AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು. ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ […]

ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಸಾಧು ಶ್ರೀನಾಥ್​
|

Updated on:Oct 31, 2019 | 3:11 PM

Share

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು.

ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ ಎಂದು ಮಾಧ್ಯಮ ಸಂವಾದದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಅಧಿವೇಶನಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ: ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ವಿಧಾನಸಭಾ ಕಲಾಪದಿಂದ ಮಾಧ್ಯಮ ಬಹಿಷ್ಕಾರ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಮಾಧ್ಯಮಗಳ ಬಹಿಷ್ಕಾರ ಸ್ಪೀಕರ್ ತೆಗೆದುಕೊಂಡಿರೋ ನಿರ್ಧಾರ. ನಾನು ಸ್ಪೀಕರ್ ಜೊತೆ ಮಾತುಕತೆ ನಡೆಸಿ ಈ ಹಿಂದೆ ಇದ್ದ ವ್ಯವಸ್ಥೆ ಜಾರಿಗೆ ತರುವಂತೆ ಮಾತನಾಡುತ್ತೇನ. ಮುಂದಿನ ಅಧಿವೇಶನದಿಂದ ಮೊದಲಿನಂತೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ. ಇದು ಕೇವಲ ಭರವಸೆ ಅಲ್ಲ, ಯಡಿಯೂರಪ್ಪ ಏನಾದ್ರೂ ಹೇಳಿದ್ರೆ ಅದು ತಪ್ಪಲ್ಲ ಎಂದರು.

ಡಿಸಿಎಂ ಹುದ್ದೆ ಸೃಷ್ಟಿಯಲ್ಲಿ ತಪ್ಪಾಗಿಲ್ಲ: ಸರ್ಕಾರದಲ್ಲಿ ಮೂವರು ಡಿಸಿಎಂ ಸೃಷ್ಟಿಯಾಗಿರುವುದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರವಾಗಿದೆ. ಹೊಸದಾಗಿ ನಾನು ಯಾರಿಗೂ ಯಾವ ಸ್ಥಾನಮಾನ ನೀಡ್ತಿಲ್ಲ. ಆದ್ರೆ ಡಿಸಿಎಂ ಸೃಷ್ಟಿಯಲ್ಲಿ ಯಾವುದೇ ತಪ್ಪಾಗಿಲ್ಲ, ಉತ್ತಮವಾಗಿ ಕಾರ್ಯ ಮಾಡ್ತಿದ್ದಾರೆ. ಇದೇ ವೇಳೆ ನಾನು ಮುಂದಿನ ಮೂರೂವರೆ ವರ್ಷ ಸರ್ಕಾರ ನಡೆಸಿಕೊಂಡು ಹೋಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

Published On - 1:51 pm, Wed, 30 October 19

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್