AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು

ಮೇ ಒಂದೇ ತಿಂಗಳಲ್ಲಿ 320 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 62,922 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಇದುವರೆಗೂ 1,640 ಸೋಂಕಿತರು ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲೇ ಸಾವಿನ ಸಂಖ್ಯೆ ಸಹಾ ಅಧಿಕವಾಗಿದೆ. ಇನ್ನು ಜೂನ್ ತಿಂಗಳ‌ ಮೊದಲ ದಿನವೇ 15 ಸೋಂಕಿಯರು ಕೊರೊನಾಗೆ ಬಲಿಯಾಗಿದ್ದಾರೆ.

ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jun 02, 2021 | 9:35 AM

Share

ಮೈಸೂರು: ಮಹಾಮಾರಿ ಕೊರೊನಾ ಮತ್ತಷ್ಟು ಬಲಿಷ್ಟವಾಗಿ ಮುನ್ನುಗ್ಗುತ್ತಿದೆ. ಸಾವಿನ ಸಂಖ್ಯೆ ಮತ್ತು ಸೋಂಕಿತರ ಸಂಖ್ಯೆಯಲ್ಲಿ ಒಟ್ಟು ಪ್ರಮಾಣ ಕಡಿಮೆಯಾಗುತ್ತಿಲ್ಲ. ಈಗ ಕೊರೊನಾ ಎರಡನೇ ಅಲೆ ಮೈಸೂರಿಗೆ ಶಾಪವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಮೇ ಒಂದೇ ತಿಂಗಳಲ್ಲಿ 320 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 62,922 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಇದುವರೆಗೂ 1,640 ಸೋಂಕಿತರು ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲೇ ಸಾವಿನ ಸಂಖ್ಯೆ ಸಹಾ ಅಧಿಕವಾಗಿದೆ. ಇನ್ನು ಜೂನ್ ತಿಂಗಳ‌ ಮೊದಲ ದಿನವೇ 15 ಸೋಂಕಿಯರು ಕೊರೊನಾಗೆ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಸಂಭವಿಸುತ್ತಿರುವ ಸಾವಿನ ಸಂಖ್ಯೆಯಿಂದ ಆತಂಕ ಸೃಷ್ಟಿಯಾಗಿದೆ.

ಒಂದೇ ಕುಟುಂಬದ ಮೂವರು ಕೊವಿಡ್‌ಗೆ ಬಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಲ್‌ನ ಗ್ರಾಮವೊಂದರಲ್ಲಿ ಒಂದೇ ಕುಟುಂಬದ ಮೂವರು ಕೊವಿಡ್‌ಗೆ ಬಲಿಯಾಗಿದ್ದಾರೆ. 5 ದಿನದ ಅಂತರದಲ್ಲಿ ಕೊವಿಡ್‌ನಿಂದ ತಂದೆ ಅಣ್ಣಯ್ಯ(75) ಮಗ ತಮ್ಮೇಗೌಡ(50), ಸೊಸೆ ಸುಮಾ(38) ಮೃತಪಟ್ಟಿದ್ದಾರೆ.

ನಾಲ್ಕು ದಿನದ ಹಿಂದೆ ಅಣ್ಣಯ್ಯರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಆದರೆ ಅಣ್ಣಯ್ಯ ಮೊದಲು‌ ಮೃತಪಟ್ಟಿದ್ದಾರೆ. ಇನ್ನು ತಮ್ಮೇಗೌಡ ಮತ್ತು ಸುಮ‌ ಇಬ್ಬರೂ ಹಾಸನದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಂಪತಿ ಮೃತಪಟ್ಟಿದ್ದಾರೆ. ಸದ್ಯ ಮನೆಯಲ್ಲಿ 22 ವರ್ಷದ ಮಗಳು ಮತ್ತು 20 ವರ್ಷದ ಮಗ ಇದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಇದನ್ನೂ ಓದಿ: ಭಾರತದ ಪಾಲಿಗೆ ಮೇ ತಿಂಗಳು ಕರಾಳ; ಕೊರೊನಾ ಸೋಂಕಿತರ ಪ್ರಮಾಣ ಹಾಗೂ ಸಾವು ಎರಡರಲ್ಲೂ ವಿಶ್ವ ದಾಖಲೆ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ