AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರ ಪಡೆಯುವುದಕ್ಕೆ ಬೆರಳಚ್ಚು ಕಡ್ಡಾಯವಲ್ಲ; ಆರೋಗ್ಯ ಇಲಾಖೆ

ಕೊರೊನಾ ಸೋಂಕು ಹರಡುವಿಕೆಯ ಬಗ್ಗೆ ಗಮನಹರಿಸಿ ಎಚ್ಚೇತ್ತು ಕೊಂಡ ಆರೋಗ್ಯ ಇಲಾಖೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.

ಪಡಿತರ ಪಡೆಯುವುದಕ್ಕೆ ಬೆರಳಚ್ಚು ಕಡ್ಡಾಯವಲ್ಲ; ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 12, 2021 | 5:33 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇನ್ನು ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಸರ್ಕಾರ ಲಾಕ್​ಡೌನ್ ಘೋಷಿಸಿದೆ. ಹೀಗಿರುವಾಗಲೇ ಕೊರೊನಾ ಸೋಂಕು ಹರಡುವಿಕೆಯ ಬಗ್ಗೆ ಗಮನಹರಿಸಿ ಎಚ್ಚೇತ್ತು ಕೊಂಡ ಆರೋಗ್ಯ ಇಲಾಖೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.

ಪಡಿತರ ವಿವರ ಪಡೆಯಲು ಬಂದಿದೆ ಹೊಸ ಆ್ಯಪ್ ದೇಶದ ಪಡಿತರ ಚೀಟಿದಾರರಿಗೆ ಸಹಕಾರಿಯಾಗಬಲ್ಲ ಆ್ಯಂಡ್ರಾಯ್ಡ್ ಆ್ಯಪ್ ಆ್ಯಪ್ ಒಂದನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ. ಮಹತ್ವಾಕಾಂಕ್ಷಿ ಒನ್ ನೇಶನ್ ಒನ್ ರೇಷನ್ ಕಾರ್ಡ ಯೋಜನೆ ಜಾರಿಗೆ ಸಹಾಯಕಾರಿ ಆಗಬಲ್ಲ ಈ ಆ್ಯಪ್​ಗೆ‘ಮೇರಾ ರೇಷನ್’ ಎಂದು ಹೆಸರಿಸಲಾಗಿದೆ. ಮೇರಾ ರೇಷನ್ ಆ್ಯಪ್ ಪಡಿತರ ಚೀಟಿ ಹೊಂದಿರುವ ವಲಸೆ ಕಾರ್ಮಿಕರಿಗೆ ಹೆಚ್ಚು ಉಪಯೋಗವಾಗಲಿದೆ. ಅಲ್ಲದೇ ದೇಶದ ಎಲ್ಲಾ ಬಿಪಿಎಲ್ ಕಾರ್ಡುದಾರರು ಈ ಆ್ಯಪ್​ನ ಪ್ರಯೋಜನ ಪಡೆಯಬಹುದಾಗಿದೆ.

ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಯ ವಿವರ, ಹಿಂದಿನ ಬಾರಿ ಪಡೆದ ಪಡಿತರದ ವಿವರ ಮತ್ತು ಪಡಿತರ ಚೀಟಿ​ಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಪಡೆಯಲು ಮೇರಾ ರೇಷನ್ ಆ್ಯಪ್ ಸಹಕಾರಿಯಾಗಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿ ಹೊಂದಿದವರು ತಮಗೆ ದೊರೆಯುವ ಪಡಿತರದ ವಿವರವನ್ನು ಮೇರಾ ರೇಷನ್ ಆ್ಯಪ್ ಮೂಲಕ ಪರಿಶೀಲನೆ ಮಾಡಿಕೊಳ್ಳಬಹುದು. ಇದೀಗ ಒಂದು ದೇಶ, ಒಂದು ರೇಷನ್ ​ಕಾರ್ಡ್​ ಯೋಜನೆಯನ್ನು ಉತ್ತರ ಪ್ರದೇಶದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲು ’ಮೇರಾ ರೇಷನ್’ ಎಂಬ ಆ್ಯಪ್ ಬಿಡುಗಡೆ ಮಾಡಲಾಗಿದೆ.

ಸದ್ಯ ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಮಾತ್ರ ಮೇರಾ ರೇಷನ್ ಆ್ಯಪ್ ಲಭ್ಯವಿದೆ. ಮುಂದಿನ ದಿನಗಳಲ್ಲಿ ದೇಶದ ವಿವಿಧ 14 ಭಾಷೆಗಳಲ್ಲಿ ಈ ಆ್ಯಪ್​ ಬಿಡುಗಡೆ ಮಾಡಲಿದ್ದೇವೆ ಎಂದು ಆ್ಯಪ್ ರಚಿಸಿದ ನ್ಯಾಷನಲ್ ಇನ್ಫಾರ್ಮೇಶನ್ ಸೆಂಟರ್ ತಿಳಿಸಿದೆ.

ಇದನ್ನೂ ಓದಿ:

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

ಬಿಪಿಎಲ್ ಕಾರ್ಡುದಾರರೇ ಇತ್ತ ಗಮನಿಸಿ.. ಪಡಿತರ ವಿವರ ಪಡೆಯಲು ಬಂದಿದೆ ಹೊಸ ಆ್ಯಪ್

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?