AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ

ಉಡುಪಿ, ರಾಯಚೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ರಸ್ತೆ ಅಪಘಾತಗಳು ವರದಿಯಾಗಿವೆ. ಉಡುಪಿಯಲ್ಲಿ ಬಸ್-ಕ್ರೂಸರ್ ಡಿಕ್ಕಿಯಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ರಾಯಚೂರಿನಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದರೆ, ಕೋಲಾರದಲ್ಲಿ ಬೈಕ್‌ಗೆ ಆಟೋ ಡಿಕ್ಕಿ ಹೊಡೆದಿದೆ. ಈ ಘಟನೆಗಳು ರಸ್ತೆ ಸುರಕ್ಷತೆಯ ಕುರಿತು ಆತಂಕ ಮೂಡಿಸಿವೆ.

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ
ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ
ಪ್ರಸನ್ನ ಹೆಗಡೆ
|

Updated on:Jan 23, 2026 | 4:45 PM

Share

ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KKRTC ಬಸ್​ ಚಕ್ರಕ್ಕೆ ಸಿಲುಕಿ ಬಾಲಕಿ ಸಾವು

KKRTC ಬಸ್​ ಚಕ್ರಕ್ಕೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡೆದಿದೆ. ದಿವ್ಯಾಶ್ರೀ ದೇವರಾಜ(5) ಮೃತ ಬಾಲಕಿಯಾಗಿದ್ದು, ರಸ್ತೆ ಪಕ್ಕದ ಮನೆ ಮುಂದೆ ಆಟವಾಡುವಾಗ ಬಸ್ ಹರಿದು ಅವಘಡ ಸಂಭವಿಸಿದೆ. ಗಬ್ಬೂರಿನಿಂದ ಗೂಗಲ್ ಗ್ರಾಮಕ್ಕೆ ಬಸ್​​ ತೆರಳುತ್ತಿತ್ತು ಎನ್ನಲಾಗಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ; ಪ್ರಾಣಿ ದಾಳಿಯೋ? ಕೊಲೆಯೋ?

ಬೈಕ್​​ಗೆ ಹಿಂಬದಿಯಿಂದ ಆಟೋ ಡಿಕ್ಕಿ

ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿ ಹಿಂಬದಿಯಿಂದ ಆಟೋ ಡಿಕ್ಕಿಯಾದ ಪರಿಣಾಮ ಬೈಕ್​​ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರನ ನಿರ್ಲಕ್ಷ್ಯ ಹಾಗೂ ಆಟೋ ಚಾಲಕನ ವೇಗವೇ ಘಟನೆಗೆ ಕಾರಣ ಎನ್ನಲಾಗಿದ್ದು, ಬೈಕ್​​ಗೆ ಆಟೋ ಗುದ್ದುವ ದೃಶ್ಯ ಅಂಬೇಡ್ಕರ್ ವೃತ್ತದಲ್ಲಿರುವ ಅಂಗಡಿಯೊಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬೈಕ್​​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕಸ್ಮಿಕ ಬೆಂಕಿಗೆ ಟಿಪ್ಪರ್ ಸುಟ್ಟು ಕರಕಲು

Tipper Fire

ಸುಟ್ಟು ಕರಕಲಾಗಿರುವ ಟಿಪ್ಪರ್​​

ತುಮಕೂರು ಜಿಲ್ಲೆ ತುರುವೇಕರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿದೆ. ಗುಬ್ಬಿ ಕಡೆಯಿಂದ ತುರುವೇಕೆರೆಗೆ ಸಾಗುತ್ತಿದ್ದ ಟಿಪ್ಪರ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ತುರುವೇಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:41 pm, Fri, 23 January 26

Follow Us
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ