AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸರಿಗೂ ಕಾಡುತ್ತಿದೆ ಕೊರೊನಾ: 3 ಸಾವು, 193 ಮಂದಿ ಹೋಂ ಕ್ವಾರಂಟೈನ್

ಪೊಲೀಸ್ ಇಲಾಖೆಯಲ್ಲೂ ಸಹ ಕೊರೊನಾ ಆರ್ಭಟ ಜೋರಾಗಿದೆ. ಬೆಂಗಳೂರಿನಲ್ಲಿ 2ನೇ ಅಲೆಯಲ್ಲಿ ಮೂವರು ಪೊಲೀಸರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತ ಪೊಲೀಸರಿಗಾಗಿ ಕಂಟ್ರೋಲ್ ರೂಂ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಪೊಲೀಸರಿಗೂ ಕಾಡುತ್ತಿದೆ ಕೊರೊನಾ:  3 ಸಾವು, 193 ಮಂದಿ ಹೋಂ ಕ್ವಾರಂಟೈನ್
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 21, 2021 | 12:52 PM

Share

ಬೆಂಗಳೂರು: ಮಹಾಮಾರಿ ಕೊರೊನಾ ದೇಶದ ಜನರಲ್ಲಿ ಭಯ ಹುಟ್ಟಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದರ ಜೊತೆಗೆ ಪೊಲೀಸ್ ಇಲಾಖೆಯಲ್ಲೂ ಸಹ ಕೊರೊನಾ ಆರ್ಭಟ ಜೋರಾಗಿದೆ. ಬೆಂಗಳೂರಿನಲ್ಲಿ 2ನೇ ಅಲೆಯಲ್ಲಿ ಮೂವರು ಪೊಲೀಸರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತ ಪೊಲೀಸರಿಗಾಗಿ ಕಂಟ್ರೋಲ್ ರೂಂ ಮಾಡಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿರ್ದೇಶನದ ಮೇರೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಂಟ್ರೋಲ್ ರೂಂ ಓಪನ್ ಮಾಡಲು ಸಿದ್ಧತೆ ನಡೆಯುತ್ತಿದೆ. ಇಲಾಖೆಯಲ್ಲಿ ಸಿಬ್ಬಂದಿಗೆ ಕೊರೊನಾ ಬಂದ್ರೆ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ದಿನದ 24 ಗಂಟೆಯೂ ಕಂಟ್ರೋಲ್ ರೂಂ ಕೆಲಸ ನಿರ್ವಹಿಸಲಿದೆ. ಕಂಟ್ರೋಲ್ಗಾಗಿ 7 ಮಂದಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತೆ.

ಆಯಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗಳಿಂದ ಆಸ್ಪತ್ರೆಗಳ ಮೇಲ್ವಿಚಾರಣೆಯನ್ನು ಡಿಸಿಪಿ ಡಾ.ಎಸ್.ಡಿ.ಶರಣಪ್ಪ ನಡೆಸಲಿದ್ದಾರೆ. ಸದ್ಯ 10 ಜನ ಪೊಲೀಸರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 193 ಪಾಸಿಟಿವ್ ಸಿಬ್ಬಂದಿ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದಾರೆ. ಇಂದು ಸಂಜೆಯಿಂದ ಅಥವಾ ನಾಳೆ ಬೆಳಗ್ಗೆಯಿಂದ ಕಂಟ್ರೋಲ್ ರೂಂ ಆರಂಭವಾಗುವ ಸಾಧ್ಯತೆ ಇದೆ.

ಪಶ್ಚಿಮ ವಿಭಾಗ-52, ಕೇಂದ್ರವಿಭಾಗ -5, ಉತ್ತರ ವಿಭಾಗ -15, ದಕ್ಷಿಣವಿಭಾಗ -19, ಪೂರ್ವ ವಿಭಾಗ-29, ಈಶಾನ್ಯ ವಿಭಾಗ-4, ಆಗ್ನೇಯ ವಿಭಾಗ-22, ವೈಟ್ ಫೀಲ್ಡ್ ವಿಭಾಗ-3, ಟ್ರಾಫಿಕ್ ಪೂರ್ವ ವಿಭಾಗ-13, ಸಂಚಾರಿ ಪಶ್ಚಿಮ ವಿಭಾಗ-13, ಸಂಚಾರಿ ಉತ್ತರ ವಿಭಾಗ-5, ಸಿಎಆರ್ ಹೆಡ್ ಕ್ವಾಟ್ರಸ್-11, ಸಿಎಆರ್ ಉತ್ತರ ವಿಭಾಗ-2

ಇದನ್ನೂ ಓದಿ: ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ