್​​ಗೆ ಹಿಂಬದಿಯಿಂದ ಆಟೋ ಡಿಕ್ಕಿ

ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿ ಹಿಂಬದಿಯಿಂದ ಆಟೋ ಡಿಕ್ಕಿಯಾದ ಪರಿಣಾಮ ಬೈಕ್​​ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರನ ನಿರ್ಲಕ್ಷ್ಯ ಹಾಗೂ ಆಟೋ ಚಾಲಕನ ವೇಗವೇ ಘಟನೆಗೆ ಕಾರಣ ಎನ್ನಲಾಗಿದ್ದು, ಬೈಕ್​​ಗೆ ಆಟೋ ಗುದ್ದುವ ದೃಶ್ಯ ಅಂಬೇಡ್ಕರ್ ವೃತ್ತದಲ್ಲಿರುವ ಅಂಗಡಿಯೊಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬೈಕ್​​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕಸ್ಮಿಕ ಬೆಂಕಿಗೆ ಟಿಪ್ಪರ್ ಸುಟ್ಟು ಕರಕಲು

Tipper Fire

ಸುಟ್ಟು ಕರಕಲಾಗಿರುವ ಟಿಪ್ಪರ್​​

ತುಮಕೂರು ಜಿಲ್ಲೆ ತುರುವೇಕರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿದೆ. ಗುಬ್ಬಿ ಕಡೆಯಿಂದ ತುರುವೇಕೆರೆಗೆ ಸಾಗುತ್ತಿದ್ದ ಟಿಪ್ಪರ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ತುರುವೇಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:41 pm, Fri, 23 January 26

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್