AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು. ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ […]

ಶಾಲಾ ಪುಸ್ತಕದಲ್ಲಿ ಇರಲ್ಲ ಟಿಪ್ಪು ಇತಿಹಾಸ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಸಾಧು ಶ್ರೀನಾಥ್​
|

Updated on:Oct 31, 2019 | 3:11 PM

Share

ಬೆಂಗಳೂರು: ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ರಾಜ್ಯದಲ್ಲಿ ಒಂದಿಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರದ್ದು ಮಾಡಿದ್ದರು.

ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಟಿಪ್ಪು ಜಯಂತಿಗೆ ನಾವು ಅವಕಾಶ ನೀಡುವುದಿಲ್ಲ. ಟಿಪ್ಪು ಸಂಬಂಧ ಎಲ್ಲಾ ಆದೇಶಗಳನ್ನು ಹಿಂಪಡೆಯುತ್ತೇವೆ. ಅಂತಹ ಯಾವುದೇ ವಿಚಾರಗಳು ಪಠ್ಯ ಪುಸ್ತಕದಲ್ಲಿ ಇರಬಾರದು, ಅದಕ್ಕೆ ನಾವು ಅವಕಾಶ ನೀಡೋದಿಲ್ಲ ಎಂದು ಮಾಧ್ಯಮ ಸಂವಾದದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಅಧಿವೇಶನಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ: ಇದೇ ವೇಳೆ ಮಾತನಾಡಿದ ಯಡಿಯೂರಪ್ಪ, ವಿಧಾನಸಭಾ ಕಲಾಪದಿಂದ ಮಾಧ್ಯಮ ಬಹಿಷ್ಕಾರ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಮಾಧ್ಯಮಗಳ ಬಹಿಷ್ಕಾರ ಸ್ಪೀಕರ್ ತೆಗೆದುಕೊಂಡಿರೋ ನಿರ್ಧಾರ. ನಾನು ಸ್ಪೀಕರ್ ಜೊತೆ ಮಾತುಕತೆ ನಡೆಸಿ ಈ ಹಿಂದೆ ಇದ್ದ ವ್ಯವಸ್ಥೆ ಜಾರಿಗೆ ತರುವಂತೆ ಮಾತನಾಡುತ್ತೇನ. ಮುಂದಿನ ಅಧಿವೇಶನದಿಂದ ಮೊದಲಿನಂತೆ ಮಾಧ್ಯಮಗಳಿಗೆ ಅವಕಾಶ ನೀಡಲಾಗುತ್ತೆ. ಇದು ಕೇವಲ ಭರವಸೆ ಅಲ್ಲ, ಯಡಿಯೂರಪ್ಪ ಏನಾದ್ರೂ ಹೇಳಿದ್ರೆ ಅದು ತಪ್ಪಲ್ಲ ಎಂದರು.

ಡಿಸಿಎಂ ಹುದ್ದೆ ಸೃಷ್ಟಿಯಲ್ಲಿ ತಪ್ಪಾಗಿಲ್ಲ: ಸರ್ಕಾರದಲ್ಲಿ ಮೂವರು ಡಿಸಿಎಂ ಸೃಷ್ಟಿಯಾಗಿರುವುದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರವಾಗಿದೆ. ಹೊಸದಾಗಿ ನಾನು ಯಾರಿಗೂ ಯಾವ ಸ್ಥಾನಮಾನ ನೀಡ್ತಿಲ್ಲ. ಆದ್ರೆ ಡಿಸಿಎಂ ಸೃಷ್ಟಿಯಲ್ಲಿ ಯಾವುದೇ ತಪ್ಪಾಗಿಲ್ಲ, ಉತ್ತಮವಾಗಿ ಕಾರ್ಯ ಮಾಡ್ತಿದ್ದಾರೆ. ಇದೇ ವೇಳೆ ನಾನು ಮುಂದಿನ ಮೂರೂವರೆ ವರ್ಷ ಸರ್ಕಾರ ನಡೆಸಿಕೊಂಡು ಹೋಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

Published On - 1:51 pm, Wed, 30 October 19

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ