AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು

ಮೇ ಒಂದೇ ತಿಂಗಳಲ್ಲಿ 320 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 62,922 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಇದುವರೆಗೂ 1,640 ಸೋಂಕಿತರು ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲೇ ಸಾವಿನ ಸಂಖ್ಯೆ ಸಹಾ ಅಧಿಕವಾಗಿದೆ. ಇನ್ನು ಜೂನ್ ತಿಂಗಳ‌ ಮೊದಲ ದಿನವೇ 15 ಸೋಂಕಿಯರು ಕೊರೊನಾಗೆ ಬಲಿಯಾಗಿದ್ದಾರೆ.

ಮೈಸೂರು; ಒಂದು ತಿಂಗಳಲ್ಲಿ ಕೊರೊನಾಗೆ 320 ಸಾವು, ಪೋಷಕರನ್ನು ಕಳೆದುಕೊಂಡು ತಬ್ಬಲಿಯಾದ ಮಕ್ಕಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 02, 2021 | 9:35 AM

Share

ಮೈಸೂರು: ಮಹಾಮಾರಿ ಕೊರೊನಾ ಮತ್ತಷ್ಟು ಬಲಿಷ್ಟವಾಗಿ ಮುನ್ನುಗ್ಗುತ್ತಿದೆ. ಸಾವಿನ ಸಂಖ್ಯೆ ಮತ್ತು ಸೋಂಕಿತರ ಸಂಖ್ಯೆಯಲ್ಲಿ ಒಟ್ಟು ಪ್ರಮಾಣ ಕಡಿಮೆಯಾಗುತ್ತಿಲ್ಲ. ಈಗ ಕೊರೊನಾ ಎರಡನೇ ಅಲೆ ಮೈಸೂರಿಗೆ ಶಾಪವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಮೇ ಒಂದೇ ತಿಂಗಳಲ್ಲಿ 320 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 62,922 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಇದುವರೆಗೂ 1,640 ಸೋಂಕಿತರು ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲೇ ಸಾವಿನ ಸಂಖ್ಯೆ ಸಹಾ ಅಧಿಕವಾಗಿದೆ. ಇನ್ನು ಜೂನ್ ತಿಂಗಳ‌ ಮೊದಲ ದಿನವೇ 15 ಸೋಂಕಿಯರು ಕೊರೊನಾಗೆ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಸಂಭವಿಸುತ್ತಿರುವ ಸಾವಿನ ಸಂಖ್ಯೆಯಿಂದ ಆತಂಕ ಸೃಷ್ಟಿಯಾಗಿದೆ.

ಒಂದೇ ಕುಟುಂಬದ ಮೂವರು ಕೊವಿಡ್‌ಗೆ ಬಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಲ್‌ನ ಗ್ರಾಮವೊಂದರಲ್ಲಿ ಒಂದೇ ಕುಟುಂಬದ ಮೂವರು ಕೊವಿಡ್‌ಗೆ ಬಲಿಯಾಗಿದ್ದಾರೆ. 5 ದಿನದ ಅಂತರದಲ್ಲಿ ಕೊವಿಡ್‌ನಿಂದ ತಂದೆ ಅಣ್ಣಯ್ಯ(75) ಮಗ ತಮ್ಮೇಗೌಡ(50), ಸೊಸೆ ಸುಮಾ(38) ಮೃತಪಟ್ಟಿದ್ದಾರೆ.

ನಾಲ್ಕು ದಿನದ ಹಿಂದೆ ಅಣ್ಣಯ್ಯರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಆದರೆ ಅಣ್ಣಯ್ಯ ಮೊದಲು‌ ಮೃತಪಟ್ಟಿದ್ದಾರೆ. ಇನ್ನು ತಮ್ಮೇಗೌಡ ಮತ್ತು ಸುಮ‌ ಇಬ್ಬರೂ ಹಾಸನದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಂಪತಿ ಮೃತಪಟ್ಟಿದ್ದಾರೆ. ಸದ್ಯ ಮನೆಯಲ್ಲಿ 22 ವರ್ಷದ ಮಗಳು ಮತ್ತು 20 ವರ್ಷದ ಮಗ ಇದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಇದನ್ನೂ ಓದಿ: ಭಾರತದ ಪಾಲಿಗೆ ಮೇ ತಿಂಗಳು ಕರಾಳ; ಕೊರೊನಾ ಸೋಂಕಿತರ ಪ್ರಮಾಣ ಹಾಗೂ ಸಾವು ಎರಡರಲ್ಲೂ ವಿಶ್ವ ದಾಖಲೆ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್