AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಕಿರುಕುಳಕ್ಕೆ ಬೇಸತ್ತು ಸಾಮೂಹಿಕ ವರ್ಗಾವಣೆ ಕೇಳಿದ ಶಿಕ್ಷಕರು: ಬಿಇಓ ಅಧಿಕಾರಿಯನ್ನು ಕೂಡಿ ಹಾಕಿ ಬೆದರಿಕೆ

ಬಾಲರಾಜು ಕಿರುಕುಳಕ್ಕೆ ಬೇಸತ್ತ ಇಗ್ಗಲೂರು ಶಾಲೆಯ ಐವರು ಶಿಕ್ಷಕರು ವರ್ಗಾವಣೆ ಕೇಳಿದ್ದರು. ಆದರೆ ಇಬ್ಬರು ಶಿಕ್ಷಕರನ್ನು ಮಾತ್ರ ವರ್ಗಾವಣೆ ಮಾಡಲಾಗಿತ್ತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆ ಕೇಳಲು ಶಾಲೆಗೆ ಬಿಇಓ ತೆರಳಿದ್ದಾರೆ. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್​ರನ್ನು ಕೂಡಿ ಹಾಕಿ ಇಗ್ಗಲೂರು ಸರ್ಕಾರಿ ಶಾಲೆ ಮಾಜಿ ಎಸ್​ಡಿಎಂಸಿ ಅಧ್ಯಕ್ಷ ಬಾಲರಾಜು ಬೆದರಿಕೆ ಹಾಕಿದ್ದಾರೆ.

ಮಾನಸಿಕ ಕಿರುಕುಳಕ್ಕೆ ಬೇಸತ್ತು ಸಾಮೂಹಿಕ ವರ್ಗಾವಣೆ ಕೇಳಿದ ಶಿಕ್ಷಕರು: ಬಿಇಓ ಅಧಿಕಾರಿಯನ್ನು ಕೂಡಿ ಹಾಕಿ ಬೆದರಿಕೆ
ಮಾನಸಿಕ ಕಿರುಕುಳಕ್ಕೆ ಬೇಸತ್ತು ಸಾಮೂಹಿಕ ವರ್ಗಾವಣೆ ಕೇಳಿದ ಶಿಕ್ಷಕರು: ಬಿಇಓ ಅಧಿಕಾರಿಯನ್ನು ಕೂಡಿ ಹಾಕಿ ಬೆದರಿಕೆ
ರಾಮು, ಆನೇಕಲ್​
| Edited By: |

Updated on: Aug 07, 2024 | 3:39 PM

Share

ಆನೇಕಲ್, ಆಗಸ್ಟ್​ 07: ರಾಜ್ಯ ರಾಜಕೀಯದಲ್ಲಿ ಯಾದಗಿರಿ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಇದೀಗ ಸರ್ಕಾರಿ ಶಿಕ್ಷಕರು (teachers) ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಕೂಡಿ ಹಾಕಿ ದರ್ಪ ಮೆರೆದಿರುವಂತಹ ಘಟನೆ ನಿನ್ನೆ ಇಗ್ಗಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಹಿಳಾ ಶಿಕ್ಷಕಿಯರ ಫೋಟೋ, ವಿಡಿಯೋ ಚಿತ್ರೀಕರಿಸಿ ಬೆದರಿಕೆ ಆರೋಪ ಕೇಳಿಬಂದಿದ್ದು, ಮಾಜಿ ಎಸ್​ಡಿಎಂಸಿ ಅಧ್ಯಕ್ಷ ಬಾಲರಾಜು ಕಿರುಕುಳಕ್ಕೆ ಬೇಸತ್ತ ಶಿಕ್ಷಕರು ಸಾಮೂಹಿಕ ವರ್ಗಾವಣೆ (transfer) ಕೇಳಿದ್ದಾರೆ.

ಬಾಲರಾಜು ಕಿರುಕುಳಕ್ಕೆ ಬೇಸತ್ತ ಇಗ್ಗಲೂರು ಶಾಲೆಯ ಐವರು ಶಿಕ್ಷಕರು ವರ್ಗಾವಣೆ ಕೇಳಿದ್ದರು. ಆದರೆ ಇಬ್ಬರು ಶಿಕ್ಷಕರನ್ನು ಮಾತ್ರ ವರ್ಗಾವಣೆ ಮಾಡಲಾಗಿತ್ತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆ ಕೇಳಲು ಶಾಲೆಗೆ ಬಿಇಓ ತೆರಳಿದ್ದಾರೆ. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್​ರನ್ನು ಕೂಡಿ ಹಾಕಿ ಇಗ್ಗಲೂರು ಸರ್ಕಾರಿ ಶಾಲೆ ಮಾಜಿ ಎಸ್​ಡಿಎಂಸಿ ಅಧ್ಯಕ್ಷ ಬಾಲರಾಜು ಬೆದರಿಕೆ ಹಾಕಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನ ಒಳಗೆ ಕೂಡಿ ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಮಾವು ರಫ್ತಿನಲ್ಲಿ ಹೊಸ ದಾಖಲೆ ಬರೆದ ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್​​

ಗೇಟ್ ಬೀಗ ಜಡಿದ ಬಾಲರಾಜು ಮಕ್ಕಳನ್ನ ಪ್ರಚೋದನೆ ಮಾಡಿ ಪ್ರತಿಭಟನೆ ಮಾಡಿಸಿದ್ದಾರೆ. ಮಕ್ಕಳ ಮನಸ್ಸಿಗೆ ಇಲ್ಲ ಸಲ್ಲದನ್ನ ವಿಚಾರ ತುಂಬಿ ಸರ್ವಾಧಿಕಾರಿಯಾಗಿ ಬಾಲರಾಜು ದರ್ಪ ತೋರಿದ್ದಾರೆ. ಮಕ್ಕಳಿಗೆ ಮಧ್ಯಾಹ್ನ ಊಟ ಕೂಡ ನೀಡದೆ ಬಿಸಿಲಿನಲ್ಲಿ ಪ್ರತಿಭಟನೆಗೆ ಪ್ರೇರೆಪಿಸಿದ್ದಾರೆ. ಅಷ್ಟೇ ಅಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಂದಿಸಿದ್ದಾರೆ. ಸಾಲದಕ್ಕೆ ಶಿಕ್ಷಕರಿಗೆ ಕರ್ತವ್ಯ ನಿರ್ವಹಿಸದಂತೆ ಕಿರುಕುಳ ನೀಡಿದ್ದಾರೆ.

ಇಲ್ಲಿಯವರೆಗೆ ಸಮವಸ್ತ್ರ ವಿತರಣೆ, ಮೊಟ್ಟೆ ವಿತರಣೆಗೂ ಅಡ್ಡಿ ಮಾಡಲಾಗಿದ್ದು, ಮಕ್ಕಳ ಮುಂದೆ ಶಿಕ್ಷಕರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆ. ಶಿಕ್ಷಕರಿಗೆ ಗೌರವ ನೀಡದಂತೆ ಮಕ್ಕಳಿಗೆ ಸೂಚಿಸಿದ್ದಾರೆ.  ತಾನು ಹೇಳಿದಂತೆ ಕೇಳಬೇಕು ಎಂದು ಮಕ್ಕಳನ್ನು ಮನಬಂದಂತೆ ಥಳಿಸಿದ್ದಾರೆ. ಶಿಕ್ಷಕರನ್ನ ಕ್ಯಾನ್ಸರ್ ಗಡ್ಡೆಗಳು ಎಂದು ಮಕ್ಕಳಿಗೆ ಹೇಳಿದ್ದಾರೆ.

ಇದನ್ನೂ ಓದಿ: ಕೋಟಿ ಕೋಟಿ ಬೆಲೆಬಾಳುವ ಜಾಗದಲ್ಲಿ ವೀರಶೈವರಿಗೆ ‌ರುದ್ರಭೂಮಿ: ನಾಮ ಫಲಕ ತೆರವುಗೊಳಿಸಿದ ಬಿಡಿಎ

ಈ ಬಗ್ಗೆ ಬಿಇಓಗೆ ಶಿಕ್ಷಕರು ದೂರು‌ ನೀಡಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಬಾಲರಾಜು ವಿರುದ್ಧ ಕ್ರಮಕ್ಕೆ ದೂರು ನೀಡಲಾಗಿದ್ದು, ಸದ್ಯ ಇಗ್ಗಲೂರು ಶಾಲಾ ಶಿಕ್ಷಕರು ಭಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುದ್ದಿ ಮಾಡಲು ಹೋದ ಮಾಧ್ಯಮದವರ ಮೇಲೂ ಬಾಲರಾಜು ಮತ್ತು ಕುಟುಂಬಸ್ಥರಿಂದ ಆವಾಜ್​ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!