AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಾವತಿ ಹಿನ್ನೀರಿನಲ್ಲಿ ಮಗುಚಿದ ತೆಪ್ಪ: ಐವರ ಪೈಕಿ ಮೂವರು ನಾಪತ್ತೆ

ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪು ಮಗುಚಿ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಐವರು ಯುವಕರು ಪ್ರವಾಸಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸದ್ಯ ನಾಪತ್ತೆಯಾಗಿರುವವರಿಗಾಗಿ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆದಿದೆ.

ಶರಾವತಿ ಹಿನ್ನೀರಿನಲ್ಲಿ ಮಗುಚಿದ ತೆಪ್ಪ: ಐವರ ಪೈಕಿ ಮೂವರು ನಾಪತ್ತೆ
ಶರಾವತಿ ಹಿನ್ನೀರಿನಲ್ಲಿ ಮಗುಚಿದ ತೆಪ್ಪ: ಐವರ ಪೈಕಿ ಮೂವರು ನಾಪತ್ತೆ
Basavaraj Yaraganavi
| Edited By: |

Updated on:Nov 13, 2024 | 8:24 PM

Share

ಶಿವಮೊಗ್ಗ, ನವೆಂಬರ್​ 13: ತೆಪ್ಪ ಮಗುಚಿ ಮೂವರು ಯುವಕರು ನಾಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ (Sharavati Backwaters) ನಡೆದಿದೆ. ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು ಚೇತನ್ ನಾಪತ್ತೆಯಾಗಿದ್ದು, ನವೀನ್ ಹಾಗೂ ಯಶ್ವಂತ್‌ ಈಜಿಕೊಂಡು ದಡ ಸೇರಿದ್ದಾರೆ. ಮೂವರು ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ಆರಂಭವಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ ಮೇಲೇರಿದ ಬಸ್: ​ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​ ಡಿವೈಡರ್​ ಮೇಲೇರಿದ ಘಟನೆ ನಗರದ ಹೊಳೆ ಬಸ್ ನಿಲ್ದಾಣದ ಬಳಿ ನಡೆದಿದೆ. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹತ್ತಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಹತ್ತು ದಿನದ ಹಿಂದಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದ ಉಪನ್ಯಾಸಕ: ಕಾಲೇಜ್​​ ಕ್ವಾರ್ಟರ್ಸ್​ನಲ್ಲಿ ನೇಣಿಗೆ ಶರಣು

ಡಿವೈಡರ್ ಮೇಲೆರಿದ ಹಿನ್ನೆಲೆ ಬಸ್ಸಿನ ಮುಂಭಾಗದ ಬಾಗಿಲು ತೆಗೆಯಲು ಪ್ರಯಾಣಿಕರು ಪರದಾಡಿದ್ದಾರೆ. ಬಳಿಕ ತುರ್ತು ನಿರ್ಗಮನ ಕಿಟಕಿಯಿಂದ ಇಳಿದಿದ್ದಾರೆ. ಅಪಘಾತದಿಂದ ಬಸ್ಸಿನ ಮುಂಭಾಗ ನುಜ್ಜುಗುಜ್ಜಾಗಿದೆ.

ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟವಾಗಿ ಮರಕ್ಕೆ ಡಿಕ್ಕಿ: ಓರ್ವ ಸಾವು

ತುಮಕೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟವಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ರಾಜೇಂದ್ರಪುರ ಗೇಟ್ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ದುರ್ಘಟನೆ ಸಂಭವಿದೆ. ಮಂಡ್ಯ ಮೂಲದ 28 ವರ್ಷದ ಆಕರ್ಷ್ ಮೃತ ವ್ಯಕ್ತಿ.

ಇದನ್ನೂ ಓದಿ: ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರ ಫಹೀಮ್ ಉತ್ತರ ಪ್ರದೇಶದಲ್ಲಿ ಬಂಧನ: ಮನೆ ಬುಲ್ಡೋಜರ್​ನಿಂದ ನೆಲಸಮ

ತುಮಕೂರಿನಲ್ಲಿ ಮದುವೆ ಮುಗಿಸಿ ಕಾರಿನಲ್ಲಿ ಮಂಡ್ಯಕ್ಕೆ ತೆರಳುತ್ತಿದ್ದರು. ಘಟನೆಯಲ್ಲಿ ಶಶಾಂಕ್ ಗೌಡ, ಜ್ಞಾನೇಶ್ವರಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 3 ತಿಂಗಳ ಹಿಂದೆಷ್ಟೇ ಶಶಾಂಕ್ ಗೌಡ ಮತ್ತು ಜ್ಞಾನೇಶ್ವರಿ ವಿವಾಹವಾಗಿದ್ದರು. ಮರಣೋತ್ತರ ಪರೀಕ್ಷೆಗಾಗಿ ಆಕರ್ಷ್ ಶವ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:13 pm, Wed, 13 November 24

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ