AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು. ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ […]

ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಸಾಧು ಶ್ರೀನಾಥ್​
|

Updated on:Oct 31, 2019 | 3:11 PM

Share

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು.

ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ ಎಂದು ಮಾಧ್ಯಮ ಸಂವಾದದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಅಧಿವೇಶನಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ: ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ವಿಧಾನಸಭಾ ಕಲಾಪದಿಂದ ಮಾಧ್ಯಮ ಬಹಿಷ್ಕಾರ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಮಾಧ್ಯಮಗಳ ಬಹಿಷ್ಕಾರ ಸ್ಪೀಕರ್ ತೆಗೆದುಕೊಂಡಿರೋ ನಿರ್ಧಾರ. ನಾನು ಸ್ಪೀಕರ್ ಜೊತೆ ಮಾತುಕತೆ ನಡೆಸಿ ಈ ಹಿಂದೆ ಇದ್ದ ವ್ಯವಸ್ಥೆ ಜಾರಿಗೆ ತರುವಂತೆ ಮಾತನಾಡುತ್ತೇನ. ಮುಂದಿನ ಅಧಿವೇಶನದಿಂದ ಮೊದಲಿನಂತೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ. ಇದು ಕೇವಲ ಭರವಸೆ ಅಲ್ಲ, ಯಡಿಯೂರಪ್ಪ ಏನಾದ್ರೂ ಹೇಳಿದ್ರೆ ಅದು ತಪ್ಪಲ್ಲ ಎಂದರು.

ಡಿಸಿಎಂ ಹುದ್ದೆ ಸೃಷ್ಟಿಯಲ್ಲಿ ತಪ್ಪಾಗಿಲ್ಲ: ಸರ್ಕಾರದಲ್ಲಿ ಮೂವರು ಡಿಸಿಎಂ ಸೃಷ್ಟಿಯಾಗಿರುವುದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರವಾಗಿದೆ. ಹೊಸದಾಗಿ ನಾನು ಯಾರಿಗೂ ಯಾವ ಸ್ಥಾನಮಾನ ನೀಡ್ತಿಲ್ಲ. ಆದ್ರೆ ಡಿಸಿಎಂ ಸೃಷ್ಟಿಯಲ್ಲಿ ಯಾವುದೇ ತಪ್ಪಾಗಿಲ್ಲ, ಉತ್ತಮವಾಗಿ ಕಾರ್ಯ ಮಾಡ್ತಿದ್ದಾರೆ. ಇದೇ ವೇಳೆ ನಾನು ಮುಂದಿನ ಮೂರೂವರೆ ವರ್ಷ ಸರ್ಕಾರ ನಡೆಸಿಕೊಂಡು ಹೋಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

Published On - 1:51 pm, Wed, 30 October 19

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು