AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನಾಯಕನೊಬ್ಬ 3 ತಿಂಗಳ ಹಿಂದೆ ಚಾಲೆಂಜ್ ಹಾಕಿದ್ದರ ಪರಿಣಾಮ ಇದು; ಆತನನ್ನು ಈಗ ಜೈಲಿಗೆ ಹಾಕಿಸುವೆ -ರಮೇಶ್ ಜಾರಕಿಹೊಳಿ

2020ರ ಫೆಬ್ರವರಿ 26ರಂದು ನಾನು ಸಚಿವನಾದೆ. ಆಗ ಒಬ್ಬ ಮಹಾನಾಯಕ ನನಗೆ ಚಾಲೆಂಜ್ ಹಾಕಿದ್ದ. ಈ ಇಲಾಖೆಯನ್ನ ಕೇವಲ 3 ತಿಂಗಳು ನಡೆಸ್ತಾನೆಂದಿದ್ದ. ನಾನು ರಾಜ್ಯವೇ ಮೆಚ್ಚುವಂತೆ ನನ್ನ ಇಲಾಖೆ ನಡೆಸಿದ್ದೆ. ಹೀಗಾಗಿ ನನ್ನ ವಿರುದ್ಧ ಅವರು ಷಡ್ಯಂತ್ರ ನಡೆಸಿದ್ದಾರೆ. ಆ ಮಹಾನಾಯಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಾನಾಯಕನೊಬ್ಬ 3 ತಿಂಗಳ ಹಿಂದೆ ಚಾಲೆಂಜ್ ಹಾಕಿದ್ದರ ಪರಿಣಾಮ ಇದು; ಆತನನ್ನು ಈಗ ಜೈಲಿಗೆ ಹಾಕಿಸುವೆ -ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ
ಆಯೇಷಾ ಬಾನು
| Edited By: |

Updated on:Mar 09, 2021 | 11:44 AM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ಬಿಡುಗಡೆಯಾದ ಸೆಕ್ಸ್ ಸಿಡಿ ಕೇಸ್ ಬಗ್ಗೆ ಸ್ಪಷ್ಟನೆ ನೀಡಲು ಇಂದು ಸದಾಶಿವನಗರದ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಮೇಶ್ ಜಾರಕಿಹೊಳಿ ಭಾವುಕರಾಗಿದ್ದಾರೆ. ಮಾನಸಿಕವಾಗಿ ತುಂಬಾ ನೊಂದಿದ್ದೇನೆ. ಷಡ್ಯಂತ್ರದಿಂದಲೇ ನನಗೆ ಹೀಗೆ ಮಾಡಿದ್ದಾರೆ ಅಂತಾ ಅಳಲು ತೋಡಿಕೊಂಡಿದ್ದಾರೆ. ಇನ್ನು ಈ ವೇಳೆ ಮಾತನಾಡಿದ ರಮೇಶ್ ಜಾರಕಿಹೊಳಿ ನಾಯಕರೊಬ್ಬರ ಮೇಲೆ ಆರೋಪ ಮಾಡಿದ್ದಾರೆ.

2020ರ ಫೆಬ್ರವರಿ 26ರಂದು ನಾನು ಸಚಿವನಾದೆ. ಆಗ ಒಬ್ಬ ಮಹಾನಾಯಕ ನನಗೆ ಚಾಲೆಂಜ್ ಹಾಕಿದ್ದ. ಈ ಇಲಾಖೆಯನ್ನ ಕೇವಲ 3 ತಿಂಗಳು ನಡೆಸ್ತಾನೆಂದಿದ್ದ. ನಾನು ರಾಜ್ಯವೇ ಮೆಚ್ಚುವಂತೆ ನನ್ನ ಇಲಾಖೆ ನಡೆಸಿದ್ದೆ. ಹೀಗಾಗಿ ನನ್ನ ವಿರುದ್ಧ ಅವರು ಷಡ್ಯಂತ್ರ ನಡೆಸಿದ್ದಾರೆ. ಆ ಮಹಾನಾಯಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಈ ವೇಳೆ ಮಾತನಾಡಿದ ರಮೇಶ್ ಜಾರಕಿಹೊಳಿ, ‘CD 100% ನಕಲಿ, ಈ CDಯಲ್ಲಿ ಸತ್ಯಾಂಶ ಇಲ್ಲ’ ಯುವತಿಗೆ ನೀಡಿರುವುದು 50 ಲಕ್ಷ ಅಲ್ಲ, 5 ಕೋಟಿ ರೂ.ವಿದೇಶದಲ್ಲಿ 2 ಫ್ಲ್ಯಾಟ್‌ಗಳನ್ನು ಕೊಡಿಸಿರುವ ಬಗ್ಗೆ ಮಾಹಿತಿ ಇದೆ ಎಂದಿದ್ದಾರೆ. ಬೇರೆ ಸೆಕ್ಸ್ ಹಗರಣಗಳಲ್ಲಿ 15-20 ಕೋಟಿ ಖರ್ಚು ಆದರೆ ನನ್ನನ್ನು ಮುಗಿಸಲು ನೂರಾರು ಕೋಟಿ ರೂ. ಖರ್ಚು ಮಾಡಿದ್ದಾರೆ. ರಾಜಕೀಯವಾಗಿ ಮುಗಿಸಲು ದೊಡ್ಡ ಷಡ್ಯಂತ್ರ ನಡೆದಿದೆ. 26 ಗಂಟೆ ಮೊದಲೇ CD ಬಿಡುಗಡೆ ಬಗ್ಗೆ ಹೈಕಮಾಂಡ್‌, ನನ್ನ ಹಿತೈಷಿಗಳು ಮಾಹಿತಿ ನೀಡಿದ್ದರು. ನಾಳೆ 5-6 ಗಂಟೆಗೆ CD ಬಿಡುಗಡೆ ಆಗುತ್ತೆಂದು ಹೇಳಿದ್ರು. ಭಯ ಪಡಬೇಡ, ಕಾನೂನು ಕ್ರಮಕೈಗೊಳ್ಳೋಣ ಎಂದಿದ್ರು. ಸಿಎಂ, ಬಸವರಾಜ ಬೊಮ್ಮಾಯಿ ಜತೆಯೂ ಚರ್ಚಿಸಿದ್ದೆ. ಸುಮಾರು ಒಂದು ಗಂಟೆ ಕಾಲ ಸಭೆಯಲ್ಲಿ ಭಾಗಿಯಾಗಿದ್ದೆ. ಸಿಎಂ ಎದುರು ಕುಳಿತಿದ್ದರು, ಬೊಮ್ಮಾಯಿ ಪಕ್ಕದಲ್ಲಿದ್ದರು. ನಾನು ಭಯಪಡಬೇಕಾದ ಅಗತ್ಯವಿರಲಿಲ್ಲ. ಏಕೆಂದರೆ ನಾನು ಯಾವುದೇ ತಪ್ಪು ಮಾಡಿರಲಿಲ್ಲ.

ನಾನು ಮತ್ತೆ ರಾಜಕೀಯಕ್ಕೆ ಬರುತ್ತೇನೋ ಇಲ್ವೋ ಗೊತ್ತಿಲ್ಲ. ನನಗೆ ರಾಜಕಾರಣದ ಮೇಲೆ ಆಸಕ್ತಿ ಇಲ್ಲ. ಅವರನ್ನು ಜೈಲಿಗೆ ಹಾಕುವವರೆಗೂ ಬಿಡುವುದಿಲ್ಲ. ಎಷ್ಟೇ ಖರ್ಚಾದ್ರೂ ಅವರನ್ನ ಜೈಲಿಗೆ ಹಾಕಿಸದೆ ಬಿಡುವುದಿಲ್ಲ. ಎಷ್ಟೇ ಪ್ರಭಾವಿಯಾಗಿದ್ದರೂ ಸರಿ, ಜೈಲಿಗೆ ಹಾಕಿಸುತ್ತೇನೆ ಎಂದು ಹೇಳಿದ್ರು.

ಇದನ್ನೂ ಓದಿ: Ramesh Jarkiholi Press Meet: ನಾನು ಅಪರಾಧಿಯಲ್ಲ, ಇಂತಹವು 10 ಬಂದರೂ ನಾನು ಎದುರಿಸಲು ಸಿದ್ಧ -ರಮೇಶ್ ಜಾರಕಿಹೊಳಿ

Published On - 11:13 am, Tue, 9 March 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ