Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಆಪರೇಷನ್ ಗೀ ಆರಂಭ!

ನಿನ್ನೆಯಷ್ಟೇ ವಿವಿಧ ಬಗೆಯ ತುಪ್ಪದ ಗುಣಮಟ್ಟ ಪರೀಕ್ಷೆ ಮಾಡಲು ಆಹಾರ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದರು. ಆದೇಶದ ಬೆನ್ನಲೇ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ.‌ ಬೆಂಗಳೂರಿನ ಮಲ್ಲೇಶ್ವರ, ಯಲಹಂಕ, ದಾಸರಹಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಇಂದು ಆಹಾರ ಇಲಾಖೆಯ ತಂಡ ವಿವಿಧ ಮಾದರಿಯನ್ನ ಸಂಗ್ರಹಿಸಲಾಗಿದೆ.

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಆಪರೇಷನ್ ಗೀ ಆರಂಭ!
ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಆಪರೇಷನ್ ಗೀ ಆರಂಭ!
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Sep 23, 2024 | 8:43 PM

ಬೆಂಗಳೂರು, ಸೆಪ್ಟೆಂಬರ್​ 23: ತಿಮ್ಮಪ್ಪ ಪ್ರಸಾದದ ವಿವಾದದ (Tirupati Laddoo controversy) ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ಕೂಡ ವಿವಿಧ ಬ್ರಾಂಡ್‌ಗಳ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. ಇವರ ಆದೇಶದಂತೆ ಇದೀಗ ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ. ತುಪ್ಪದ ಮಾದರಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ. ಮುಂದೆ ಓದಿ.

ಆಹಾರ ಇಲಾಖೆಯಿಂದ ಆಪರೇಷನ್ ಗೀ ಆರಂಭ!

ನಿನ್ನೆಯಷ್ಟೇ ವಿವಿಧ ಬಗೆಯ ತುಪ್ಪದ ಗುಣಮಟ್ಟ ಪರೀಕ್ಷೆ ಮಾಡಲು ಆಹಾರ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದರು. ಆದೇಶದ ಬೆನ್ನಲೇ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ.‌ ರಾಜ್ಯಕ್ಕೆ ಎಲ್ಲೆಲ್ಲಿಂದ ತುಪ್ಪಗಳು ಬರುತ್ತಿದೆ, ಹೇಗೆಲ್ಲಾ ಅವುಗಳನ್ನ ಮಾರಾಟ ಮಾಡಲಾಗುತ್ತಿದೆ ಹಾಗೂ ತುಪ್ಪದ ಮಾರಾಟದ ಅಂಗಡಿಗಳ ಮೇಲೆ ಕಣ್ಣಿಟ್ಟಿದೆ. ಈ ಹಿನ್ನೆಲೆ ಇಂದಿನಿಂದ ಆಪರೇಷನ್ ಗೀ, ಶುರುವಾಗಿದೆ.

ಏನಿದು ಆಪರೇಷನ್ ಗೀ?

  • ಆಹಾರ ಇಲಾಖೆಯಿಂದ ತುಪ್ಪದ ಗುಣಮಟ್ಟ ತಿಳಿಯಲು ಮುಂದು.
  • ವಯಲವಾರು ಅಧಿಕಾರಿಗಳ ತಂಡ ರಚನೆ
  • ದೇವಾಲಯ ಹಾಗೂ ತುಪ್ಪದ ಸಂಗ್ರಹಕ್ಕೆ ಪ್ರತ್ಯೇಕ ತಂಡ ರಚನೆ
  • ಅಂಕಿತಾಧಿಕಾರಿ ಸಮ್ಮುಖದಲ್ಲಿ ತುಪ್ಪದ ಸ್ಯಾಂಪಲ್ಸ್ ಸಂಗ್ರಹ
  • ರ್ಯಾಂಡಮ್​ನಲ್ಲಿ 250- 300 ತುಪ್ಪದ ಮಾದರಿ ಸಂಗ್ರಹ
  • ಹೆಚ್ಚು ಕೊಬ್ಬಿನ ಅಂಶ ಇರುವುದರ ಬಗ್ಗೆ ಪ್ರಯೋಗಾಲಯದಲ್ಲಿ ಎಲ್ಲಾ ತುಪ್ಪದ ಪರೀಕ್ಷೆ
  • ಕಲಬೆರಕೆ ಇರುವ ತುಪ್ಪದ ಬ್ರಾಂಡ್‌ ಬ್ಲಾಕ್ ಲಿಸ್ಟ್ ಮಾಡಲು ಮುಂದು

ಇನ್ನು ಈಗಾಗಲೇ ಅಧಿಕಾರಿಗಳು ಫೀಲ್ಡಿಗಿಳಿದು ತುಪ್ಪದ ಸಂಗ್ರಹಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರ, ಯಲಹಂಕ, ದಾಸರಹಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಇಂದು ಆಹಾರ ಇಲಾಖೆಯ ತಂಡ ವಿವಿಧ ಮಾದರಿಯನ್ನ ಸಂಗ್ರಹಿಸಲಾಗಿದೆ. ಜೊತೆಗೆ ನಾಳೆಯೂ ಕೂಡ ತುಪ್ಪದ ಮಾದರಿ ಸಂಗ್ರಹ ಮಾಡಲಿದ್ದಾರೆ. ಈ‌ ಹಿಂದೆಯೂ ಒಮ್ಮೆ ಪರೀಕ್ಷೆ ಮಾಡಿದ್ದಾಗ ತುಪ್ಪದಲ್ಲಿ‌ ಹೆಚ್ಚು ಕೊಬ್ಬಿನ‌ ಅಂಶ ಕಂಡು ಬಂದಿತ್ತು. ಇದೀಗ ಮತ್ತೆ ಈ ರೀತಿಯಾದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇದನ್ನೂ ಓದಿ: ಲಡ್ಡು ವಿವಾದ ಬೆನ್ನಲ್ಲೇ ನಂದಿನಿ ತುಪ್ಪ ಹೊತ್ತು ತಿರುಪತಿಗೆ ಹೋಗುವ ಟ್ಯಾಂಕರ್​ಗಳಿಗೆ ಜಿಪಿಎಸ್ ಅಳವಡಿಕೆ

ಒಟ್ಟಿನಲ್ಲಿ ಆಂಧ್ರದ ಬಳಿಕ ರಾಜ್ಯದಲ್ಲೂ ಕೂಡ ತುಪ್ಪದ ಬಗ್ಗೆ ಮುಂಜಾಗೃತೆ ವಹಿಸಲಾಗುತ್ತಿದ್ದು, 10 ದಿನದಲ್ಲಿ ತುಪ್ಪದ ವರದಿ ಬರಲಿದೆ. ಈ ಹಿನ್ನೆಲೆ ಇದರಲ್ಲಿ ಏನೆಲ್ಲಾ ಅಂಶಗಳು ಪತ್ತೆಯಾಗಲಿದೆ ಅಂತ ಕಾದುನೋಡ್ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ