ಕಾಟಾಚಾರಕ್ಕೆ ಸೆಲೆಬ್ರಿಟಿ ಮನೆಗಳ ಪರಿಶೀಲನೆ, ನಾಮಕಾವಸ್ತೆ ನೊಟೀಸ್: ಅನುಮಾನ ಮೂಡಿಸಿದ ಅರಣ್ಯಾಧಿಕಾರಿಗಳ ನಡೆ

| Updated By: Digi Tech Desk

Updated on: Oct 26, 2023 | 12:35 PM

ಹುಲಿ ಉಗುರಿನ ಲಾಕೆಟ್​ ಧರಿಸಿದ ಪ್ರಕರಣದಲ್ಲಿ ಬಿಗ್​ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ಏಕಾಏಕಿ ಬಂಧಿಸಲಾಗಿದೆ. ಆದ್ರೆ, ಇನ್ನುಳಿದ ಹಲವು ಪ್ರಮುಖ ವ್ಯಕ್ತಿಗಳ ಬಂಧನವಾಗಿಲ್ಲ, ಕೇವಲ ನಾಮಕವಸ್ತೆ ರೀತಿಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ. ಆದ್ರೆ, ಆ ನೋಟಿಸ್​ನಲ್ಲಿ ಯಾರಿಗೂ ಕಾಲಮೀತಿ ಹಾಕಿಲ್ಲ. ಇದರಿಂದ ಅರಣಾಧಿಕಾರಿಗಳ ನಡೆಯನ್ನು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಂತೋಷ್​ಗೆ ಒಂದು ನ್ಯಾಯ, ಸೆಲೆಬ್ರಿಟಿಗಳಿಗೆ ಇನ್ನೊಂದು ನ್ಯಾಯನಾ? ಎಂದು ಪ್ರಶ್ನಿಸುತ್ತಿದ್ದಾರೆ.

ಕಾಟಾಚಾರಕ್ಕೆ ಸೆಲೆಬ್ರಿಟಿ ಮನೆಗಳ ಪರಿಶೀಲನೆ, ನಾಮಕಾವಸ್ತೆ ನೊಟೀಸ್: ಅನುಮಾನ ಮೂಡಿಸಿದ ಅರಣ್ಯಾಧಿಕಾರಿಗಳ ನಡೆ
ಹುಲಿ ಉಗುರು ಲಾಕೆಟ್ ಧರಿಸಿದ ಸೆಲೆಬ್ರಿಟಿಗಳು
Follow us on

ಬೆಂಗಳೂರು. (ಅಕ್ಟೋಬರ್ 25): ಹಳ್ಳಿಕಾರ್ ಸಂತೋಷ್ (Varthur Santosh) ಬಿಗ್‌ಬಾಸ್ ಮನೆಯಲ್ಲಿ ಅರೆಸ್ಟ್ ಆದ ಬೆನ್ನಲ್ಲೇ ಹುಲಿ ಉಗುರಿನ ಲಾಕೆಟ್ (Tiger claw) ಧರಿಸಿದ್ದ ಸೆಲೆಬ್ರೆಟಿಗಳ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ರೈತನಿಗೊಂದು ನ್ಯಾಯ, ಸೆಲೆಬ್ರಿಟಿಗಳಿಗೊಂದು ನ್ಯಾಯನಾ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್​ಲೈನ್​ ವೆಂಕಟೇಶ್​, ನಿಖಿಲ್ ಕುಮಾರಸ್ವಾಮಿ ಕೊರಳಿನಲ್ಲಿ ಹುಲಿ ಉಗುರಿನ ಲಾಕೆಟ್ ಇದ್ದ ಫೋಟೋ ವೈರಲ್ ಆಗಿತ್ತು. ನಟ ಜಗ್ಗೇಶ್ ಅಂತೂ, ನಾನು 20 ನೇ ವರ್ಷಕ್ಕೆ ಕಾಲಿಟ್ಟಿಗಾ ನನ್ನ ತಾಯಿ ಕೊಟ್ಟ ಹುಲಿ ಉಗುರು.. ನನ್ನ ಮಗ ಹುಲಿ ಥರ ಇರಲಿ ಎಂದು ಒರಿಜನಲ್ ಹುಲಿಉಗುರನ್ನೇ ಲಾಕೆಟ್​ ಮಾಡಿ ಕೊಟ್ಟಿದ್ದರು ಅಂತಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದು, ಇದೀಗ ಇದು ಅವರಿಗೆ ಸಂಕಷ್ಟ ತಂದಿಟ್ಟಿದೆ. ಇವರೆಲ್ಲ ಮನೆ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಕೆಲವರ ಲಾಕೆಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ರೆ, ವರ್ತೂರ್​ ಸಂತೋಷ್​ನಂತೆ ಇವರುಗಳ ಬಂಧನ ಯಾವಾಗ ಎನ್ನುವ ಕೂಗು ಬಲವಾಗಿ ಕೇಳಿಬರುತ್ತಿದೆ.

ಹೌದು…ವರ್ತೂರ್ ಸಂತೋಷ್​ ಅವರನ್ನ ಬಂಧಿಸಿದ ಬೆನ್ನಲ್ಲೇ ಇನ್ನುಳಿದವರ ಬಂಧನ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ. ಒತ್ತಡಗಳು ಹೆಚ್ಚಾಗುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು, ಹುಲಿ ಉಗುರು ಲಾಕೆಟ್​ ಧರಿಸಿದ್ದ ಸೆಲೆಬ್ರೆಟಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಆದ್ರೆ, ಕಾಟಾಚಾರಕ್ಕೆ ದಾಳಿ ಮಾಡಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಅಲ್ಲದೇ ನಾಮಕಾವಸ್ತೆ ನೋಟಿಸ್ ನೀಡಲಾಗಿದೆ. ಏಕೆಂದರೆ ಅರಣ್ಯಾಧಿಕಾರಿ ನೀಡಿದ ನೋಟಿಸ್​ನಲ್ಲಿ ಯಾರಿಗೂ ಕಾಲಮೀತಿ ಹಾಕಿಲ್ಲ. ಇಷ್ಟೇ ಸಮಯದಲ್ಲಿ ಬಂದು ಉತ್ತರಿಸಿ ಎಂದು ನೊಟೀಸ್ ನಲ್ಲಿ ಉಲ್ಲೇಖ ಮಾಡಿಲ್ಲ. ಹಾಗಿದ್ರೆ ಸೆಲೆಬ್ರೆಟಿಗಳು ಯಾವಾಗ ಬೇಕಾದ್ರು ವಿಚಾರಣೆಗೆ ಬರಬಹುದಾ? ಸಂತೋಷ್ ರನ್ನ ಏಕಾಏಕಿ ಬಂಧಿಸಿದ ಅಧಿಕಾರಿಗಳು, ಸೆಲೆಬ್ರೆಟಿಗಳ ವಿಚಾರದಲ್ಲಿ ಯಾಕೇ ಇಷ್ಟು ಹಿಂದಡಿ ಇಡುತ್ತಿದ್ದಾರೆ ಎನ್ನುವ ಚರ್ಚೆಗಳು ಸಾರ್ವಜನಿಕ ವಯಲದಲ್ಲಿ ಶುರುವಾಗಿವೆ.

ಇದನ್ನೂ ಓದಿ: ಕಾಡು ಪ್ರಾಣಿಗಳ ವಸ್ತು ಇಟ್ಟುಕೊಳ್ಳುವ ಬಗ್ಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಹೇಳುವುದೇನು, ನಿಯಮ ಪಾಲಿಸದಿದ್ದರೆ ಏನೆಲ್ಲಾ ಶಿಕ್ಷೆ?

ವರ್ತೂರ್​ ಸಂತೋಷ್​ಗೆ ಒಂದು ನ್ಯಾಯ? ನಟರಾದ ಜಗ್ಗೇಶ್, ದರ್ಶನ್, ನಿಖಿಲ್ ಕುಮಾರಸ್ವಾಮಿ ಹಾಗೂ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಅರ್ಚಕ ಧನಂಜಯ ಗುರೂಜಿಗೆ ಇನ್ನೊಂದು ನ್ಯಾಯ ನಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಅರಣ್ಯಾ ಇಲಾಖೆ ಹಾಗೂ ಪೊಲೀಸ್​ ಇಲಾಖೆ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ.

ಅರಣ್ಯ ಇಲಾಖೆ ಸಚಿವರು ಹಾಗೂ ಅಧಿಕಾರಿಗಳು ಮಾತ್ರ ಈ ನೆಲದಲ್ಲೆಇ ಎಲ್ಲರಿಗೂ ಒಂದೇ ಕಾನೂನು. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಮಾಧ್ಯಮಗಳ ಮುಂದೆ ಕಡ್ಡಿ ಮುರಿದಂತೆ ಹೇಳಿಕೆ ನೀಡಿದ್ದಾರೆ. ಆದ್ರೆ, ಈಗ ಆಗಿದ್ದೇನು? ವಿಚಾರಣೆಗೆ ಬರುವಂತೆ ಈ ದಿನದಂದು ಬನ್ನಿ ಎಂದು ನೋಟಿಸ್​ನಲ್ಲಿ ಉಲ್ಲೇಖಿಸದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ನಿಂತ್ರಾ? ಎನ್ನುವ ಚರ್ಚೆಗಳು ಶುರುವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:17 am, Thu, 26 October 23