AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರ ಪಡೆಯುವುದಕ್ಕೆ ಬೆರಳಚ್ಚು ಕಡ್ಡಾಯವಲ್ಲ; ಆರೋಗ್ಯ ಇಲಾಖೆ

ಕೊರೊನಾ ಸೋಂಕು ಹರಡುವಿಕೆಯ ಬಗ್ಗೆ ಗಮನಹರಿಸಿ ಎಚ್ಚೇತ್ತು ಕೊಂಡ ಆರೋಗ್ಯ ಇಲಾಖೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.

ಪಡಿತರ ಪಡೆಯುವುದಕ್ಕೆ ಬೆರಳಚ್ಚು ಕಡ್ಡಾಯವಲ್ಲ; ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 12, 2021 | 5:33 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇನ್ನು ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಸರ್ಕಾರ ಲಾಕ್​ಡೌನ್ ಘೋಷಿಸಿದೆ. ಹೀಗಿರುವಾಗಲೇ ಕೊರೊನಾ ಸೋಂಕು ಹರಡುವಿಕೆಯ ಬಗ್ಗೆ ಗಮನಹರಿಸಿ ಎಚ್ಚೇತ್ತು ಕೊಂಡ ಆರೋಗ್ಯ ಇಲಾಖೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.

ಪಡಿತರ ವಿವರ ಪಡೆಯಲು ಬಂದಿದೆ ಹೊಸ ಆ್ಯಪ್ ದೇಶದ ಪಡಿತರ ಚೀಟಿದಾರರಿಗೆ ಸಹಕಾರಿಯಾಗಬಲ್ಲ ಆ್ಯಂಡ್ರಾಯ್ಡ್ ಆ್ಯಪ್ ಆ್ಯಪ್ ಒಂದನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ. ಮಹತ್ವಾಕಾಂಕ್ಷಿ ಒನ್ ನೇಶನ್ ಒನ್ ರೇಷನ್ ಕಾರ್ಡ ಯೋಜನೆ ಜಾರಿಗೆ ಸಹಾಯಕಾರಿ ಆಗಬಲ್ಲ ಈ ಆ್ಯಪ್​ಗೆ‘ಮೇರಾ ರೇಷನ್’ ಎಂದು ಹೆಸರಿಸಲಾಗಿದೆ. ಮೇರಾ ರೇಷನ್ ಆ್ಯಪ್ ಪಡಿತರ ಚೀಟಿ ಹೊಂದಿರುವ ವಲಸೆ ಕಾರ್ಮಿಕರಿಗೆ ಹೆಚ್ಚು ಉಪಯೋಗವಾಗಲಿದೆ. ಅಲ್ಲದೇ ದೇಶದ ಎಲ್ಲಾ ಬಿಪಿಎಲ್ ಕಾರ್ಡುದಾರರು ಈ ಆ್ಯಪ್​ನ ಪ್ರಯೋಜನ ಪಡೆಯಬಹುದಾಗಿದೆ.

ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಯ ವಿವರ, ಹಿಂದಿನ ಬಾರಿ ಪಡೆದ ಪಡಿತರದ ವಿವರ ಮತ್ತು ಪಡಿತರ ಚೀಟಿ​ಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಪಡೆಯಲು ಮೇರಾ ರೇಷನ್ ಆ್ಯಪ್ ಸಹಕಾರಿಯಾಗಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿ ಹೊಂದಿದವರು ತಮಗೆ ದೊರೆಯುವ ಪಡಿತರದ ವಿವರವನ್ನು ಮೇರಾ ರೇಷನ್ ಆ್ಯಪ್ ಮೂಲಕ ಪರಿಶೀಲನೆ ಮಾಡಿಕೊಳ್ಳಬಹುದು. ಇದೀಗ ಒಂದು ದೇಶ, ಒಂದು ರೇಷನ್ ​ಕಾರ್ಡ್​ ಯೋಜನೆಯನ್ನು ಉತ್ತರ ಪ್ರದೇಶದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲು ’ಮೇರಾ ರೇಷನ್’ ಎಂಬ ಆ್ಯಪ್ ಬಿಡುಗಡೆ ಮಾಡಲಾಗಿದೆ.

ಸದ್ಯ ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಮಾತ್ರ ಮೇರಾ ರೇಷನ್ ಆ್ಯಪ್ ಲಭ್ಯವಿದೆ. ಮುಂದಿನ ದಿನಗಳಲ್ಲಿ ದೇಶದ ವಿವಿಧ 14 ಭಾಷೆಗಳಲ್ಲಿ ಈ ಆ್ಯಪ್​ ಬಿಡುಗಡೆ ಮಾಡಲಿದ್ದೇವೆ ಎಂದು ಆ್ಯಪ್ ರಚಿಸಿದ ನ್ಯಾಷನಲ್ ಇನ್ಫಾರ್ಮೇಶನ್ ಸೆಂಟರ್ ತಿಳಿಸಿದೆ.

ಇದನ್ನೂ ಓದಿ:

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

ಬಿಪಿಎಲ್ ಕಾರ್ಡುದಾರರೇ ಇತ್ತ ಗಮನಿಸಿ.. ಪಡಿತರ ವಿವರ ಪಡೆಯಲು ಬಂದಿದೆ ಹೊಸ ಆ್ಯಪ್

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ