AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಗೆ ಮನೆ ಚಾವಣಿ ಹಾರಿ ಜೋಳಿಗೆಯಲ್ಲಿದ್ದ 3 ತಿಂಗಳ ಮಗು ಸಾವು

ನಿನ್ನೆ ಸಾಯಂಕಾಲ ಸುರಗಿಹಳ್ಳಿ ಬಿರುಗಾಳಿ ಸಹಿತ ಮಳೆ ಶುರುವಾಗಿತ್ತು. ಈ ವೇಳೆ ಅಬ್ದುಲ್ ರೆಹಮಾನ್ ದಂಪತಿ ಎಂದಿನಂತೆ ಮನೆಯ ಚಾವಣಿ ಕಂಬಕ್ಕೆ ಜೋಳಿಗೆ ಕಟ್ಟಿ ಮಗು ಮಲಗಿಸಿದ್ದರು. ಆದ್ರೆ ಗಾಳಿಯ ರಭಸಕ್ಕೆ ಚಾವಣಿ ಜತೆ ಜೋಳಿಗೆ ಹಾರಿಹೋಗಿದೆ.

ಗಾಳಿಗೆ ಮನೆ ಚಾವಣಿ ಹಾರಿ ಜೋಳಿಗೆಯಲ್ಲಿದ್ದ 3 ತಿಂಗಳ ಮಗು ಸಾವು
3 ತಿಂಗಳ ಮಗು ಸಾವು
ಆಯೇಷಾ ಬಾನು
|

Updated on: Apr 28, 2021 | 1:43 PM

Share

ವಿಜಯಪುರ: ಭಾರಿ ಗಾಳಿಗೆ ಮನೆ ಚಾವಣಿ ಹಾರಿಹೋಗಿ ಮಗು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸುರಗಿಹಳ್ಳಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ದಂಪತಿಯ 3 ತಿಂಗಳ ಮಗು ಮೃತಪಟ್ಟಿದೆ.

ನಿನ್ನೆ ಸಾಯಂಕಾಲ ಸುರಗಿಹಳ್ಳಿ ಬಿರುಗಾಳಿ ಸಹಿತ ಮಳೆ ಶುರುವಾಗಿತ್ತು. ಈ ವೇಳೆ ಅಬ್ದುಲ್ ರೆಹಮಾನ್ ದಂಪತಿ ಎಂದಿನಂತೆ ಮನೆಯ ಚಾವಣಿ ಕಂಬಕ್ಕೆ ಜೋಳಿಗೆ ಕಟ್ಟಿ ಮಗು ಮಲಗಿಸಿದ್ದರು. ಆದ್ರೆ ಗಾಳಿಯ ರಭಸಕ್ಕೆ ಚಾವಣಿ ಜತೆ ಜೋಳಿಗೆ ಹಾರಿಹೋಗಿದೆ. ವಿದ್ಯುತ್ ಕಂಬಕ್ಕೆ ಜೋಳಿಗೆ ಬಡಿದು 3 ತಿಂಗಳ ಪುಟ್ಟ ಮಗು ಮೃತಪಟ್ಟಿದೆ. ಮಗು ಕಳೆದುಕೊಂಡ ದಂಪತಿ ಜೀವನದಲ್ಲಿ ಮೌನ ಆವರಿಸಿದೆ.

ಕೆರೆಯಲ್ಲಿ ಮುಳುಗಿ ಇಬ್ಬರು ಸಾವು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗ್ರಾಮ ಗುಡುಗಳಲೆ ಬಳಿ ಕೆರೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. ಸತೀಶ್(35), ಚೇತನಾ(12) ಮೃತ ದುರ್ದೈವಿಗಳು. ಮೃತಪಟ್ಟಿದ್ದ ಸತೀಶ್ಗೆ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸತೀಶ್ ಚೇತನಾಳ‌ ಚಿಕ್ಕಪ್ಪ. ಮುಳುಗುತ್ತಿದ್ದ ಚೇತನಾಳ ರಕ್ಷಣೆಗೆ ಸತೀಶ್ ಮುಂದಾಗಿದ್ದ ಈ ವೇಳೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ, ನಾಲ್ವರ ಸಾವು ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ವವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದ್ದು ಈ ಘಟನೆ ಸಂಭವಿಸಿದೆ. ವಾಣಿಜ್ಯ ತೆರಿಗೆ ನಿರೀಕ್ಷಕ ಬಸವರಾಜ ಭೀಮರಾವ ಬೆಳ್ಳೂರು, ಪುತ್ರ ಭೀಮರಾವ ಬೆಳ್ಳೂರು, ಶಿವರಾಜ ಪಾಟೀಲ್, ಕಾರು ಚಾಲಕ ಬಸವರಾಜ ಕೊರಡಂಪಳ್ಳಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸರ್ಕಾರದಿಂದ 14 ದಿನಗಳ ಕಾಲ ಟಫ್ ರೂಲ್ಸ್ ಹಿನ್ನೆಲೆ ಬಸವರಾಜ ಭೀಮರಾವ್ ಪುತ್ರನನ್ನ ಕರೆತರಲು ಬಂದಿದ್ದರು. ಬೆಂಗಳೂರಿನಿಂದ ಚಿಂಚೋಳಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸಾವು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?