AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Laddu: ಇನ್ನುಮುಂದೆ ತಿರುಪತಿ ಲಡ್ಡುವಿನಲ್ಲಿ ಇರುವುದಿಲ್ಲ ನಂದಿನಿ ತುಪ್ಪದ ಘಮ

ತಿರುಪತಿ ತಿಮ್ಮಪ್ಪನಿಗೂ ಕೆಎಂಎಫ್​ಗೂ ಅವಿನಾಭಾವ ಸಂಬಂಧವಿದೆ, ಕಳೆದ 50 ವರ್ಷಗಳಿಂದ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಹಾಗೂ ಅದರ ರುಚಿಗೋಸ್ಕರ ನಂದಿನಿ ತಪ್ಪವನ್ನೇ ಬಳಕೆ ಮಾಡಲಾಗುತ್ತಿತ್ತು, ಆದರೆ ಇನ್ನುಮುಂದೆ ನಂದಿನಿ ತುಪ್ಪದಿಂದ ಮಾಡಿದ ಲಡ್ಡು ಸಿಗುವುದಿಲ್ಲ.

Tirupati Laddu: ಇನ್ನುಮುಂದೆ ತಿರುಪತಿ ಲಡ್ಡುವಿನಲ್ಲಿ ಇರುವುದಿಲ್ಲ ನಂದಿನಿ ತುಪ್ಪದ ಘಮ
ಲಡ್ಡು, ನಂದಿನಿ ತುಪ್ಪ
ನಯನಾ ರಾಜೀವ್
|

Updated on:Jul 31, 2023 | 9:51 AM

Share

ತಿರುಪತಿ ತಿಮ್ಮಪ್ಪನಿಗೂ ಕೆಎಂಎಫ್​ಗೂ ಅವಿನಾಭಾವ ಸಂಬಂಧವಿದೆ, ಕಳೆದ 50 ವರ್ಷಗಳಿಂದ ತಿಮ್ಮಪ್ಪನ ಲಡ್ಡು(Laddu) ತಯಾರಿಕೆಗೆ ಹಾಗೂ ಅದರ ರುಚಿಗೋಸ್ಕರ ನಂದಿನಿ ತಪ್ಪವನ್ನೇ ಬಳಕೆ ಮಾಡಲಾಗುತ್ತಿತ್ತು, ಆದರೆ ಇನ್ನುಮುಂದೆ ನಂದಿನಿ ತುಪ್ಪದಿಂದ ಮಾಡಿದ ಲಡ್ಡು ಸಿಗುವುದಿಲ್ಲ. ಮುಂಬರುವ ದಿನಗಳಲ್ಲಿ ತಿರುಪತಿ ಲಡ್ಡು ಪ್ರಸಾದದಲ್ಲಿ ನಂದಿನಿ ತುಪ್ಪ ಇರುವುದಿಲ್ಲ, ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿಮ್ಮಪ್ಪ ಹಾಗೂ ನಂದಿನಿ ಸಂಬಂಧ ಕಡಿತಗೊಂಡಿದೆ.

ಇಷ್ಟು ದಿನ ತಿರುಪತಿ ಲಡ್ಡು ತಯಾರಿಕೆಗಾಗಿ ಸರಬರಾಜು ಆಗುತ್ತಿದ್ದ ತುಪ್ಪವನ್ನು ಇನ್ನುಮುಂದೆ ಕಳುಹಿಸಿಕೊಡಲಾಗುವುದಿಲ್ಲ ಎಂದು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯಕ್ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: Tirupati Laddu History: ತಿರುಪತಿ ಲಡ್ಡುವನ್ನು ಹೇಗೆ ತಯಾರು ಮಾಡುತ್ತಾರೆ? ಇತಿಹಾಸವೇನು? ಕುತೂಹಲಕಾರಿ ಸಂಗತಿ ಇಲ್ಲಿದೆ

ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪ ನೀಡಬೇಕು, ಇಷ್ಟು ದೇವಸ್ಥಾನಕ್ಕೆಂದು ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಈ ಸಲ ಕೆಎಂಎಫ್ ರಿಯಾಯಿತಿ ದರದಲ್ಲಿ ನಂದಿನಿ ತುಪ್ಪ ನೀಡುವ ಟೆಂಡರ್​ ಅನ್ನು ಕೈಬಿಟ್ಟಿದೆ, ಕಡಿಮೆ ಬೆಲೆಗೆ ತುಪ್ಪ ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಕರ್ನಾಟಕದಲ್ಲಿ ಹಾಲಿನ ಕೊರತೆ ತಲೆದೂರಿದೆ, ಹೀಗಾಗಿ ಅದರ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವುದು ನಮಗೂ ಕೂಡ ಅನಿವಾರ್ಯ, ಹೀಗಾಗಿ ನಂದಿನಿ ತುಪ್ಪದ ಬೆಲೆಯನ್ನು ಕೂಡ ಹೆಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಡಿಮೆ ಬೆಲೆಗೆ ನಂದಿನಿ ತುಪ್ಪ ಮಾರಾಟ ಮಾಡದಿರಲು ಕೆಎಂಎಫ್​ ನಿರ್ಧರಿಸಿದೆ.

ಆಗಸ್ಟ್ 1 ರಿಂದ ಹಾಲು ಬೆಲೆ ಹೆಚ್ಚಾಗುವುದರಿಂದ ನಾವು ತುಪ್ಪಕ್ಕೆ ಹೆಚ್ಚಿನ ಬೆಲೆಗೆ ಬೇಡಿಕೆ ಇಟ್ಟಿದ್ದೇವೆ. ಗುಣಮಟ್ಟದಿಂದಾಗಿ ಕೆಎಂಎಫ್​ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಹೊಂದಿದೆ. ಯಾವುದೇ ಕಂಪನಿ ಕಡಿಮೆ ಬೆಲೆಗೆ ಬಿಡ್ ಮಾಡಿದರೆ ಅವರು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುತ್ತಾರೆ, ಲಡ್ಡುಗಳಿಗೆ ರುಚಿ ನೀಡುವಲ್ಲಿ ನಂದಿನಿ ತುಪ್ಪದ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Mon, 31 July 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ