AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಗೆ ಮನೆ ಚಾವಣಿ ಹಾರಿ ಜೋಳಿಗೆಯಲ್ಲಿದ್ದ 3 ತಿಂಗಳ ಮಗು ಸಾವು

ನಿನ್ನೆ ಸಾಯಂಕಾಲ ಸುರಗಿಹಳ್ಳಿ ಬಿರುಗಾಳಿ ಸಹಿತ ಮಳೆ ಶುರುವಾಗಿತ್ತು. ಈ ವೇಳೆ ಅಬ್ದುಲ್ ರೆಹಮಾನ್ ದಂಪತಿ ಎಂದಿನಂತೆ ಮನೆಯ ಚಾವಣಿ ಕಂಬಕ್ಕೆ ಜೋಳಿಗೆ ಕಟ್ಟಿ ಮಗು ಮಲಗಿಸಿದ್ದರು. ಆದ್ರೆ ಗಾಳಿಯ ರಭಸಕ್ಕೆ ಚಾವಣಿ ಜತೆ ಜೋಳಿಗೆ ಹಾರಿಹೋಗಿದೆ.

ಗಾಳಿಗೆ ಮನೆ ಚಾವಣಿ ಹಾರಿ ಜೋಳಿಗೆಯಲ್ಲಿದ್ದ 3 ತಿಂಗಳ ಮಗು ಸಾವು
3 ತಿಂಗಳ ಮಗು ಸಾವು
ಆಯೇಷಾ ಬಾನು
|

Updated on: Apr 28, 2021 | 1:43 PM

Share

ವಿಜಯಪುರ: ಭಾರಿ ಗಾಳಿಗೆ ಮನೆ ಚಾವಣಿ ಹಾರಿಹೋಗಿ ಮಗು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುರಗಿಹಳ್ಳಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ದಂಪತಿಯ 3 ತಿಂಗಳ ಮಗು ಮೃತಪಟ್ಟಿದೆ.

ನಿನ್ನೆ ಸಾಯಂಕಾಲ ಸುರಗಿಹಳ್ಳಿ ಬಿರುಗಾಳಿ ಸಹಿತ ಮಳೆ ಶುರುವಾಗಿತ್ತು. ಈ ವೇಳೆ ಅಬ್ದುಲ್ ರೆಹಮಾನ್ ದಂಪತಿ ಎಂದಿನಂತೆ ಮನೆಯ ಚಾವಣಿ ಕಂಬಕ್ಕೆ ಜೋಳಿಗೆ ಕಟ್ಟಿ ಮಗು ಮಲಗಿಸಿದ್ದರು. ಆದ್ರೆ ಗಾಳಿಯ ರಭಸಕ್ಕೆ ಚಾವಣಿ ಜತೆ ಜೋಳಿಗೆ ಹಾರಿಹೋಗಿದೆ. ವಿದ್ಯುತ್ ಕಂಬಕ್ಕೆ ಜೋಳಿಗೆ ಬಡಿದು 3 ತಿಂಗಳ ಪುಟ್ಟ ಮಗು ಮೃತಪಟ್ಟಿದೆ. ಮಗು ಕಳೆದುಕೊಂಡ ದಂಪತಿ ಜೀವನದಲ್ಲಿ ಮೌನ ಆವರಿಸಿದೆ.

ಕೆರೆಯಲ್ಲಿ ಮುಳುಗಿ ಇಬ್ಬರು ಸಾವು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗ್ರಾಮ ಗುಡುಗಳಲೆ ಬಳಿ ಕೆರೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. ಸತೀಶ್(35), ಚೇತನಾ(12) ಮೃತ ದುರ್ದೈವಿಗಳು. ಮೃತಪಟ್ಟಿದ್ದ ಸತೀಶ್ಗೆ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸತೀಶ್ ಚೇತನಾಳ‌ ಚಿಕ್ಕಪ್ಪ. ಮುಳುಗುತ್ತಿದ್ದ ಚೇತನಾಳ ರಕ್ಷಣೆಗೆ ಸತೀಶ್ ಮುಂದಾಗಿದ್ದ ಈ ವೇಳೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ, ನಾಲ್ವರ ಸಾವು ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ವವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದ್ದು ಈ ಘಟನೆ ಸಂಭವಿಸಿದೆ. ವಾಣಿಜ್ಯ ತೆರಿಗೆ ನಿರೀಕ್ಷಕ ಬಸವರಾಜ ಭೀಮರಾವ ಬೆಳ್ಳೂರು, ಪುತ್ರ ಭೀಮರಾವ ಬೆಳ್ಳೂರು, ಶಿವರಾಜ ಪಾಟೀಲ್, ಕಾರು ಚಾಲಕ ಬಸವರಾಜ ಕೊರಡಂಪಳ್ಳಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸರ್ಕಾರದಿಂದ 14 ದಿನಗಳ ಕಾಲ ಟಫ್ ರೂಲ್ಸ್ ಹಿನ್ನೆಲೆ ಬಸವರಾಜ ಭೀಮರಾವ್ ಪುತ್ರನನ್ನ ಕರೆತರಲು ಬಂದಿದ್ದರು. ಬೆಂಗಳೂರಿನಿಂದ ಚಿಂಚೋಳಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸಾವು

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ