AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ವಿವಾದ: ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೇ ಅವಕಾಶ ನೀಡಲು ಚಿಂತನೆ; ಸಚಿವ ಈಶ್ವರ ಖಂಡ್ರೆ

Tiger Claw Locket Row: ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಪೂರ್ತಿ ಅರಿವು ಇಲ್ಲ ಎಂದು ನನಗೆ ಅನ್ನಿಸುತ್ತಿದೆ. ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೆಯ ಒಂದು ಅವಕಾಶ ನೀಡಬೇಕು ಎಂಬ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ಇದೆ ಎಂದುಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ಹುಲಿ ಉಗುರು ವಿವಾದ: ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೇ ಅವಕಾಶ ನೀಡಲು ಚಿಂತನೆ; ಸಚಿವ ಈಶ್ವರ ಖಂಡ್ರೆ
ಸಚಿವ ಈಶ್ವರ ಖಂಡ್ರೆ
ಕಿರಣ್​ ಹನಿಯಡ್ಕ
| Edited By: |

Updated on:Oct 26, 2023 | 2:41 PM

Share

ಬೆಂಗಳೂರು, ಅಕ್ಟೋಬರ್ 26: ವನ್ಯಜೀವಿಗಳ (Wildlife) ಚರ್ಮ, ಉಗುರು ಧರಿಸುವುದು ಕಾನೂನಿನ ಉಲ್ಲಂಘನೆಯಾಗುತ್ತದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಕಾನೂನು ಉಲ್ಲಂಘನೆ ಆಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ (Eshwara Khandre) ಹೇಳಿದರು. ಬೆಂಗಳೂರಿನಲ್ಲಿ ವಿಕಾಸಸೌಧದ ನಾಲ್ಕನೇ ಮಹಡಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹುಲಿ ಉಗುರು ಲಾಕೆಟ್ ಮತ್ತು ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನು ವಿಚಾರವಾಗಿ ಮಾಹಿತಿ ನೀಡಿದರು. ಯಾವುದೇ ವನ್ಯಜೀವಿ ಉತ್ಪನ್ನ ಸಂಗ್ರಹಣೆ, ಸಾಗಾಣಿಕೆ, ದಾಸ್ತಾನು ಮತ್ತು ಬಳಕೆ ಶಿಕ್ಷಾರ್ಹ ಅಪರಾಧ ಎಂದು ಅವರು ಹೇಳಿದರು.

ರಿಯಾಲಿಟಿ ಶೋದಲ್ಲಿ ಹುಲಿ ಉಗುರು ಧರಿಸಿದ್ದ ವಿಚಾರದಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ದೂರು ಬಂದ ಬೇರೆ ಕಡೆ ಕೂಡಾ ನಮ್ಮ ಅಧಿಕಾರಿಗಳು ಹೋಗಿ ಪರಿಶೀಲನೆ ನಡೆಸಿದ್ದಾರೆ. ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಪೂರ್ತಿ ಅರಿವು ಇಲ್ಲ ಎಂದು ನನಗೆ ಅನ್ನಿಸುತ್ತಿದೆ. ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೆಯ ಒಂದು ಅವಕಾಶ ನೀಡಬೇಕು ಎಂಬ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ಇದೆ. ಈ ಕುರಿತು ತಜ್ಞರ ಜೊತೆ ಚರ್ಚಿಸಿ ವರದಿ ಸಲ್ಲಿಸಲು ಈಗಾಗಲೇ ತಂಡ ರಚಿಸಲಾಗಿದೆ. ವರದಿ ಬಂದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಕೊಟ್ಟು ಶಾಶ್ವತ ಪರಿಹಾರ ಕಂಡುಕೊಳ್ಳಲು ಇಲಾಖೆ ಬದ್ಧವಾಗಿ ಇದೆ ಎಂದು ಖಂಡ್ರೆ ಹೇಳಿದರು.

ಹುಲಿ ಉಗುರು ಧರಿಸಿದ ಹಲವರ ವಿರುದ್ಧ ದೂರುಗಳು ಬಂದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳುತ್ತಾರೆ. ವನ್ಯಜೀವಿಗಳ ಚರ್ಮ, ಉಗುರು ಬಳಕೆ ಮಾಡುವುದಕ್ಕೆ ನಿಷೇಧವಿದೆ. ಈ ಬಗ್ಗೆ ಕಾನೂನಿನ ಜ್ಞಾನದ ಕೊರತೆ ಇದೆ, ಜನರಲ್ಲಿ ಅರಿವು ಇಲ್ಲ. ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಲಿದೆ. ಯಾರು ಬಳಿ ವ್ಯನ್ಯಜೀವಿಗಳ ಚರ್ಮ, ಉಗುರು, ಇತರೆ ವಸ್ತು ಇದೆಯೋ, ಪ್ರಾಣಿಗಳಿಗೆ ಸಂಬಂಧಿಸಿದ ವಸ್ತುಗಳು ಇದೆಯೋ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತೇವೆ. ಪ್ರಾಣಿಗಳ ವಸ್ತುಗಳು ಇದ್ದರೆ ಸ್ವಯಂಪ್ರೇರಿತವಾಗಿ ಹಿಂದಿರುಗಿಸಬಹುದು. ಅರಣ್ಯ ಇಲಾಖೆ ಸುಪರ್ದಿಗೆ ಒಪ್ಪಿಸಲು ಅವಕಾಶ ನೀಡಲಾಗುವುದ ಎಂದು ಈಶ್ವರ ಖಂಡ್ರೆ ಹೇಳಿದರು.

ಇದನ್ನೂ ಓದಿ: ಹುಲಿ ಉಗುರು ಪೆಂಡೆಂಟ್ ಪ್ರಕರಣ: ಯಾರಿಗೆಲ್ಲ ಸಂಕಷ್ಟ? ಯಾರ್ಯಾರ ಮನೆ ಶೋಧ?

ರಿಯಾಲಿಟಿ ಶೋದಲ್ಲಿ ಹುಲಿ ಉಗುರು ಧರಿಸಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕರ್ನಾಟಕದ ಹಲವು ನಟರು, ಸ್ಟಾರ್​​ಗಳ ಬಳಿ ಹುಲಿ ಉಗುರಿನ ಪೆಂಡೆಂಟ್, ಲಾಕೆಟ್ ಇರುವ ಬಗ್ಗೆ ವರದಿಯಾಗಿದ್ದವು. ಇದರ ಬೆನ್ನಲ್ಲೇ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕ ಮಂದಿಯ ಮನೆಗಳಿಗೆ ದಾಳಿ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಶೋಧ ಕಾರ್ಯ ನಡೆಸಿದ್ದರು. ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಅರಣ್ಯ ಇಲಾಖೆಯಲ್ಲಿ 800 ಹುದ್ದೆ ಭರ್ತಿಗೆ ಅನುಮೋದನೆ: ಖಂಡ್ರೆ ಮಾಹಿತಿ

ಅರಣ್ಯ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳು ಖಾಲಿಯಿವೆ. 4 ಸಾವಿರ ಹುದ್ದೆಗಳ ಪೈಕಿ 800 ಹುದ್ದೆ ಭರ್ತಿಗೆ ಅನುಮೋದನೆ ನೀಡಲಾಗಿದೆ. 800 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಬಾಕಿಯಿರುವ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ. ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ ಮಾಡಲಾಗಿದೆ ಎಂದು ಖಂಡ್ರೆ ಹೇಳಿದರು. ಅರಣ್ಯ ಇಲಾಖೆಗೆ ಸಂಬಂಧಿಸಿದ ದೂರುಗಳಿದ್ದರೆ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದೂ ಅವರು ಮಾಹಿತಿ ನೀಡಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:30 pm, Thu, 26 October 23

Follow Us
Kiran Haniyadka
Kiran Haniyadka
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!