AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಜತೆಗೂಡಿ ಉತ್ತರ ಕರ್ನಾಟಕ ಜನತೆಗೆ ಉದಾತ್ತ ನೆರವು ನೀಡಿದ ತಿಂಡ್ಲು ಬಾಯ್ಸ್​

ಉತ್ತರ ಕರ್ನಾಟಕದ ಜಲಪ್ರಳಯಕ್ಕೆ ಸ್ಪಂದಿಸಬೇಕೆಂದು TV9 ನಿರ್ಧರಿಸಿದ್ದೇ ತಡ ಜನ ಮತ್ತು ಸಂಘ ಸಂಸ್ಥೆಗಳು ಉತ್ತರದ ಜನರಿಗೆ ಉದಾತ್ತರಾಗಿ ನೆರವಾಗಲು ಮುಂದೆ ಬರುತ್ತಿದ್ದಾರೆ. ಶುಕ್ರವಾರ TV9 ಒಂದು ಲಾರಿಯಲ್ಲಿ ಎಣ್ಣೆ, ಬೇಳೆ, ಅಕ್ಕಿ, ಬಿಸ್ಕಿಟ್, ಅಫಜಲಪುರಕ್ಕೆ ಕಳಿಸಿದ ಬೆನ್ನಲ್ಲೇ ಇಂದು ನಗರದ ಸಹಕಾರ ನಗರದ ಹತ್ತಿರದ ತಿಂಡ್ಲು ಬಾಯ್ಸ್​ ಅಸೋಸಿಯೇಶನ್ ಕಡೆಯವರು ಒಂದು ಲಾರಿ ತುಂಬಿದ ರೇಶನ್ ಕಳಿಸಲು ಮುಂದೆ ಬಂದಿದೆ. TV9 ಸಹಕಾರದಲ್ಲಿ ಉತ್ತರ ಕರ್ನಾಟಕದ ಜನರಿಗೆ ನೆರವಾಗಲು ತಿಂಡ್ಲು ಬಾಯ್ಸ್ ಅಸೋಸಿಯೇಶನ್ ರೇಶನ್ ಕಿಟ್ […]

ಟಿವಿ9 ಜತೆಗೂಡಿ ಉತ್ತರ ಕರ್ನಾಟಕ ಜನತೆಗೆ ಉದಾತ್ತ ನೆರವು ನೀಡಿದ ತಿಂಡ್ಲು ಬಾಯ್ಸ್​
ಸಾಧು ಶ್ರೀನಾಥ್​
|

Updated on: Oct 24, 2020 | 4:18 PM

Share

ಉತ್ತರ ಕರ್ನಾಟಕದ ಜಲಪ್ರಳಯಕ್ಕೆ ಸ್ಪಂದಿಸಬೇಕೆಂದು TV9 ನಿರ್ಧರಿಸಿದ್ದೇ ತಡ ಜನ ಮತ್ತು ಸಂಘ ಸಂಸ್ಥೆಗಳು ಉತ್ತರದ ಜನರಿಗೆ ಉದಾತ್ತರಾಗಿ ನೆರವಾಗಲು ಮುಂದೆ ಬರುತ್ತಿದ್ದಾರೆ. ಶುಕ್ರವಾರ TV9 ಒಂದು ಲಾರಿಯಲ್ಲಿ ಎಣ್ಣೆ, ಬೇಳೆ, ಅಕ್ಕಿ, ಬಿಸ್ಕಿಟ್, ಅಫಜಲಪುರಕ್ಕೆ ಕಳಿಸಿದ ಬೆನ್ನಲ್ಲೇ ಇಂದು ನಗರದ ಸಹಕಾರ ನಗರದ ಹತ್ತಿರದ ತಿಂಡ್ಲು ಬಾಯ್ಸ್​ ಅಸೋಸಿಯೇಶನ್ ಕಡೆಯವರು ಒಂದು ಲಾರಿ ತುಂಬಿದ ರೇಶನ್ ಕಳಿಸಲು ಮುಂದೆ ಬಂದಿದೆ.

TV9 ಸಹಕಾರದಲ್ಲಿ ಉತ್ತರ ಕರ್ನಾಟಕದ ಜನರಿಗೆ ನೆರವಾಗಲು ತಿಂಡ್ಲು ಬಾಯ್ಸ್ ಅಸೋಸಿಯೇಶನ್ ರೇಶನ್ ಕಿಟ್ ತಯಾರು ಮಾಡಿದೆ. ತಲಾ ಒಂದು ಕಿಟ್​ನಲ್ಲಿ 10 ಕೆ.ಜಿ.ಯಷ್ಟು ಅಕ್ಕಿ, ಬೇಳೆ, ಎಣ್ಣೆ, ಮೈ ಸೋಪು, ಬಟ್ಟೆ ಸೋಪು, ಸಕ್ಕರೆ, ಚಹಾ ಪುಡಿ, ರವಾ, ಉಪ್ಪು, ಮೆಣಸು, ಪೇಸ್ಟ್, ಎರಡು ಅಂಗಿ, ಒಂದು ಪಂಚೆ ಈ ಕಿಟ್ ನಲ್ಲಿ ಇದ್ದು, ಒಂದು ಕುಟುಂಬಕ್ಕೆ 15 ದಿನಕ್ಕೆ ಸಾಕಾಗುವಷ್ಟು ಬೇಳೆ ಕಾಳು ಇದೆ.

ತಾವು ಮಾಡುತ್ತಿರುವ ಸಾಮಾಜಿಕ ಸೇವೆ ಕುರಿತು ವಿವರ ನೀಡಿದ ತಿಂಡ್ಲು ಬಾಯ್ಸ್ ಅಸೋಸಿಯೇಶನ್​ನ ಆನಂದ್ ಅವರು ಕಳೆದ ನಾಲ್ಕೈದು ತಿಂಗಳುಗಳಿಂದ ಲಾಕ್ ಡೌನ್ ಸಮಯದಲ್ಲಿ ಹೇಗೆ ಜನರಿಗೆ ಸಹಾಯ ಮಾಡುತ್ತಿದ್ದೇವೆ ಎಂಬುದರ ವಿವರ ನೀಡಿದರು. ಈ ಸಂದರ್ಭದಲ್ಲಿ 6,000 ಜನರಿಗೆ ಊಟದ ಕಿಟ್ ನೀಡಿದ್ದಾರೆ. ತಮ್ಮ ಸುತ್ತ ಮುತ್ತ ಇರುವ ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಸಹಾಯ ಮಾಡಿದ್ದಾರೆ. ಕೋವಿಡ್ ನಿಂದ ಸತ್ತ 18 ಜನರ ಅಂತ್ಯ ಸಂಸ್ಕಾರವನ್ನು ಸ್ವಯಂ ಸೇವಕರು ಮಾಡಿದ್ದಾರೆ. ಈಗ ಉತ್ತರ ಕರ್ನಾಟಕದ ಜನತೆಗೆ ನೆರವಾಗಲು TV9 ಜತೆ ಕೈ ಜೋಡಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ