AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ವಿವಾದ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಮೇಲೆಯೂ ಕ್ರಮ ಎಂದ ಅಧಿಕಾರಿ

ದಾಳಿ ವೇಳೆ, ತಮ್ಮ ಬಳಿ ಇರುವುದು ನಕಲಿ ಉಗುರು ಎಂದು ನಮ್ಮ ಅಧಿಕಾರಿಗಳಿಗೆ ದರ್ಶನ್ ಹೇಳಿದ್ದಾರೆ. ಎಲ್ಲವನ್ನೂ ನಾವು ತನಿಖೆ ಮಾಡ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲ ತಪ್ಪಿತಸ್ಥರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ ಪುಷ್ಕರ್ ಹೇಳಿದ್ದಾರೆ.

ಹುಲಿ ಉಗುರು ವಿವಾದ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಮೇಲೆಯೂ ಕ್ರಮ ಎಂದ ಅಧಿಕಾರಿ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Updated By: Ganapathi Sharma|

Updated on: Oct 26, 2023 | 3:00 PM

Share

ಬೆಂಗಳೂರು, ಅಕ್ಟೋಬರ್ 25: ಹುಲಿ ಉಗುರು ವಿವಾದಕ್ಕೆ (Tiger Claw Locket Row) ಸಂಬಂಧಿಸಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಎಲ್ಲರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ ಪುಷ್ಕರ್ (Kumar Pushkar) ಹೇಳಿದ್ದಾರೆ. ಬೆಂಗಳೂರಿನ ವಿವಿಧೆಡೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ ವಿಚಾರವಾಗಿ ಮಾಹಿತಿ ನೀಡಿದ ಅವರು, ಬುಧವಾರ ಬೆಂಗಳೂರಿನಲ್ಲಿ 5 ಕಡೆ ಶೋಧ ನಡೆಸಿದ್ದೇವೆ. ಯಾರ ಮೇಲೆ ದೂರು ಬಂದಿತ್ತೋ ಅವರ ಮನೆ ಮೇಲೆ ದಾಳಿ ಮಾಡಿದ್ದೇವೆ. ದಾಳಿ ಮಾಡಿ ಪೆಂಡೆಂಟ್ ವಶಕ್ಕೆ ಪಡೆದು ಕೊಳ್ಳಲಾಗಿದೆ ಎಂದು ಹೇಳಿದರು.

ವಶಕ್ಕೆ ಪಡೆದ ಪೆಂಡೆಂಟ್​​ಗಳನ್ನು ಎಫ್ಎಸ್‌ಎಲ್‌ಗೆ ಕಳುಹಿಸುತ್ತೇವೆ. ಅಲ್ಲಿಂದ ವರದಿ ಬಂದಮೇಲೆ ನಮಗೆ ಯಾವುದು ಹುಲಿ ಉಗುರು ಎನ್ನುವುದ ಖಾತರಿ ಆಗುತ್ತದೆ. ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್, ಗಿರಿ ಮನೆಗೆ ಹೋಗಿ ವಿಚಾರಣೆ ಮಾಡಿದ್ದೇವೆ. ನಿಖಿಲ್, ದರ್ಶನ್ ಅವರಿಂದ ವಶಕ್ಕೆ ಪಡೆದ ಉಗುರು ಮೇಲ್ನೋಟಕ್ಕೆ ಅಸಲಿ ಅಲ್ಲ ಎಂದು ಅನಿಸುತ್ತಿದೆ. ಜಗ್ಗೇಶ್ ಮನೆಯಲ್ಲಿ ಸಿಕ್ಕಿರುವುದು ತುಂಬಾ ಹಳೆಯದ್ದು, ಅದನ್ನು ಕೂಡ ಪರಿಶೀಲಿಸಲಾಗ್ತಿದೆ ಎಂದು ಅವರು ಹೇಳಿದರು.

ಉಗುರನ್ನು ಬದಲಾಯಿಸಿರುವ ಪ್ರಕರಣ ಕಂಡುಬಂದರೆ ಸಾಕ್ಷ್ಯ ನಾಶದಡಿ ಪ್ರಕರಣ ದಾಖಲಿಸುತ್ತೇವೆ. ಸಂತೋಷ್ ಕೇಸ್ ಅಲ್ಲಿ ಹೊಸ ಹುಲಿ ಉಗುರಾಗಿತ್ತು. ಹಾಗಾಗಿ ಬೇಗ ಪತ್ತೆಯಾಯ್ತು. ಜಗ್ಗೇಶ್ ಮನೆಯಲ್ಲಿ ಸಿಕ್ಕಿರುವುದು ತುಂಬಾ ಹಳೆಯದ್ದಾಗಿದೆ. ಹಾಗಾಗಿ ನಾವು ನೈಜತೆಯ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ಜಗ್ಗೇಶ್ ಅವರ ಹಳೆಯ ವಿಡಿಯೋ ಸ್ಟೇಟ್​​ಮೆಂಟ್ ಆಧಾರವಾಗಿಟ್ಟುಕೊಂಡು ನಾವು ಕ್ರಮ‌ಕೈಗೊಳ್ಳಲು ಆಗುವುದಿಲ್ಲ ಎಂದು ಕುಮಾರ ಪುಷ್ಕರ್ ಹೇಳಿದರು.

ದಾಳಿ ವೇಳೆ, ತಮ್ಮ ಬಳಿ ಇರುವುದು ನಕಲಿ ಉಗುರು ಎಂದು ನಮ್ಮ ಅಧಿಕಾರಿಗಳಿಗೆ ದರ್ಶನ್ ಹೇಳಿದ್ದಾರೆ. ಎಲ್ಲವನ್ನೂ ನಾವು ತನಿಖೆ ಮಾಡ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲ ತಪ್ಪಿತಸ್ಥರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಹುಲಿ ಉಗುರು ವಿವಾದ: ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೇ ಅವಕಾಶ ನೀಡಲು ಚಿಂತನೆ; ಸಚಿವ ಈಶ್ವರ ಖಂಡ್ರೆ

ಈ ಮಧ್ಯೆ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದೆ. ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಲಿದೆ. ವ್ಯನ್ಯಜೀವಿಗಳ ಚರ್ಮ, ಉಗುರು, ಇತರೆ ವಸ್ತು ಹೊಂದಿದ್ದವರು ಸ್ವಯಂಪ್ರೇರಿತವಾಗಿ ಹಿಂದಿರುಗಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್