Tirupati Laddu: ಇನ್ನುಮುಂದೆ ತಿರುಪತಿ ಲಡ್ಡುವಿನಲ್ಲಿ ಇರುವುದಿಲ್ಲ ನಂದಿನಿ ತುಪ್ಪದ ಘಮ

ತಿರುಪತಿ ತಿಮ್ಮಪ್ಪನಿಗೂ ಕೆಎಂಎಫ್​ಗೂ ಅವಿನಾಭಾವ ಸಂಬಂಧವಿದೆ, ಕಳೆದ 50 ವರ್ಷಗಳಿಂದ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಹಾಗೂ ಅದರ ರುಚಿಗೋಸ್ಕರ ನಂದಿನಿ ತಪ್ಪವನ್ನೇ ಬಳಕೆ ಮಾಡಲಾಗುತ್ತಿತ್ತು, ಆದರೆ ಇನ್ನುಮುಂದೆ ನಂದಿನಿ ತುಪ್ಪದಿಂದ ಮಾಡಿದ ಲಡ್ಡು ಸಿಗುವುದಿಲ್ಲ.

Tirupati Laddu: ಇನ್ನುಮುಂದೆ ತಿರುಪತಿ ಲಡ್ಡುವಿನಲ್ಲಿ ಇರುವುದಿಲ್ಲ ನಂದಿನಿ ತುಪ್ಪದ ಘಮ
ಲಡ್ಡು, ನಂದಿನಿ ತುಪ್ಪ
Follow us
|

Updated on:Jul 31, 2023 | 9:51 AM

ತಿರುಪತಿ ತಿಮ್ಮಪ್ಪನಿಗೂ ಕೆಎಂಎಫ್​ಗೂ ಅವಿನಾಭಾವ ಸಂಬಂಧವಿದೆ, ಕಳೆದ 50 ವರ್ಷಗಳಿಂದ ತಿಮ್ಮಪ್ಪನ ಲಡ್ಡು(Laddu) ತಯಾರಿಕೆಗೆ ಹಾಗೂ ಅದರ ರುಚಿಗೋಸ್ಕರ ನಂದಿನಿ ತಪ್ಪವನ್ನೇ ಬಳಕೆ ಮಾಡಲಾಗುತ್ತಿತ್ತು, ಆದರೆ ಇನ್ನುಮುಂದೆ ನಂದಿನಿ ತುಪ್ಪದಿಂದ ಮಾಡಿದ ಲಡ್ಡು ಸಿಗುವುದಿಲ್ಲ. ಮುಂಬರುವ ದಿನಗಳಲ್ಲಿ ತಿರುಪತಿ ಲಡ್ಡು ಪ್ರಸಾದದಲ್ಲಿ ನಂದಿನಿ ತುಪ್ಪ ಇರುವುದಿಲ್ಲ, ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿಮ್ಮಪ್ಪ ಹಾಗೂ ನಂದಿನಿ ಸಂಬಂಧ ಕಡಿತಗೊಂಡಿದೆ.

ಇಷ್ಟು ದಿನ ತಿರುಪತಿ ಲಡ್ಡು ತಯಾರಿಕೆಗಾಗಿ ಸರಬರಾಜು ಆಗುತ್ತಿದ್ದ ತುಪ್ಪವನ್ನು ಇನ್ನುಮುಂದೆ ಕಳುಹಿಸಿಕೊಡಲಾಗುವುದಿಲ್ಲ ಎಂದು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯಕ್ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: Tirupati Laddu History: ತಿರುಪತಿ ಲಡ್ಡುವನ್ನು ಹೇಗೆ ತಯಾರು ಮಾಡುತ್ತಾರೆ? ಇತಿಹಾಸವೇನು? ಕುತೂಹಲಕಾರಿ ಸಂಗತಿ ಇಲ್ಲಿದೆ

ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪ ನೀಡಬೇಕು, ಇಷ್ಟು ದೇವಸ್ಥಾನಕ್ಕೆಂದು ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಈ ಸಲ ಕೆಎಂಎಫ್ ರಿಯಾಯಿತಿ ದರದಲ್ಲಿ ನಂದಿನಿ ತುಪ್ಪ ನೀಡುವ ಟೆಂಡರ್​ ಅನ್ನು ಕೈಬಿಟ್ಟಿದೆ, ಕಡಿಮೆ ಬೆಲೆಗೆ ತುಪ್ಪ ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಕರ್ನಾಟಕದಲ್ಲಿ ಹಾಲಿನ ಕೊರತೆ ತಲೆದೂರಿದೆ, ಹೀಗಾಗಿ ಅದರ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವುದು ನಮಗೂ ಕೂಡ ಅನಿವಾರ್ಯ, ಹೀಗಾಗಿ ನಂದಿನಿ ತುಪ್ಪದ ಬೆಲೆಯನ್ನು ಕೂಡ ಹೆಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಡಿಮೆ ಬೆಲೆಗೆ ನಂದಿನಿ ತುಪ್ಪ ಮಾರಾಟ ಮಾಡದಿರಲು ಕೆಎಂಎಫ್​ ನಿರ್ಧರಿಸಿದೆ.

ಆಗಸ್ಟ್ 1 ರಿಂದ ಹಾಲು ಬೆಲೆ ಹೆಚ್ಚಾಗುವುದರಿಂದ ನಾವು ತುಪ್ಪಕ್ಕೆ ಹೆಚ್ಚಿನ ಬೆಲೆಗೆ ಬೇಡಿಕೆ ಇಟ್ಟಿದ್ದೇವೆ. ಗುಣಮಟ್ಟದಿಂದಾಗಿ ಕೆಎಂಎಫ್​ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಹೊಂದಿದೆ. ಯಾವುದೇ ಕಂಪನಿ ಕಡಿಮೆ ಬೆಲೆಗೆ ಬಿಡ್ ಮಾಡಿದರೆ ಅವರು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುತ್ತಾರೆ, ಲಡ್ಡುಗಳಿಗೆ ರುಚಿ ನೀಡುವಲ್ಲಿ ನಂದಿನಿ ತುಪ್ಪದ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Mon, 31 July 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!