AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger Census 2022: ಹುಲಿ ಗಣತಿ 2022ರ ವರದಿ ಬಿಡುಗಡೆ: ಕರ್ನಾಟಕಕ್ಕೆ ಮತ್ತೆ 2ನೇ ಸ್ಥಾನ

ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ಮೊದಲ ಸ್ಥಾನದ ನಿರೀಕ್ಷೆಯಲ್ಲಿದ್ದ ಕರ್ನಾಟಕ ಮತ್ತೆ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಮಧ್ಯಪ್ರದೇಶ ಮೊದಲ ಸ್ಥಾನ ಪಡೆದಿದೆ.

Tiger Census 2022: ಹುಲಿ ಗಣತಿ 2022ರ ವರದಿ ಬಿಡುಗಡೆ: ಕರ್ನಾಟಕಕ್ಕೆ ಮತ್ತೆ 2ನೇ ಸ್ಥಾನ
ಹುಲಿ ಗಣತಿ 2022ರ ವರದಿ ಬಿಡುಗಡೆ ಮಾಡಿದ ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರImage Credit source: iStock Photo
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on: Jul 29, 2023 | 7:28 PM

ಮೈಸೂರು, ಜುಲೈ 29: ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ (Tiger Census) ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ವರದಿ ಪ್ರಕಾರ, ಮೊದಲ ಸ್ಥಾನವನ್ನು ಮಧ್ಯಪ್ರದೇಶ (Madhya Pradesh) ಪಡೆದುಕೊಂಡಿದ್ದು, ಕರ್ನಾಟಕ (Karnataka) ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಉತ್ತರಾಖಂಡ (Uttarakhand) ರಾಜ್ಯ ಪಡೆದುಕೊಂಡಿದೆ.

2022ರ ಹುಲಿ ಗಣತಿ ವರದಿ ಪ್ರಕಾರ, ಕರ್ನಾಟಕದಲ್ಲಿ 563 ಹುಲಿಗಳಿವೆ. ಮೊದಲ ಸ್ಥಾನ ಪಡೆದಿರುವ ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು, ಮೂರನೇ ಸ್ಥಾನದಲ್ಲಿರುವ ಉತ್ತರಾಖಂಡದಲ್ಲಿ 560 ಹುಲಿಗಳಿವೆ. ಒಟ್ಟಾರೆಯಾಗಿ ಭಾರತ ದೇಶದಲ್ಲಿ ಒಟ್ಟು ಹುಲಿಗಳ ಸಂಖ್ಯೆ 3,682 ಇದೆ.

ಇದನ್ನೂ ಓದಿ: Tiger Day: ವಿವಿಧ ಭಾಷೆಗಳಲ್ಲಿ ಹುಲಿಯನ್ನು ಏನೆಂದು ಕರೆಯುತ್ತಾರೆ ಗೊತ್ತಾ?

2018 ರ ಗಣತಿಯಲ್ಲಿ ಮಧ್ಯಪ್ರದೇಶ ಮತ್ತು ಕರ್ನಾಟಕಕ್ಕೂ ಕೇವಲ ಎರಡು ಹುಲಿಯಷ್ಟೆ ವ್ಯತ್ಯಾಸ ಇತ್ತು. ಹೀಗಾಗಿ ಈ ಬಾರಿ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿ ಕರ್ನಾಟಕ ಇತ್ತು. ಆದರೆ ಈ ಬಾರಿ 222 ಹುಲಿಗಳ ವ್ಯತ್ಯಾಸ ಕಂಡುಬಂದಿದೆ. ಅಂದರೆ, ಮಧ್ಯಪ್ರದೇಶದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಹೀಗಾಗಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ಈ ಸಮೀಕ್ಷಾ ವರದಿ ಎಚ್ಚರಿಕೆ ಗಂಟೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ