AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕು, ಸೆಪ್ಟೆಂಬರ್ 5ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಳ್ಳಲಿದ್ದು, ಸೆಪ್ಟೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆಯಾಗಲಿದೆ.

Karnataka Rain: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕು, ಸೆಪ್ಟೆಂಬರ್ 5ರವರೆಗೆ ಈ ಜಿಲ್ಲೆಗಳಲ್ಲಿ ಮಳೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on:Aug 28, 2023 | 7:28 AM

Share

ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಳ್ಳಲಿದ್ದು, ಸೆಪ್ಟೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆಯಾಗಲಿದೆ.

ಸಿಂಧನೂರು, ಗುಬ್ಬಿ, ಚಿಕ್ಕನಹಳ್ಳಿ, ಬೇವೂರು, ಯಲಬುರ್ಗಾ, ಕವಡಿಮಟ್ಟಿ, ಹೊಸಕೋಟೆ, ಶೃಂಗೇರಿ, ಬೆಳ್ಳೂರು, ದಾವಣಗೆರೆ, ಕುಕ್ಕನೂರು, ಮುನಿರಾಬಾದ್, ರಾಯಚೂರು, ದೇವದುರ್ಗ, ಶೋರಾಪುರ, ಚನ್ನಗಿರಿ, ಶಿವಮೊಗ್ಗ, ಕಡೂರು, ಕೊಟ್ಟೂರಿನಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷಗಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸೆ.3ರವರೆಗೆ ಮಳೆ

ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಮುಂಗಾರಿನಲ್ಲಿ ಇದುವರೆಗೆ ಸರಾಸರಿಗಿಂತ ಕಡಿಮೆ ಮಳೆಯನ್ನು ಕಂಡಿರುವ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ವ್ಯಾಪಕ ಮಳೆಯಾಗಲಿದೆ. ಮಿಂಚು ನಿರೀಕ್ಷಿಸಲಾಗಿದೆ. ಕೇರಳ ಮತ್ತು ನೆರೆಯ ತಮಿಳುನಾಡು ರಾಜ್ಯಗಳಿಗೆ ಮುಂದಿನ ಮೂರು ದಿನಗಳ ಕಾಲ ಬಿಸಿ ಮತ್ತು ಆರ್ದ್ರ ವಾತಾವರಣವಿರಲಿದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:26 am, Mon, 28 August 23