AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ಗೆ ಬಿಗಿ ಭದ್ರತೆ; ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ

Tight security for Karnataka Bandh; ಯಾವುದೇ ರೀತಿಯ ಬಲವಂತದ ಬಂದ್​ ಆಗಿರಬಾರದು. ಕರ್ನಾಟಕ ಬಂದ್​ ಸ್ವಯಂ ಪ್ರೇರಿತ ಆಗಿರಬೇಕು. ಶಾಂತಿಯುವವಾಗಿ ಬಂದ್​ ಮಾಡಬೇಕು. ಬಂದ್​ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಇತೀಂದ್ರ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಬಂದ್​ಗೆ ಬಿಗಿ ಭದ್ರತೆ; ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಕಿರಣ ಹೆಚ್​. ವಿ.
| Edited By: |

Updated on:Sep 29, 2023 | 10:16 AM

Share

ಬೆಂಗಳೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಶುಕ್ರವಾರ ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಗಿ ಭದ್ರತೆ ಕಲ್ಪಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಅಲ್ಲದೆ, ಬಂದ್ ಸ್ವಯಂಪ್ರೇರಿತವಾಗಿರಬೇಕು. ಯಾವುದೇ ಕಾರಣಕ್ಕೂ ಬಲವಂತದ ಬಂದ್ ಮಾಡಿಸಬಾರದು. ಹಾಗೆ ಮಾಡಿದ್ದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ. ಬಂದ್​ಗೆ ಕೈಗೊಳ್ಳಲಾಗಿರುವ ಪೊಲೀಸ್ ಭದ್ರತೆ ಬಗ್ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಇತೀಂದ್ರ ‘ಟಿವಿ 9’ಗೆ ಮಾಹಿತಿ ನೀಡಿದ್ದು, 80 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ಕಾನೂನು ಉಲ್ಲಂಘಿಸಿದರೆ ಅಂತವರ ವಿರುದ್ದ ಕಠಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಎಸ್ಪಿಗಳು, ಐಜಿಗಳು ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಪೊಲೀಸ್​ ವತಿಯಿಂದ 250 ಕ್ಕೂ ಹೆಚ್ಚು ಕೆಆರ್​ಪಿಎಸ್​ ತುಕಡಿಗಳು, 5 ಆರ್​​​ಎಎಫ್​ ತುಕಡಿಗಳು, ಎಲ್ಲಾ ಸಿಆರ್​ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಯಾವುದೇ ರೀತಿಯ ಬಲವಂತದ ಬಂದ್​ ಆಗಿರಬಾರದು. ಕರ್ನಾಟಕ ಬಂದ್​ ಸ್ವಯಂ ಪ್ರೇರಿತ ಆಗಿರಬೇಕು. ಶಾಂತಿಯುವವಾಗಿ ಬಂದ್​ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಎಡಿಜಿಪಿ ಮನವಿ ಮಾಡಿದ್ದಾರೆ.

ಬಂದ್​ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಕಾವೇರಿ ನೀರು ಬಿಡುಗಡೆ ಖಂಡಿಸಿ ಕರೆ ನೀಡಲಾಗಿರುವ ಶುಕ್ರವಾರದ ಕರ್ನಾಟಕ ಬಂದ್​ಗೆ ನೂರಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಬಂದ್ ಕಾರಣ ಕೆಎಸ್​ಆರ್​​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳು ಸಂಚರಿಸಲಿವೆಯೇ ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಹೊರಬಿದ್ದಿಲ್ಲ. ಈ ಮಧ್ಯೆ, ಬಿಎಂಟಿಸಿ ಬಸ್​ಗಳ ಸಂಚಾರಕ್ಕೆ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಸಾರಿಗೆ ಸಂಸ್ಥೆ ಮನವಿ ಮಾಡಿದೆ ಎಂದು ವರದಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:23 pm, Thu, 28 September 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ