AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು

ಮೇ ಒಂದೇ ತಿಂಗಳಲ್ಲಿ 320 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 62,922 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಇದುವರೆಗೂ 1,640 ಸೋಂಕಿತರು ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲೇ ಸಾವಿನ ಸಂಖ್ಯೆ ಸಹಾ ಅಧಿಕವಾಗಿದೆ. ಇನ್ನು ಜೂನ್ ತಿಂಗಳ‌ ಮೊದಲ ದಿನವೇ 15 ಸೋಂಕಿಯರು ಕೊರೊನಾಗೆ ಬಲಿಯಾಗಿದ್ದಾರೆ.

ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jun 02, 2021 | 9:35 AM

Share

ಮೈಸೂರು: ಮಹಾಮಾರಿ ಕೊರೊನಾ ಮತ್ತಷ್ಟು ಬಲಿಷ್ಟವಾಗಿ ಮುನ್ನುಗ್ಗುತ್ತಿದೆ. ಸಾವಿನ ಸಂಖ್ಯೆ ಮತ್ತು ಸೋಂಕಿತರ ಸಂಖ್ಯೆಯಲ್ಲಿ ಒಟ್ಟು ಪ್ರಮಾಣ ಕಡಿಮೆಯಾಗುತ್ತಿಲ್ಲ. ಈಗ ಕೊರೊನಾ ಎರಡನೇ ಅಲೆ ಮೈಸೂರಿಗೆ ಶಾಪವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಮೇ ಒಂದೇ ತಿಂಗಳಲ್ಲಿ 320 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 62,922 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಇದುವರೆಗೂ 1,640 ಸೋಂಕಿತರು ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲೇ ಸಾವಿನ ಸಂಖ್ಯೆ ಸಹಾ ಅಧಿಕವಾಗಿದೆ. ಇನ್ನು ಜೂನ್ ತಿಂಗಳ‌ ಮೊದಲ ದಿನವೇ 15 ಸೋಂಕಿಯರು ಕೊರೊನಾಗೆ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಸಂಭವಿಸುತ್ತಿರುವ ಸಾವಿನ ಸಂಖ್ಯೆಯಿಂದ ಆತಂಕ ಸೃಷ್ಟಿಯಾಗಿದೆ.

ಒಂದೇ ಕುಟುಂಬದ ಮೂವರು ಕೊವಿಡ್‌ಗೆ ಬಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಲ್‌ನ ಗ್ರಾಮವೊಂದರಲ್ಲಿ ಒಂದೇ ಕುಟುಂಬದ ಮೂವರು ಕೊವಿಡ್‌ಗೆ ಬಲಿಯಾಗಿದ್ದಾರೆ. 5 ದಿನದ ಅಂತರದಲ್ಲಿ ಕೊವಿಡ್‌ನಿಂದ ತಂದೆ ಅಣ್ಣಯ್ಯ(75) ಮಗ ತಮ್ಮೇಗೌಡ(50), ಸೊಸೆ ಸುಮಾ(38) ಮೃತಪಟ್ಟಿದ್ದಾರೆ.

ನಾಲ್ಕು ದಿನದ ಹಿಂದೆ ಅಣ್ಣಯ್ಯರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಆದರೆ ಅಣ್ಣಯ್ಯ ಮೊದಲು‌ ಮೃತಪಟ್ಟಿದ್ದಾರೆ. ಇನ್ನು ತಮ್ಮೇಗೌಡ ಮತ್ತು ಸುಮ‌ ಇಬ್ಬರೂ ಹಾಸನದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಂಪತಿ ಮೃತಪಟ್ಟಿದ್ದಾರೆ. ಸದ್ಯ ಮನೆಯಲ್ಲಿ 22 ವರ್ಷದ ಮಗಳು ಮತ್ತು 20 ವರ್ಷದ ಮಗ ಇದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಇದನ್ನೂ ಓದಿ: ಭಾರತದ ಪಾಲಿಗೆ ಮೇ ತಿಂಗಳು ಕರಾಳ; ಕೊರೊನಾ ಸೋಂಕಿತರ ಪ್ರಮಾಣ ಹಾಗೂ ಸಾವು ಎರಡರಲ್ಲೂ ವಿಶ್ವ ದಾಖಲೆ

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ